nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಕ್ರಮ: ದೇಶದಲ್ಲೇ ಮೊದಲ ಬಾರಿಗೆ ಆರೈಕೆದಾರರಿಗೆ ಮಾಸಾಶನ ನೀಡಿಕೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 3, 2024

    ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಕ್ರಮ: ದೇಶದಲ್ಲೇ ಮೊದಲ ಬಾರಿಗೆ ಆರೈಕೆದಾರರಿಗೆ ಮಾಸಾಶನ ನೀಡಿಕೆ: ಸಿಎಂ ಸಿದ್ದರಾಮಯ್ಯ

    By adminDecember 3, 2024No Comments2 Mins Read
    d k shivakumar

    ಬೆಂಗಳೂರು: ವಿಕಲಚೇತನರಿಗೆ ಸಹಾಯ ಮಾಡುವುದರಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ; ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಎಲ್ಲರಿಗೂ ಎಲ್ಲ ರೀತಿಯ ಅನುಕೂಲ ಕಲ್ಪಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದ ಕಂಠೀರವ ಒಳಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ– 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಆರೈಕೆದಾರರಿಗೆ ಮಾಸಾಶನ ದೇಶದಲ್ಲೇ ಮೊದಲು:

    ವಿಕಲಚೇತನರು ಸಮಾಜದಲ್ಲಿ ಎಂದೂ ಶಕ್ತಿಹೀನರಲ್ಲ, ಶಕ್ತಿವಂತರು. ವಿಕಲಚೇತನರ ಬಗ್ಗೆ ಅಷ್ಟೆ ಅಲ್ಲ. ಅವರನ್ನು ನೋಡಿಕೊಳ್ಳುವ ಆರೈಕೆದಾರರ ಬಗ್ಗೆಯೂ ಸರ್ಕಾರ ವಿಶೇಷ ಕಾಳಜಿ ಹೊಂದಿದೆ. ಆರೈಕೆದಾರರಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡಲು ತೀರ್ಮಾನಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ವಿಕಲಚೇತನರ ಆರೈಕೆದಾರರಿಗೆ ಮಾಸಾಸನ ನೀಡಿದ ಹೆಗ್ಗಳಿಕೆ ಹೊಂದಿದೆ ಎಂದರು.

    ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತರಿದ್ದಾರೆ, ಅವರನ್ನು ನೋಡಿಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಹಕ್ಕು ಇದೆ. ಅದರಂತೆ ಎಲ್ಲಾ ಕ್ಷೇತ್ರದಲ್ಲಿ ವಿಕಲಚೇತನರು ಭಾಗವಹಿಸುವ , ಉದ್ಯೋಗ ಪಡೆಯುವುದಕ್ಕೆ ಸಂವಿಧಾನಬದ್ಧ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

    ಸಮಾಜಕ್ಕೆ ದೊಡ್ಡ ಆಸ್ತಿ:

    ವಿಕಲಚೇತನರು ಸಮಾಜಕ್ಕೆ ಎಂದೂ ಹೊರೆಯಲ್ಲ; ಅವರೆಲ್ಲರೂ ಸಮಾಜದ ಆಸ್ತಿ. ಎಲ್ಲ ಕ್ಷೇತ್ರಗಳಲ್ಳೂ ಸಾಧನೆ ಮಾಡುತ್ತಿದ್ದಾರೆ. ಯಾವ ಕ್ಷೇತ್ರದಲ್ಲೂ ಹಿಂದೆ ಬಿದ್ದಿಲ್ಲ. ಇತ್ತೀಚೆಗೆ ನಡೆದ ಒಲಂಪಿಕ್ ಕ್ರೀಡಾಕೂಟಕ್ಕಿಂತ ಹೆಚ್ಚು ಪದಕಗಳನ್ನು ಬಂದಿದ್ದು ಪ್ಯಾರಾ ಒಲಂಪಿಕ್ ನಲ್ಲಿ. ಎಂದೂ ಅವರನ್ನು ಅಶಕ್ತರು, ಶಕ್ತಿಹೀನರೆಂದು ಹೇಳುವುದಕ್ಕೆ ಆಗುವುದಿಲ್ಲ. ಸಮಾಜಕ್ಕೂ ಎಂದೂ ಭಾರವಲ್ಲ; ಯಾವುದೇ ಹುದ್ದೆಗೂ ಅನರ್ಹರಲ್ಲ.

    ಅನುದಾನ ಖೋತಾ ಇಲ್ಲ:

    ವಿಕಲಚೇತನರ ಉದ್ಯೋಗಾವಕಾಶಕ್ಕಾಗಿ ಸಮಿತಿಯನ್ನು ರಚನೆ ಮಾಡಲಾಗಿದೆ. ಬಜೆಟ್ ನಲ್ಲಿ ವಿಕಲಚೇತನರ ಅಭ್ಯುದಯಕ್ಕಾಗಿ 64 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ಆ ಅನುದಾನವನ್ನು ಯಾವುದೇ ಕಾರಣಕ್ಕೂ ಖೋತಾ ಮಾಡುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

    ಮರಣ ಪರಿಹಾರ ನಿಧಿ ಹೆಚ್ಚಳ:

    ಪ್ರಸಕ್ತ ಸಾಲಿನಲ್ಲಿ ಬುದ್ಧಿಮಾಂಧ್ಯ ಮತ್ತು ಶ್ರವಣದೋಷವುಳ್ಳರಿಗೆ ಹೊಸದಾಗಿ ವಸತಿ ಶಾಲೆಗಳನ್ನು ಆರಂಭಿಸಲಾಗಿದೆ. ಈ ವರ್ಷ 13 ವಸತಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲಾಗಿದೆ. ವಿಕಲಚೇತನರ ಮರಣ ಪರಿಹಾರ ನಿಧಿಯನ್ನು 50 ಸಾವಿರದಿಂದ 1 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದರು.

    ವಿಕಲಚೇತನರಿಗೆ ಇಲಾಖೆಯ ಮೂಲಕ ಸಹಾಯಧನ ನೀಡಲಾಗುತ್ತಿದೆ. ಶೇ.40ರಷ್ಟು ಅಂಗವೈಕಲತೆ ಹೊಂದಿರುವವರಿಗೆ ವಿಕಲಚೇತನರಿಗೆ ತಿಂಗಳಿಗೆ 800 ರೂಪಾಯಿ, ಶೇ. 75ಕ್ಕಿಂತ ಹೆಚ್ಚಿರುವವರಿಗೆ ಒಂದು ಸಾವಿರದ 400 ರೂಪಾಯಿ ಸಹಾಯ ಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ವಿಕಲಚೇತರಿಗೆ ಬರೀ 800 ರೂಪಾಯಿ ಸಹಾಯ ಧನ ನೀಡಲಾಗುತ್ತಿದೆ. ಅದನ್ನು ಹೆಚ್ಚಳ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿಯವರು ಇದೇ ವೇಳೆ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವುದನ್ನು ಖಂಡಿಸಿ ಸರಗೂರು ಪಟ್ಟಣದ ಪ್ರವಾಸಿ…

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.