nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಡಿಕಲ್ ಸೀಟು ಹಂಚಿಕೆಯಲ್ಲಿ ಒಬಿಸಿ ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ
    ರಾಷ್ಟ್ರೀಯ ಸುದ್ದಿ January 21, 2022

    ಮೆಡಿಕಲ್ ಸೀಟು ಹಂಚಿಕೆಯಲ್ಲಿ ಒಬಿಸಿ ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ

    By adminJanuary 21, 2022No Comments2 Mins Read
    medical

    ಪ್ರಸಕ್ತ ಸಾಲಿನ ವೈದ್ಯಕೀಯ ಶಿಕ್ಷಣ ಪ್ರವೇಶದ ವೇಳೆ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು, ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಶೇ.10ರಷ್ಟು ಮೀಸಲಾತಿ ಪಾಲನೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.ರಾಜ್ಯ ಸರ್ಕಾರಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ, ಜನವರಿ 7ರಂದು ನೀಡಲಾದ ಆದೇಶವನ್ನು ಎತ್ತಿ ಹಿಡಿದಿದೆ.

    2021-22ರ ಎನ್‍ಇಇಟಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿಯನ್ನು ಅನುಮತಿಸುವ ಕೇಂದ್ರ ಸರ್ಕಾರದ ನಿರ್ಧಾರ ಸಾಂವಿಧಾನ ಬದ್ಧವಾಗಿದೆ ಎಂದು ಅಕೃತ ಮುದ್ರೆ ಒತ್ತಿದೆ.ಹೆಚ್ಚಿನ ಅಂಕಗಳು ಅರ್ಹತೆಯ ಏಕೈಕ ಮಾನದಂಡವಲ್ಲ . ಜೇಷ್ಠತೆ ಪರಿಗಣನೆಯ ವೇಳೆ ಸಾಮಾಜಿಕ ಮತ್ತು ಆರ್ಥಿಕ ಹಿನ್ನೆಲೆಯನ್ನು ಸಂದರ್ಭೋಚಿತವಾಗಿ ಗಣನೆಗೆ ತೆಗೆದುಕೊಳ್ಳಬೇಕು. ದುಳಿದಿರುವಿಕೆಯನ್ನು ನಿವಾರಿಸುವಲ್ಲಿ ಮೀಸಲಾತಿಯ ಪಾತ್ರವನ್ನು ನಿರಾಕರಿಸಲಾಗುವುದಿಲ್ಲ. ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ, ಬದಲಾಗಿ ಸಾಮಾಜಿಕ ನ್ಯಾಯದ ಪರಿಣಾಮಗಳನ್ನು ಹೆಚ್ಚಿಸುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ.ಎಂಟು ಲಕ್ಷ ವಾರ್ಷಿಕ ಆದಾಯ ಹೊಂದಿರುವವ ಆರ್ಥಿಕ ದುರ್ಬಲ ವರ್ಗದವರು ಈ ಬಾರಿ ಎನ್‍ಇಇಟಿ-ಸ್ನಾತಕೋತ್ತರ ಪ್ರವೇಶಕ್ಕೆ ಮೀಸಲಾತಿಯಡಿ ಅರ್ಹರಾಗಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ.ವೈದ್ಯಕೀಯ ಶಿಕ್ಷಣ ಕೋರ್ಸ್‍ನ ಪ್ರವೇಶದ ಈ ಹಂತದಲ್ಲಿ ನ್ಯಾಯಾಂಗದ ಹಸ್ತಕ್ಷೇಪವು ಪ್ರವೇಶಾತಿಯನ್ನು ವಿಳಂಬಗೊಳಿಸುತ್ತದೆ. ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯದಲ್ಲಿರುವ ಸಂದರ್ಭದಲ್ಲಿ ನ್ಯಾಯಾಲಯದ ವೈದ್ಯಕೀಯ ಕೋರ್ಸ್‍ಗೆ ತಡೆ ನೀಡಿದರೆ, ವೈದ್ಯರ ಕೊರತೆಯಾಗಲಿದೆ, ಕೋವಿಡ್ ಹೆದರಿಸಲು ಇದರಿಂದ ಹಿನ್ನೆಡೆಯಾಗಲಿದೆ. ಆದ್ದರಿಂದ 2021-22 ಸಾಲಿನ ಮೀಸಲಾತಿ ಮಾನದಂಡಗಳ ಕುರಿತು ಯಾವುದೇ ತಡೆ ನೀಡುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.


    Provided by
    Provided by

    ರಾಜಕೀಯ ಪಕ್ಷಗಳ ಜೊತೆ ಸಮಾಲೋಚನೆ ನಡೆಸದೆ ಮತ್ತು ಬಡವರು ಹಾಗೂ ಕಡುಬಡವರ ಮೀಸಲಾತಿ ನಿರ್ಧರಣೆಯ ಪುರಾವೆಗಳನ್ನು ಪರಿಗಣಿಸದೆ ಶೈಕ್ಷಣಿಕ ಮೀಸಲಾತಿ ಅರ್ಹತೆ ಕುರಿತು ಏಕಾಏಕಿ ತೀರ್ಪು ಪ್ರಕಟಿಸಲು ಸಾಧ್ಯವಿಲ್ಲ ಎಂದು ನ್ಯಾಯಾ ಪೀಠ ಹೇಳಿದೆ.ಸಂವಿಧಾನದ ಕಲಂ 15 (ಎ), 15 (5) ವಸ್ತು ನಿಷ್ಠ ಸಮಾನತೆಗೆ ಕರೆ ನೀಡುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳು ವ್ಯಕ್ತಿಗಳ ಶ್ರೇಷ್ಠತೆ ಮತ್ತು ಸಾಮಾಥ್ರ್ಯಗಳನ್ನು ಪ್ರತಿಬಿಂಬಿಸುವುದಿಲ್ಲ. ಕೆಲ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕøತಿಕ ಅನೂಕಲಗಳನ್ನು ಪ್ರತಿಫಲಿಸುತ್ತದೆ.ಪರೀಕ್ಷೆ ಮುಗಿಯುವವರೆಗೆ ಮೀಸಲಾತಿ ಮತ್ತು ಸೀಟುಗಳ ಸಂಖ್ಯೆಯನ್ನು ಬಹಿರಂಗಪಡಿಸದ ಕಾರಣ, ಸೀಟುಗಳ ಸಂಖ್ಯೆ ಬದಲಾಯಿಸಲಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

    ಆರ್ಥಿಕ ಹಿಂದುಳಿಯುವಿಕೆ ಮೀಸಲಾತಿ ಮತ್ತು ಅರ್ಹತಾ ಸ್ಥಿತಿಯ ಸಿಂಧುತ್ವ ಸುಪ್ರೀಂ ಕೋರ್ಟ್ ವಿಷಯವನ್ನು ಮಾರ್ಚ್ ಮೂರನೇ ವಾರದಲ್ಲಿ ವಿಚಾರಣೆ ನಡೆಸುವವರೆಗೂ ಅಸ್ತಿತ್ವದಲ್ಲಿರಲಿದೆ. 2021-22ನೆ ಸಾಲಿನಲ್ಲಿ ಎನ್‍ಇಇಟಿ ಪ್ರವೇಶಕ್ಕೆ ಹಿಂದುಳಿದ ವರ್ಗಗಳಿಗೆ ಶೇ.27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಸೀಟುಗಳನ್ನು ಮೀಸಲಿಡಲು ಜನವರಿ 7ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

    ಈ ತೀರ್ಪನ್ನು ಕೇಂದ್ರ ಸರ್ಕಾರದ ಅಖಿಲ ಭಾರತ ವೈದ್ಯಕೀಯ ಸೀಟುಗಳ ಹಂಚಿಕೆಯ ಖೋಟಾದ ಮೇಲೆ ಪರಿಣಾಮ ಬೀರಲಿದೆ ಎಂದು ರಾಜ್ಯ ಮೆಡಿಕಲ್ ಕಾಲೇಜುಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು.ಇಂದು ವಿವರವಾದ ತೀರ್ಪನ್ನು ಪ್ರಕಟಿಸಲಾಗಿದ್ದು, ಮೀಸಲಾತಿಯನ್ನು ಎತ್ತಿ ಹಿಡಿಯುವ ಜೊತೆಗೆ ರಾಜ್ಯ ಸರ್ಕಾರಗಳು ನಡೆಸುವ ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಹಂಚಿಕೆಗಾಗಿ ರೂಪಿಸಲಾದ ವ್ಯವಸ್ಥೆಯನ್ನು ಬೆಂಬಲಿಸಿದೆ.

    ಕೇಂದ್ರ ಸರ್ಕಾರ ಸೀಟು ಹಂಚಿಕೆಗೂ ಮುನ್ನಾ ಮತ್ತೊಮ್ಮೆ ಈ ನ್ಯಾಯಾಲಯದ ಆದೇಶವನ್ನು ಕಾಯಬೇಕಿಲ್ಲ. ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸಾಂವಿಧಾನಾತ್ಮಕವಾಗಿ ಸರಿ ಇದೆ. ಅದನ್ನೆ ಮುಂದುವರೆಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

    ವರದಿ: ಆಂಟೋನಿ ಬೇಗೂರು

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ…

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.