ತುಮಕೂರು: ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ರಾಜ್ಯದಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ರವರಿಗೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಭೇಟಿ ಮಾಡಿದ ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸಾಗಲು ಸಹಕರಿಸಿದ ಜಿಲ್ಲಾಧಿಕಾರಿಗಳಿಗೆ ಗುಲಾಬಿಯನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಏಕಾಏಕಿ ಯುದ್ಧದಿಂದ ಸ್ವದೇಶಕ್ಕೆ ಆಗಮಿಸಿದ್ದು, ಈಗ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಹಾಗಾಗಿ ನಮ್ಮ ವೈದ್ಯಕೀಯ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ನಮ್ಮ ರಾಜ್ಯದಲ್ಲಿಯೇ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅಗತ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ರೂಪಶ್ರೀ, ಅಮೃತ, ಅಜಯ್ ಕುಮಾರ್, ಗಣೇಶ್, ಗೋಕುಲ್, ಮೇಘ ರವಿತೇಜ, ರಾಮಚಂದ್ರ ಸೇರಿದಂತೆ ಹಲವು ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.
ವರದಿ: ಮಾರುತಿ ಪ್ರಸಾದ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy