nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೀಸಲಾತಿ ಹೊರತಾಗಿ ಚುನಾವಣೆ ನಡೆಸಲು ಸರ್ಕಾರ ಸಂಚು : ಸಿದ್ದರಾಮಯ್ಯ
    ರಾಜ್ಯ ಸುದ್ದಿ June 3, 2022

    ಮೀಸಲಾತಿ ಹೊರತಾಗಿ ಚುನಾವಣೆ ನಡೆಸಲು ಸರ್ಕಾರ ಸಂಚು : ಸಿದ್ದರಾಮಯ್ಯ

    By adminJune 3, 2022No Comments2 Mins Read
    siddaramaya

    ಬಿಬಿಎಂಪಿ, ತಾಪಂ ಹಾಗೂ ಜಿಪಂಗೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ಹೊರತಾಗಿ ರಾಜ್ಯ ಸರ್ಕಾರ ಚುನಾವಣೆ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

    ನಗರದ ಹೊರ ವಲಯದಲ್ಲಿ ನಡೆದ ನವಸಂಕಲ್ಪ ಶಿಬಿರದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪನ್ನು ಆಧರಿಸಿ ಈಗ ತರಾತುರಿಯಲ್ಲಿ ಚುನಾವಣೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯ ಸರ್ಕಾರಕ್ಕೆ ಈ ಚುನಾವಣೆಯನ್ನು ನಡೆಸಲಾಗಲೀ ಅಥವಾ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡುವುದಾಗಲಿ ಇಷ್ಟವಿಲ್ಲ ಎಂದರು.

    2023ರ ಏಪ್ರಿಲ್ ಅಥವಾ ಮೇಗೆ ವಿಧಾನಸಭಾ ಚುನಾವಣೆ ಬರುತ್ತದೆ. ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ. ಆದ್ದರಿಂದ ನಾವು ಈ ಸವಾಲನ್ನು ಸ್ವೀಕಾರ ಮಾಡಬೇಕು. ಇವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ.


    Provided by
    Provided by

    ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಇಂದು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಆತಂಕದಲ್ಲಿ ಬದುಕುವಂತಾಗಿದೆ. ಚರ್ಚ್, ಮಸೀದಿಗಳ ಮೇಲೆ ದಾಳಿ, ಹಿಂದುಗಳನ್ನು ಅಲ್ಪಸಂಖ್ಯಾತರ ವಿರುದ್ಧ ಎತ್ತಿಕಟ್ಟುವ ಕೆಲಸ ದೇಶದ ಉದ್ದಗಲಕ್ಕೂ ನಡೀತಿದೆ. ಹೀಗಾಗಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ತೆಗೆಯಬೇಕಾಗಿದೆ. ಸಂವಿಧಾನದ ಆಶಯಗಳಲ್ಲಿ ನಂಬಿಕೆ, ಬದ್ಧತೆ ಇಲ್ಲದವರು ದೇಶದ್ರೋಹಿಗಳು ಎಂದು ಕಿಡಿಕಾರಿದರು.
    ಅನಗತ್ಯವಾಗಿ ಪಠ್ಯ ಪರಿಷ್ಕರಣೆಗೊಳಪಡಿಸಿ ಪಠ್ಯವನ್ನು ಕೇಸರೀಕರಣ ಮಾಡಲಾಗುತ್ತಿದೆ. ಯಾರೋ ರೋಹಿತ್ ಚಕ್ರತೀರ್ಥ ಎಂಬ ಆರ್.ಎಸ್.ಎಸ್ ಮೂಲದವನನ್ನು ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಪಠ್ಯದಲ್ಲಿ ಭಗತ್ ಸಿಂಗ್, ನಾರಾಯಣ ಗುರು, ಕುವೆಂಪು ಇಂಥವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ 10 ಮಂದಿ ಸಾಹಿತಿಗಳು ಪಠ್ಯ ಕ್ರಮದಿಂದ ತಮ್ಮ ಸಾಹಿತ್ಯಗಳನ್ನು ತೆಗೆದುಹಾಕಿ ಎಂದರು.

    ಜನರ ಈ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೋರಾಟಗಳನ್ನು ರೂಪಿಸಬೇಕಾಗುತ್ತದೆ. ಇದಕ್ಕೆ ಪಕ್ಷ ಮಾಡಿರುವ ಆರು ಕಮಿಟಿಗಳ ಸದಸ್ಯರು ತಮ್ಮ ಸಲಹೆ ನೀಡಬೇಕು. ನಾವೆಲ್ಲರೂ ಒಂದು ಗೂಡಿ ಈ ದಿಸೆಯಲ್ಲಿ ಹೋರಾಟ ನಡೆಸೋಣ ಎಂದು ಕರೆ ನೀಡಿದರು.

    ವರದಿ ಆಂಟೋನಿ ಬೇಗೂರು

    admin
    • Website

    Related Posts

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.