nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    • ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಮೇ 20ರಂದು ಶ್ರೀ ಪ್ರಸನ್ನಾನಂದ ಸ್ವಾಮೀಜಿ ಮೀಸಲಾತಿ ಹೋರಾಟಕ್ಕೆ ಬೆಂಬಲ
    ಜಿಲ್ಲಾ ಸುದ್ದಿ May 17, 2022

    ಸರಗೂರು: ಮೇ 20ರಂದು ಶ್ರೀ ಪ್ರಸನ್ನಾನಂದ ಸ್ವಾಮೀಜಿ ಮೀಸಲಾತಿ ಹೋರಾಟಕ್ಕೆ ಬೆಂಬಲ

    By adminMay 17, 2022No Comments2 Mins Read
    saraguru

    ಸರಗೂರು: ತಾಲ್ಲೂಕಿನ ನಾಯಕ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ಆದಿಜಾಂಭವ ಸಮಿತಿ ಆದಿವಾಸಿ ಬುಡಕಟ್ಟು, ಗಿರಿಜನ ಪ್ರಗತಿಪರ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಪರಮ ಪೂಜ್ಯ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಹೋರಾಟಕ್ಕೆ ಬೆಂಬಲ ನೀಡಲು ಕರೆ ನೀಡಲಾಯಿತು.

    ತಾಲ್ಲೂಕಿನ ನಾಮಧಾರಿಗೌಡನ ಕಲ್ಯಾಣ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು,  ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿ ನಮ್ಮ ಜನಾಂಗಕ್ಕೆ ಸಂವಿಧಾನ ಬದ್ಧವಾಗಿ ಸರ್ಕಾರ ನೀಡಬೇಕಾಗಿರುವ ಪರಿಶಿಷ್ಟ ಪಂಗಡ 7.5ರಷ್ಟು ಮತ್ತು ಪರಿಶಿಷ್ಟ ಜಾತಿ 17ರಷ್ಟು ಮೀಸಲಾತಿ ಹೆಚ್ಚಳಕ್ಕಾಗಿ ಸುಮಾರು 95 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಗ್ರಹ ಧರಣಿ ಕುಳಿತಿದ್ದಾರೆ. ಆದರೆ ಈವರೆಗೆ ನ್ಯಾಯ ದೊರಕದೇ ಇರುವುದು ನೋವಿನ ಸಂಗತಿ ಎಂದರು.


    Provided by
    Provided by

    ಪಟ್ಟಣ ಪಂಚಾಯತ್  ಸದಸ್ಯ ಹಾಗೂ ನಾಯಕ ಸಮಾಜದ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ,  ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿಗೆ ಬೆಂಬಲ ಸೂಚಿಸಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಹಮ್ಮಿಕೊಳ್ಳಲು ಕರೆ ನೀಡಲಾಗಿದೆ.  ಅದ್ದರಿಂದ ಸರಗೂರು ತಾಲ್ಲೂಕಿನಲ್ಲಿ ಮೇ 20ರಂದು   ಪ್ರತಿಭಟನೆ ನಡೆಯಲಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ಜಯಚಾಮರಾಜೇಂದ್ರ ಕ್ರೀಡಾಂಗಣದಿಂದ ಹೊರಟು ತಾಲ್ಲೂಕು ಕಚೇರಿಯವರೆಗೂ ಶಾಂತಿಯುತವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

    ಅಂಕನಾಯಕ ಅಗತ್ತೂರು.ಸಂವಿಧಾನ ಸಂರಕ್ಷಣಾ ಸಮಿತಿ ಉಪಾಧ್ಯಕ್ಷ ಹಾಗೂ ನಾಯಕ ಸಮಾಜ ಸಂಘ ನಿರ್ದೇಶಕರ ಸಾಗರೆ ಶಂಕರ್ ಮಾತನಾಡಿ, ಎಲ್ಲಾ ಊರಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಬಂಧುಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಯಜಮಾನರುಗಳು, ಸಂಘ ಸಂಸ್ಥೆಗಳು, ಪದಾಧಿಕಾರಿಗಳು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರುಗಳು,  ಪಪಂ ಸದಸ್ಯರು, ಮುಖಂಡರು, ವಾಲ್ಮೀಕಿ ಸಂಘದವರು, ದಲಿತ ಸಂಘರ್ಷ ಸಮಿತಿ, ಸಂವಿಧಾನ ಸಂರಕ್ಷಣಾ ಸಮಿತಿ,  ಆದಿಜಾಂಭವ ಮತ್ತು ಆದಿವಾಸಿ ಬುಡಕಟ್ಟು ಜನಾಂಗದ ಸಮಿತಿಯ ಸದಸ್ಯರು ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ನಾಯಕ ಜನಾಂಗ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಹೆಚ್ ಡಿ ಕೋಟೆ ಮತ್ತು ಸರಗೂರು ಮಾಜಿ ಅಧ್ಯಕ್ಷ ಶಂಭುಲಿಂಗನಾಯಕ,  ಗೌರವಾಧ್ಯಕ್ಷ ಬಸವನಾಯಕ,  ಪಪಂ ಸದಸ್ಯ  ಮತ್ತು ನಾಯಕ ಸಂಘದ ಉಪಾಧ್ಯಕ್ಷ ಶ್ರೀನಿವಾಸ, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಸರಗೂರು ಶಿವಣ್ಣ, ಕಾರ್ಯದರ್ಶಿ ಇಟ್ನ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಬೆಟ್ಟನಾಯಕ, ಖಜಾಂಚಿ ನಾಗನಾಯಕ,  ಸಂವಿಧಾನ ಸಂರಕ್ಷಣಾ ಸಮಿತಿ ಉಪಾಧ್ಯಕ್ಷ ಮತ್ತು ನಿರ್ದೇಶಕ ಸಾಗರೆ ಶಂಕರ್, ಸಂವಿಧಾನ ಸಂರಕ್ಷಣಾ ಸಮಿತಿ ಪ್ರದಾನ ಕಾರ್ಯದರ್ಶಿ ಗ್ರಾ.ಪಂ. ಸದಸ್ಯ ಬೆಟ್ಟಸ್ವಾಮಿ, ಅಂಕನಾಯಕ ಅಗತ್ತೂರು, ಮುಳ್ಳೂರು ಸಿದ್ದರಾಜು, ರವಿಬಸಪುರ, ಕುಮಾರ್ ಹಲಸೂರು,  ಸತ್ಯರಾಜ್ ಚಾಮೇಗೌಡನಹುಂಡಿ ಇದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ಸರಗೂರು:  ಹಳ್ಳಿಗಾಡಿನ ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ…

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025

    ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.