nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    ಚಿಕ್ಕನಾಯಕನಹಳ್ಳಿ January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    By adminJanuary 2, 2026No Comments2 Mins Read

    ಚಿಕ್ಕನಾಯಕನಹಳ್ಳಿ: ಎತ್ತಿನಹೊಳೆ ನೀರಾವರಿ ಯೋಜನೆಯ ಕಾಮಗಾರಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಈ ನಿಟ್ಟಿನಲ್ಲಿ ಜ.4ರಂದು ಚಿಕ್ಕನಾಯಕನಹಳ್ಳಿ ಸೇರಿದಂತೆ ತಿಪಟೂರು, ತುರುವೇಕೆರೆ, ತಿಪಟೂರು ನಾಲ್ಕು ತಾಲ್ಲೂಕಿನ ಮುಖಂಡರುಗಳ ಸಭೆ ನಡೆಯಲಿದೆ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು.

    ಪ್ರವಾಸಿ ಮಂದಿರ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  2014ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಮಳೆಗಾಲದಲ್ಲಿ ನೀರು ಸಮುದ್ರ ಪಾಲಾಗುತ್ತಿತ್ತು, ನೀರಾವರಿ ತಜ್ಞರಿಂದ ಸರ್ವೆ ನಡೆಸಿ ಆ ನೀರನ್ನು ಜನರ ಅನುಕೂಲತೆ ದೃಷ್ಟಿಯಿಂದ ನಮ್ಮ ಸರ್ಕಾರ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿತು ಎಂದರು.


    Provided by
    Provided by

    ಕಾಮಗಾರಿ ಕೆಲಸ 252 ಕಿ.ಮೀ ಪೈಕಿ 208 ಕಿ.ಮೀ. ಉದ್ದದಷ್ಟು ಆಗಿದೆ. 23,252 ಕೋಟಿಯಷ್ಟು ರಾಜ್ಯ ಸರ್ಕಾರದ ಅನುದಾನವಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ ಅನುದಾನ ನೀಡದಿದ್ದರೂ ಕಾಮಗಾರಿಗೆ ಅರಸೀಕೆರೆ ತಾಲ್ಲೂಕಿನ ಅರಣ್ಯ ಪ್ರದೇಶದ ಕೇವಲ 4 ಕುಂಟೆ ನೆಪ ಒಡ್ಡಿ ಕೆಲಸಕ್ಕೆ ಅಡಚಣೆ ಮಾಡಿದೆ. ಜ.4ರಂದು ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಭೆ ಸೇರಲಾಗುವುದು ಎಂದು ತಿಳಿಸಿದರು.

    ಮಾಜಿ ಶಾಸಕ ಬಿ.ಲಕ್ಕಪ್ಪ ಮಾತನಾಡಿ, ನೀರಾವರಿ ಯೋಜನೆ ಪೂರ್ಣವಾದರೆ ರೈತರ ಬದುಕು ಹಸನಾಗುತ್ತದೆ. ನಮ್ಮ ಕ್ಷೇತ್ರದ ರೈತರ ಜಮೀನಿನಲ್ಲೂ ಅಂತರ್ಜಲ ವೃದ್ಧಿಯಾಗುತ್ತದೆ. ನಾವೇನಾದರೂ ಉದಾಸೀನತೆಯಿಂದ ಮೈ ಮರೆತರೆ ಯೋಜನೆ ಕೆಲಸ ಮೂಲೆ ಹಿಡಿಯುತ್ತದೆ. ಸಣ್ಣ ವಿಚಾರಕ್ಕೆ ಬೃಹತ್ ಯೋಜನೆಗೆ ತೊಡಕಾಗಿರುವುದನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಬೇಕಾದರೆ ನೀರಾವರಿ ಹೋರಾಟಗಾರರಾದ ನಾವುಗಳು ಸದಾ ಸಿದ್ಧವಾಗಿರಬೇಕೆಂದರು.

    ಈ ಯೋಜನೆಯಲ್ಲಿ ತುಮಕೂರು ಜಿಲ್ಲೆಯ 113 ಕೆರೆಗಳಿಗೆ ನೀರು ಪೂರೈಕೆಯಾಗುವುದು. ಜಿಲ್ಲೆ ಸೇರಿದಂತೆ 7 ಜಿಲ್ಲೆಗಳಿಗೂ ಯೋಜನೆ ಜೀವನಾಡಿಯಾಗಿದೆ.  ಚಿಕ್ಕನಾಯಕನಹಳ್ಳಿ ಸೇರಿದಂತೆ ತಿಪಟೂರು, ತುರುವೇಕೆರೆ, ತಿಪಟೂರು ತಾಲ್ಲೂಕುಗಳ ಎಲ್ಲಾ ರೈತ ಸಂಘ ಸಂಸ್ಥೆಯ ಮುಖಂಡರುಗಳೊಂದಿಗೆ ಮಹತ್ವದ ಸಭೆ ನಡೆಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಕೆ.ಬಿ.ಕ್ರಾಸ್ ಹತ್ತಿರದ ಟೋಲ್ ಸಮೀಪವಿರುವ ನಾಲಾ ಕಾಮಗಾರಿ ಸ್ಥಳಕ್ಕೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ಆಗಮಿಸಬೇಕಾಗಿ ಮನವಿ ಮಾಡಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್, ಹುಳಿಯಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ.ಬೋಕ್ಕಣ್ಣ, ಹೇಮಾವತಿ ನೀರಾವರಿ ಹೋರಾಟ ಸಮಿತಿಯ ಉಪಾಧ್ಯಕ್ಷ ಬೇವಿನಹಳ್ಳಿ ಚನ್ನಬಸವಯ್ಯ, ಆಟೋ ಚಾಲಕ ಸಂಘದ ಅಧ್ಯಕ್ಷ ಮಂಜು, ಮಣೇಧೇರ್, ಮುಖಂಡರುಗಳಾದ ಪದಾಕರಿ, ವಿನಯ್ ಸಿಎಂಎನ್ ಮಾತನಾಡಿದರು. ಕಾಂಗ್ರೆಸ್ ಸೇವಾದಳದ ಕೆ.ಜಿ.ಕೃಷ್ಣಗೌಡ, ನಿಶಾನಿ ಕಿರಣ್ ಮುಂತಾದವರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ

    December 21, 2025

    ಹುಳಿಯಾರು ಪಟ್ಟಣ ಪಂಚಾಯಿತಿ: ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಆಯ್ಕೆ

    December 16, 2025

    2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ

    December 14, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.