nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಸಭೆ:  ಸಚಿವ ಈಶ್ವರ ಖಂಡ್ರೆ
    ಜಿಲ್ಲಾ ಸುದ್ದಿ July 17, 2023

    ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಸಭೆ:  ಸಚಿವ ಈಶ್ವರ ಖಂಡ್ರೆ

    By adminJuly 17, 2023No Comments2 Mins Read
    kabini

    ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ  ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

    ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಜನರ ಅಹವಾಲಿಗೆ ಸ್ಪಂದಿಸಿದರು.

    ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ  ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲಾ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ  ಕುರಿತಂತೆ ಪರ್ಯಲೋಚಿಸುವುದಾಗಿ ಸಚಿವರು ತಿಳಿಸಿದರು.

    ಅನಿಲ್ ಚಿಕ್ಕಮಾದು ಅವರು ತಮ್ಮ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು ಕನಿಷ್ಠ 72 ಕಿಲೋಮೀಟರ್ ರೈಲ್ವೆ ಬ್ಯಾರಿಕೆಡ್ ನಿರ್ಮಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು ಒಂದೇ ವರ್ಷದಲ್ಲಿ 72 ಕಿಲೋಮೀಟರ್ ಒಂದೇ ಭಾಗದಲ್ಲಿ  ನಿರ್ಮಿಸಲು ಸಾಧ್ಯವಿಲ್ಲ, ಆದರೆ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

    ತಾವು ಇಂದು ಕಬಿನಿ ವ್ಯಾಪ್ತಿಯ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸೌರಬೇಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಪರಿಶೀಲಿಸಿದ್ದಾಗಿ ತಿಳಿಸಿದ ಸಚಿವರು ಇದೇ ಸಂದರ್ಭದಲ್ಲಿ ಅರಣ್ಯದಲ್ಲೇ ವಾಸಿಸುವ ಆದಿವಾಸಿಗಳ ಸಮಸ್ಯೆಯನ್ನು ಆಲಿಸಿದ್ದಾಗಿ ತಿಳಿಸಿದರು.

    ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

    ಇದೇ ಸಂದರ್ಭದಲ್ಲಿ ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಹವಾಲುಗಳನ್ನು ಸಚಿವರು ಪರಿಶೀಲಿಸಿ 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳಿಮೆ ಮಾಡುತ್ತಿರುವ ಮತ್ತು   ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುಔರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಸೂಚಿಸಿದರು.

    ಹಿರಿಯ ಐಎಫ್ಎಸ್ ಅಧಿಕಾರಿಗಳಾದ ರಂಗರಾವ್, ಕುಮಾರ್ ಪುಷ್ಕರ್, ರಮೇಶ್ ಕುಮಾರ್, ಹರ್ಷಕುಮಾರ್ ಮತ್ತು ಎಚ್ ಡಿ ಕೋಟೆಯ ತಹಶೀಲ್ದಾರ್ ಸಭೆಯಲ್ಲಿ ಭಾಗವಹಿಸಿದ್ದರು.

    ಮಾಜಿ ಶಾಸಕ ಸಂದೇಶ್ ನಾಗರಾಜ್ ಅವರು ಈ ಸಭೆಯಲ್ಲಿ ಪಾಲ್ಗೊಂಡು ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock…

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.