ಪಾವಗಡ: ಭಾರತೀಯ ಜನತಾ ಪಕ್ಷದ ವತಿಯಿಂದ ಸದಸ್ಯತ್ವ ಅಭಿಯಾನವನ್ನು ಜಾಲೋಡು, ಸಿದ್ದಾಪುರ, ಹಾಗೂ ವೈ.ಎನ್.ಹೊಸಕೋಟೆ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಧುಗಿರಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬ್ಯಾಡನೂರು ಶಿವು ಮಾತನಾಡಿ, ಪಕ್ಷದ ಸಂಘಟನೆಗೆ ಸದಸ್ಯತ್ವ ಹೆಚ್ಚಿನ ಶಕ್ತಿ ನೀಡುತ್ತದೆ. ಈ ಬಾರಿ ಪಕ್ಷವು 10 ಕೋಟಿ ಹೊಸ ಸದಸ್ಯರ ಗುರಿ ಹೊಂದಿದೆ. ಈ ಭಾಗದಲ್ಲಿ ಸದಸ್ಯತ್ವ ಮಾಡುವ ಮೂಲಕ ಪಕ್ಷದ ಕಾರ್ಯಕ್ರಮಗಳು ಮತ್ತುಸಂಘಟನೆಗೆ ಹೆಚ್ಚು ಸಹಕಾರಿ ಆಗಲಿದೆ ಎಂದರು.
ಈ ಸಂದರ್ಭದಲ್ಲಿ ಬಿ.ಹೊಸಹಳ್ಳಿ ನಾಗರಾಜು,ಜಾಲೋಡು ತಿಪ್ಪೇಸ್ವಾಮಿ, ಸಿದ್ದಾಪುರ ಹನುಮಂತರಾಯ, ಸಾಯಿ, ಉಮಾಮಹೇಶ್, ರವಿ,ವರುಣ್,ರಾಜು,ಮದಕರಿ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q