ಮಧುಗಿರಿ: ತಾಲೂಕಿನ ಮಿಡಿಗೇಶಿಯಲ್ಲಿ ನಡೆದ ಜೋಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಕೆ.ಎನ್.ರಾಜಣ್ಣ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.
ಮಧುಗಿರಿಯ ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಕುಟುಂಬಸ್ಥರಿಗೆ ಧೈರ್ಯ ತಂಬಿದ ಅವರು, ಈ ಪ್ರಕರಣದ ಸೂಕ್ತ ತನಿಖೆಗೆ ಒತ್ತಾಯಿಸಿದರು.
ಈ ಪ್ರಕರಣದಲ್ಲಿ ಯಾರೇ ಬಾಗಿಯಾಗಿರಲಿ ಅವರ ವಿರುದ್ಧ ತನಿಖೆ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಇದೇ ವೇಳೆ ಒತ್ತಾಯಿಸಿದರು.
ಈ ವೇಳೆ ಹಿರಿಯ ಮುಖಂಡರುಗಳಾದ ಎಂ.ಎಸ್.ಮಲ್ಲಿಕಾರ್ಜುನಯ್ಯ, ಜಿ.ಜೆ.ರಾಜಣ್ಣ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy