ಬೀದರ್: ನಗರದಲ್ಲಿ ಏ.15 ರಂದು ರಾತ್ರಿ ಪತ್ರಕರ್ತರೊಬ್ಬರ ಮೇಲೆ ಕೈಮಾಡಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೂಡಲೇ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸೂಚಿಸಿದ್ದಾರೆ
ಪತ್ರಕರ್ತರೊಬ್ಬರ ಮೇಲೆ ಅರಣ್ಯ ಸಿಬ್ಬಂದಿ ಕೈಮಾಡಿರುವ ವಿಡಿಯೋ ವೈರಲ್ ಆಗಿದ್ದು ಈ ಬಗ್ಗೆ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿವೆ ಎಂದು ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸಚಿವರು ಹೊರಡಿಸಿರುವ ಟಿಪ್ಪಣಿಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು) ಅರಣ್ಯ ಭವನ ಬೆಂಗಳೂರು ಅವರಿಗೆ ನಿರ್ದೇಶನ ನೀಡಿದ್ದಾರೆ.
ಪತ್ರಕರ್ತ ರವಿ ಭೂಸಂಡೆ ಅವರು ನೀಡಿದ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ನಿನ್ನೆ (ಏ.16) ಗಾಂಧಿಗಂಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW