ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹೇಶ್ವರಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಲಕ್ಷ್ಮಾರೆಡ್ಡಿ ಪರ ಭಾನುವಾರ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಹೆಬ್ಬಾಳಕರ್ ಕೋರಿದರು.
ಈ ಸಮಯದಲ್ಲಿ ತಮಿಳುನಾಡಿನ ಸಂಸದ ವಿಷ್ಣುಪ್ರಸಾದ, ಅಭ್ಯರ್ಥಿ ಲಕ್ಷ್ಮಾರೆಡ್ಡಿ, ಎಐಸಿಸಿ ವಕ್ತಾರೆ ಶಮಾ ಮಹಮ್ಮದ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


