nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಕಿ ಅನಾಹುತದಿಂದ ಮನೆ ಕಳೆದುಕೊಂಡವರಿಗೆ ನಿವೇಶನದ ಭರವಸೆ ನೀಡಿದ ಸಚಿವ ಪರಮೇಶ್ವರ್
    ಕೊರಟಗೆರೆ April 29, 2024

    ಬೆಂಕಿ ಅನಾಹುತದಿಂದ ಮನೆ ಕಳೆದುಕೊಂಡವರಿಗೆ ನಿವೇಶನದ ಭರವಸೆ ನೀಡಿದ ಸಚಿವ ಪರಮೇಶ್ವರ್

    By adminApril 29, 2024No Comments2 Mins Read
    g parameshwar
    • ನೊಂದ ಕುಟುಂಬಗಳಿಗೆ ಕರುಣೆ ತೋರಿ ಮಾದರಿಯಾದ ಸ್ವಾಮೀಜಿಗಳು

    ಕೊರಟಗೆರೆ : ಚುನಾವಣೆ ನೀತಿಸಂಹಿತೆ ಮುಗಿದ ತಕ್ಷಣವೇ ಚಿಂಪುಗಾನಹಳ್ಳಿಯ 9 ಎಕರೇ 30 ಗುಂಟೆ ಸರಕಾರಿ ಜಮೀನಿನಲ್ಲಿ ಪಶು ಆಸ್ಪತ್ರೆ, ಸರಕಾರಿ ಶಾಲೆ ಮತ್ತು ಬಡವರಿಗೆ ನಿವೇಶನಕ್ಕೆ ಲೇಔಟ್ ನಿರ್ಮಾಣ ಮಾಡ್ತಿನಿ. ಗುಡಿಸಲು ಕಳೆದುಕೊಂಡ ಜನರಿಗೆ ಕುಡಿಯುವ ನೀರು, ವಿದ್ಯುತ್ ಮತ್ತು ಮೂಲಸೌಲಭ್ಯ ಪೂರೈಸಲು ತಕ್ಷಣ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಂಪುಗಾನಹಳ್ಳಿ ಸಮೀಪ ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದ ಸ್ಥಳಕ್ಕೆ ಭಾನುವಾರ ಸಿದ್ದರಬೇಟ್ಟ ಶ್ರೀಗಳ ಜೊತೆಯಲ್ಲಿ ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.

    ವರ್ಷದಲ್ಲಿ ಎರಡನೇ ಸಲ ಗುಡಿಸಲಿಗೆ ಬೆಂಕಿ ಬಿದ್ದು ಪ್ರಸ್ತುತ 10ಗುಡಿಸಲು ಸುಟ್ಟುಹೋಗಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಧವಸದಾನ್ಯ ನಾಶವಾಗಿವೆ. ಕಳೆದ ವರ್ಷವೇ ಭೇಟಿ ನೀಡಿ ನಿವೇಶನ ನೀಡುವ ಭರವಸೆ ನೀಡಿದ್ದೆ. ಈಗ ಪ್ರತಿ ಕುಟುಂಬಕ್ಕೆ 5 ಸಾವಿರ ಹಣ ನೀಡಿದ್ದೇನೆ. ಅಲೆಮಾರಿ ಕಾರ್ಮಿಕರು ಮತ್ತು ಹಂದಿಜೋಗ ಕುಟುಂಬಗಳಿಗೆ ತ್ವರಿತವಾಗಿ ನಿವೇಶನ ನೀಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ  ಎಂದು ಹೇಳಿದರು.

    ಸಿದ್ದರಬೆಟ್ಟ ಶ್ರೀಬಾಳೆಹೊನ್ನೂರು ಖಾಸಶಾಖ ಮಠದ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ಮಾತನಾಡಿ,  ಚಿಂಪುಗಾನಹಳ್ಳಿ ಸಮೀಪ ಎರಡನೇ ಸಲ ಬೆಂಕಿಯ ಅವಗಡ ಸಂಭವಿಸಿದೆ. ಬೆಂಕಿಯ ಅವಘಡದಿಂದ ಗುಡಿಸಲಿನಲ್ಲಿ ಶೇಖರಣೆ ಮಾಡಲಾಗಿದ್ದ ಲಕ್ಷಾಂತರ ರೂ ಮೌಲ್ಯದ ಬೆಳೆಬಾಳುವ ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ಸಂಕಷ್ಟಕ್ಕೆ ಸಿಲುಕಿದ ಬಡಜನರಿಗೆ ಸಹಾಯಹಸ್ತ ನೀಡುವುದು ನಮ್ಮೆಲ್ಲರ ಪ್ರಮುಖ ಕರ್ತವ್ಯ ಎಂದು ಹೇಳಿದರು.

    g parameshwar

     ಶ್ರೀಗಳಿಂದ ಬಡಜನರಿಗೆ ನೆರವಿನ ಆಸರೆ:

    ಎಲೆರಾಂಪುರ ಶ್ರೀಮಠದಿಂದ 11 ಗುಡಿಸಲು ಕಳೆದುಕೊಂಡ ಬಡಜನರಿಗೆ ಆಹಾರದ ಕಿಟ್, ಬಟ್ಟೆ, ಚಾಪೆ  ಮತ್ತು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಡಾ.ಹನುಮಂತನಾಥ ಸ್ವಾಮೀಜಿಗಳು  ವಿತರಣೆ ಮಾಡಿದರು. ಪಾವಗಡ ಶ್ರೀರಾಮಕೃಷ್ಣ ಸೇವಾಮಠದಿಂದ 8 ಸಾವಿರ ಮೌಲ್ಯದ ಪಾತ್ರೆ, ಬಟ್ಟೆ, ಸೀರೆ, ಪಂಚೆ, ಟವಲ್, ಅಕ್ಕಿ, ಬೆಳೆ, ಸಕ್ಕರೆ ಮತ್ತು ಸಾಂಬರ್ ಪದಾರ್ಥಗಳನ್ನು ಶ್ರೀಜಪಾನಂದಾ ಸ್ವಾಮೀಜಿಗಳು ವಿತರಣೆ ಮಾಡಿದರು. ಸಿದ್ದರಬೆಟ್ಟ ಶ್ರೀಮಠದಿಂದ ದಿನಸಿ ಪದಾರ್ಥ, ಪಾತ್ರೆ ಮತ್ತು ಬೇಟ್‍ ಶೀಟ್‍ ಗಳನ್ನು ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿಗಳು ವಿತರಣೆ ಮಾಡಿದರು.

    ನಿವೇಶನ ನೀಡಲು ಶ್ರೀಗಳ ಆಗ್ರಹ:

    ಕ್ಯಾಮೇನಹಳ್ಳಿ ಮತ್ತು ನೀಲಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಲೆಮಾರಿ ಕಾರ್ಮಿಕರು, ಹಂದಿಜೋಗರು ಕಳೆದ 25 ವರ್ಷದಿಂದ ನೆಲೆಸಿದ್ದಾರೆ. 30ಕ್ಕೂ ಅಧಿಕ ಕುಟುಂಬಗಳಿಗೆ ಸೌಲಭ್ಯಗಳೇ ಮರೀಚಿಕೆ ಆಗಿವೆ. ರಾತ್ರಿ ವೇಳೆ ಕತ್ತಲೆಯ ಜೀವನ ನರಕದಂತಿದೆ. ತಕ್ಷಣ ಸರಕಾರ ನಿವೇಶನ ಮತ್ತು ಮನೆ ಮಂಜೂರು ಮಾಡಬೇಕಿದೆ ಎಂದು ಎಲೆರಾಂಪುರದ ಶ್ರೀಹನುಮಂತನಾಥ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ಮತ್ತು ಪಾವಗಡದ ರಾಮಕೃಷ್ಣ ಸೇವಾಶ್ರಮದ ಶ್ರೀಜಪಾನಂದ ಜೀ ಆಗ್ರಹ ಮಾಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.