nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು

    July 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    • ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
    • ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳೆದರೆ ಶಾಲೆಯ ಆಟದ  ಮೈದಾನದ ಸುತ್ತ ಹಾಕಿರುವ  ಫೆನ್ಸಿಂಗ್  ತೆರವುಗೊಳಿಸಲು ಸಚಿವ ರಾಜಣ್ಣನೇ ನನಗೆ ಹೇಳಿರುವುದು: ಕಲ್ಯಾಣ ಮಂಟಪದ ಮಾಲಿಕ ಚಂದ್ರಪ್ಪ
    ಜಿಲ್ಲಾ ಸುದ್ದಿ March 17, 2024

    ಬೆಳೆದರೆ ಶಾಲೆಯ ಆಟದ  ಮೈದಾನದ ಸುತ್ತ ಹಾಕಿರುವ  ಫೆನ್ಸಿಂಗ್  ತೆರವುಗೊಳಿಸಲು ಸಚಿವ ರಾಜಣ್ಣನೇ ನನಗೆ ಹೇಳಿರುವುದು: ಕಲ್ಯಾಣ ಮಂಟಪದ ಮಾಲಿಕ ಚಂದ್ರಪ್ಪ

    By adminMarch 17, 2024No Comments2 Mins Read
    baladhara

    ತುಮಕೂರು: ತುಮಕೂರು ತಾಲೂಕು ಬೆಳದರೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆಟದ ಮೈದಾನಕ್ಕೆ ತಹಶೀಲ್ದಾರ್, ಬಿಇಒ, ಎಸ್ ಡಿ ಎಂ ಸಿ ಸದಸ್ಯರು  ಮತ್ತು ಕೋರ ಪೊಲೀಸ್ ಠಾಣಾಧಿಕಾರಿಗಳು ಫೆನ್ಸಿಂಗ್ ನಿರ್ಮಿಸಿ ಸುತ್ತ ಗಿಡಗಳನ್ನು ನೆಟ್ಟಿರುವುದನ್ನು ಜೆಸಿಬಿ ಬಳಸಿ  ಧ್ವಂಸಗೊಳಿಸಿರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ  ಕೋರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಈ ಹಿಂದೆ ದಾಖಲಿಸಿದ್ದರು.

    ಈ ಬಗ್ಗೆ ಲೋಕಾಯುಕ್ತದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ರವರು  ದೂರನ್ನು ದಾಖಲಿಸಿದ್ದರು. ಸದರಿ ದೂರಿನ ಅನ್ವಯ ಉಪಲೋಕಾಯುಕ್ತ  ನ್ಯಾಯಮೂರ್ತಿ ಪಣಿಂದ್ರರವರು ತುಮಕೂರುಪೊಲೀಸ್ ವರಿಷ್ಠಾಧಿಕಾರಿ( SP) ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳು ದೂರುದರಾದ ಹೆಚ್.ಎಂ ವೆಂಕಟೇಶ್ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ವಾಸ್ತವಾಂಶದ ವರದಿಯನ್ನು ನೀಡುವಂತೆ ಕೇಳಿದ್ದರು.

    ಶನಿವಾರ ಬೆಳಧರೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆಟದ ಮೈದಾನಕ್ಕೆ ಆಗಮಿಸಿದ  ತುಮಕೂರು ಎಸ್ಪಿ(SP) ಸಮ್ಮುಖದಲ್ಲಿ ಕಲ್ಯಾಣ ಮಂಟಪದ ಮಾಲೀಕರಾದ ಚಂದ್ರಪ್ಪನವರು ಆಟದ ಮೈದಾನದಲ್ಲಿ ಹಾಕಿರುವ ಫೆನ್ಸಿಂಗನ್ನು ತೆರವುಗೊಳಿಸಿರುವುದು ನಾನೇ  ಎಂದು ತಿಳಿಸಿದರು, ಆಗ ಸ್ಥಳದಲ್ಲಿಯೇ ಅವರನ್ನು ಸರ್ಕಾರದ ಆಸ್ತಿ ನಾಶಪಡಿಸಿ ದರ ಬಗ್ಗೆ ಬಂಧಿಸ ಬೇಕಾಗಿದ್ದ ಎಸ್ ಪಿ ಅವರು ಯಾವುದೇ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸದಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಸರ್ಕಾರಿ ಶಾಲೆಯ (ಕಾಂಪೌಂಡ್) ತಂತಿ ಬೇಲಿಯನ್ನು ನಿರ್ಮಿಸಿ ಗಿಡಗಳನ್ನು ನೆಟ್ಟಿರುವುದನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಿದ್ದರು. ಸಹಿತ ಹಿರಿಯ ಪೊಲೀಸ ಅಧಿಕಾರಿ ಸಮ್ಮುಖದಲ್ಲಿ ನಾನೇ ಮಾಡಿದ್ದು ಎಂದು ಚಂದ್ರಪ್ಪ ಹೇಳಿದರೂ ಸಹಿತ ಅವರ ಮೇಲೆ ಕಾನೂನು ಕ್ರಮಗಳನ್ನು ಜರುಗಿಸಿ  ಬಂಧಿಸದೇ ಇರುವುದು ಖಂಡನೀಯ ಎಂದು ತುಮಕೂರು ಕಾಳಜಿ ಫೌಂಡೇಶನ್, ಭೀಮ್ ಆರ್ಮಿ ಸಂಘಟನೆ ಇನ್ನಿತರ ಸಂಘಟನೆಗಳು ಖಂಡಿಸಿವೆ.

    ಕೋರ  ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು, ಶಾಲಾ ಬೇಲಿಯನ್ನು ಜೆಸಿಬಿ ಬಳಸಿ  ಧ್ವಂಸಗೊಳಿಸಿದ ವ್ಯಕ್ತಿಯೇ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳ ಸಮ್ಮುಖದಲ್ಲಿ ಹೇಳಿದ್ದರು ಸಹಿತ ಅವರನ್ನು ಬಂಧಿಸದೆ ಅವರನ್ನು ಬೆಂಬಲಿಸಿರುವುದು ಆ ಸಂದರ್ಭದಲ್ಲಿ  ತೆಗೆದ ವಿಡಿಯೋದಲ್ಲಿ ಕಂಡು ಬರುತ್ತದೆ.

    ಪ್ರಭಾವಿ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಿ  ಜೆಸಿಬಿ  ವಶಕ್ಕೆ ಪಡೆಯುವ  ಶಕ್ತಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇಲ್ಲವೇ? ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಅಥವಾ ಸಚಿವರ ಹೆಸರುಗಳನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯ ಮೇಲೆ ಯಾವುದೇ ಕ್ರಮ ಜರುಗಿಸದೆ ಸ್ಥಳದಿಂದ ನಿರ್ಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ  ಬಗ್ಗೆ ನೈಜ್ಯ ಹೋರಾಟಗಾರರ ವೇದಿಕೆ ಬೇಸರ ವ್ಯಕ್ತಪಡಿಸಿದೆ.

    ವಿಡಿಯೋ ನೋಡಿ:

    ಬೆಳೆದರೆ ಶಾಲೆಯ ಆಟದ ಮೈದಾನದ ಸುತ್ತ ಹಾಕಿರುವ ಫೆನ್ಸಿಂಗ್ ತೆರವುಗೊಳಿಸಲು ಸಚಿವ ರಾಜಣ್ಣನೇ ನನಗೆ ಹೇಳಿರುವುದು: ಕಲ್ಯಾಣ ಮಂಟಪದ ಮಾಲಿಕ ಚಂದ್ರಪ್ಪ@siddaramaiah @RAshokaBJP @BJP4Karnataka pic.twitter.com/KOtVzWQwcQ

    — Namma Tumakuru (@namma_tumakuru) March 17, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ

    July 17, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    ತುಮಕೂರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿಡುವ ನಿಮಿತ್ತ ಎಸ್.ಐ.ಆರ್. ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿ 15 ದಿನಗಳು ಕಳೆದಿವೆ. ಬಿ.ಎಲ್.ಓ.ಗಳು…

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು

    July 17, 2026

    ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.