ಏರ್ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ವರದಿಯಾಗಿದೆ. ಮೃತ ಬಾಲಕನ್ನು ವಿಷ್ಣು (7) ಎಂಬ ಎಂದು ಗುರುತಿಸಲಾಗಿದೆ.
ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಏರ್ ಗನ್ ಇಟ್ಟಿದ್ದು, ಮಕ್ಕಳು ಆಟವಾಡು ಗನ್ ತಗೆದುಕೊಂಡ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಥವಾ ಬೇರೆ ಕಾರಣದಿಂದ ಬಂದೂಕಿನಿಂದ ಫೈರ್ ಆಗಿರಬಹುದೆಂದು ಹೇಳಲಾಗುತ್ತದೆ. ಒಟ್ಟಾರೆ ಮನೆಯವರ ನಿರ್ಲಕ್ಷ್ಯತನದಿಂದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ನೀಡಿರುವ ದೂರಿನ ಆಧಾರದ ಮೇಲೆ ದೂರು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296