nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕನ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ: ಜೆಡಿಎಸ್ ಮುಖಂಡನಿಂದ ವಾಗ್ದಾಳಿ
    ಗುಬ್ಬಿ July 18, 2022

    ಶಾಸಕನ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ: ಜೆಡಿಎಸ್ ಮುಖಂಡನಿಂದ ವಾಗ್ದಾಳಿ

    By adminJuly 18, 2022No Comments3 Mins Read
    gubbi

    ಗುಬ್ಬಿ:  ತಾಲ್ಲೂಕಿನಲ್ಲಿ ಶಾಸಕನ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ನೇರ ವಾಗ್ದಾಳಿ.

    ಗುಬ್ಬಿ ತಾಲ್ಲೂಕಿನಲ್ಲಿ 20ವರ್ಷಗಳಿಂದ ಶಾಸಕರಾಗಿರುವ ನೀನು ತಾಲ್ಲೂಕಿನ ಯಾವ ಅಭಿವೃದ್ಧಿ ಮಾಡಿದ್ದೀರಿ ಎಂಬುದನ್ನು ತೋರಿಸು ನೋಡೋಣ, ಕೇವಲ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು  ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರಕ್ಕೆ ನೇರ ಕಾರಣ ಶಾಸಕ ಎಸ್.ಆರ್.ಶ್ರೀನಿವಾಸ್ ಎಂದು ನೇರ ಆರೋಪ ಮಾಡಿದರು.

    ಗುಬ್ಬಿ ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ಭೂಹಗರಣವನ್ನು ಸಿಒಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಇಂದು ಆಯೋಜಸಿದ್ದ ಪ್ರತಿಭಟನೆಯಲ್ಲಿ  ಭಾಗವಹಿಸಿ ಮಾತನಾಡಿದ ಅವರು, ಶಾಸಕರೇ ನಾನಂತು ಬಗರುಕುಂ ಸಾಗುವಳಿ ಮತ್ತು 50.53 ಬಗ್ಗೆ ಪಿಹೆಚ್ ಡಿ ಪದವಿ ಮಾಡಿಲ್ಲ. ನೀವು ಬಗರುಕುಂ ಸಮಿತಿ ಅಧ್ಯಕ್ಷರಾಗಿರುವವರು. ಸಾಗುವಳಿ ವಿತರಣೆಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರಿಗೆ ಅನ್ಯಾಯ ಮಾಡಲು ಮುಂದಾಗಬೇಡಿ.  ಇಂದು ರೈತರ ಜಮೀನು ಕಬಳಿಸಲು ಮುಂದಾಗಿರುವ ಭ್ರಷ್ಟ ಅಧಿಕಾರಿಗಳು ಮತ್ತು ತಮ್ಮ ಬೆಂಬಲಿಗರಿಗೆ ರೈತರಿಗೆ ಸಿಗಬೇಕಾದ ಜಮೀನಿನಲ್ಲಿ ಪ್ರಭಾವಿಗಳ ಹೆಸರಿಗೆ ಮಂಜೂರಾತಿ ಮಾಡುವ ಮೂಲಕ ಬಡವರ ಜಮೀನು ಕಬಳಿಸಲು ಮುಂದಾಗಿರುವುದು ಸರಿಯಲ್ಲ. ಇಂದು ಸುಮಾರು 450 ಎಕರೆ ಸರ್ಕಾರಿ ಜಮೀನು ಬ್ರಹಾಂಡ ಭ್ರಷ್ಟಾಚಾರ ದಲ್ಲಿ ತೋಡಗಿ ತಾಲೂಕು  ಕಛೇರಿಯ ಸಿಬ್ಬಂದಿ ಹಣ ಮಾಡುವ ಆಸೆಗೆ ಬಿದ್ದು ತಮ್ಮ ಜೇಬು ತುಂಬಿಸಲು ಹೋಗಿ ಇಂದು ಜೈಲು ಪಾಲಾಗಿದ್ದಾರೆ.

    ಕೇವಲ ಚುನಾವಣಾ ಸಮಯದಲ್ಲಿ ಮಾತ್ರ ಜನತೆಯ ಪರವಾಗಿ ನಿಲುವು ತೋರುವುದು ಬಿಟ್ಟರೆ ತಾಲ್ಲೂಕಿನ ಯಾವ ರೈತರಿಗೆ ನ್ಯಾಯ ದೊರಕಿಸುವಲ್ಲಿ  ನಿಮ್ಮ ನಿಲುವು ಇದೆ ಎಂಬುದು ತಾಲ್ಲೂಕಿನ ಜನತೆಗೆ ತಿಳಿದಿದೆ. ಈ ಬಾರಿ ಜನತೆ ನಿಮ್ಮ ದುರಾಡಳಿತ ದಿಂದ ಸಾಕಷ್ಟು ನೊಂದಿದ್ದು ಜನತೆ ಮತ್ತು ರೈತರ ಶಾಪ ನಿಮಗೆ ತಟ್ಟದೆ ಬಿಡುವುದಿಲ್ಲ ಇದಕ್ಕೆ ನೀವು ಪಶ್ಚಾತಾಪ ಪಡುವ ದಿನಗಳು ಸಮೀಪದಲ್ಲಿ ಬರಲಿದೆ ಎಂದು ಶಾಸಕ ಎಸ್. ಆರ್.ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ ಮಾಡಿದರು.

    ತಾವು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಸಮಯದಲ್ಲಿ ತಾಲ್ಲೂಕಿನ ರಾಜಕೀಯ ಮುಖಂಡರೊಬ್ಬರು ಭ್ರಷ್ಟಾಚಾರದ ಲ್ಲಿ ಸಿಲುಕಿದಾಗ ಗುಬ್ಬಿ ಪೊಲೀಸರು ಅವರನ್ನು ಚಡ್ಡಿ ಯಲ್ಲಿ ಠಾಣೆಯಲ್ಲಿ ಕುರಿಸಿದ ಸಮಯದಲ್ಲಿ ನಾನು ಆತನನ್ನು ಬಿಡಿಸಿದ್ದು ಎಂದು ಹೇಳುವ ನೀನು ಭ್ರಷ್ಟಾಚಾರದಲ್ಲಿ ತೊಡಗುವವರನ್ನು ಯಾಕೆ ಬಿಡಿಸಿಕೊಂಡು ಬಂದಿರಿ  ಎಂದು ಪ್ರಶ್ನಿಸಿದರು.

    ತಾಲೂಕಿನಲ್ಲಿ ಇಲ್ಲಿಯವರೆಗೂ ಯಾವುದೇ ಗುರುತರವಾದ ಉದ್ಯೋಗ ಸೃಷ್ಟಿಯನ್ನು ಮಾಡದೆ ಚುನಾವಣಾ ಸಮಯದಲ್ಲಿ ತಮ್ಮ ಹಿಂಬಾಲಕರ ದರ್ಪದಿಂದ ಚುನಾವಣೆ ಗೆಲ್ಲುವುದು ಮುಖ್ಯವಲ್ಲ ತಾಲೂಕಿನ ರೈತ  ಹಾಗೂ ಬಡ ಕುಟುಂಬಗಳ ಕಷ್ಟ ಸುಖಗಳಿಗಳಿಗೆ ಸ್ಪಂದಿಸುವಂತಹ ಜನಪ್ರತಿನಿಧಿಯಾಗಬೇಕು. ಕೇವಲ ತನ್ನ ಹಿಂಬಾಲಕರ ಅಭಿವೃದ್ಧಿಗೆ ಸರ್ಕಾರದಿಂದ ಬಂದಂತ ಕಾಮಗಾರಿ ಗುತ್ತಿಗೆಗಳನ್ನು ನೀಡಿ ಚುನಾವಣಾ ಸಮಯದಲ್ಲಿ  ಸಹಕಾರ ನೀಡಿದ ಋಣವನ್ನು ತೀರಿಸಲು ಈ ರೀತಿಯ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಿರುವುದು ಇವರ ಕಾರ್ಯವೈಕರಿಗೆ ಹಿಡಿದ ಕೈಗನ್ನಡಿ ಎಂದು ಆರೋಪಿಸಿದರು.

    ಈ ಭೂ ಮಾಫಿಯಾ ದಂಧೆಯ ಹಿಂದಿರುವ ಕಾಣದ ಕೈಗಳನ್ನು ಕಂಡುಹಿಡಿಯಲು ಸಿಓಡಿ ತನಿಖೆಗೆ ಒಪ್ಪಿಸಲು ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಮುಖಾಂತರ ತನಿಖೆಗೆ ಒಳಪಡಿಸಲು ಒಪ್ಪಿಸುತ್ತೇವೆ ಎಂದರು.

    ಜೆಡಿಎಸ್ ಮುಖಂಡ ಜೆ.ಡಿ.ಸುರೇಶ್ ಗೌಡ ಮಾತನಾಡಿ, ಭ್ರಷ್ಟಾಚಾರ ಈ ತಾಲೂಕಿನಲ್ಲಿ ತಾಂಡವ ಮಾಡುತ್ತಿದ್ದು, ಅಧಿಕಾರಿಗಳು ಶಾಸಕರ ಚೇಲಗಳಂತೆ ವರ್ತಿಸುತ್ತಿರುವುದು ಎಷ್ಟು ಸಮಂಜಸ ಎಂದ ಅವರು ತಮ್ಮ ಹಿಂಬಾಲಕರಿಗೆ ರೈತರು ಉಳುಮೆ ಮಾಡುತ್ತಿರುವ ಜಾಗವನ್ನು ನೀಡಿರುವುದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ ತಾಲೂಕಿನ ಹಳ್ಳಿಗಾಡಿನ ರಸ್ತೆಗಳು ಪಟ್ಟಣದ ರಸ್ತೆಗಳು ಇವುಗಳನ್ನು ನೋಡಿದರೆ ಅಭಿವೃದ್ಧಿ ಕಾರ್ಯದ ಕಾರ್ಯವೈಕರಿಯೇ ಜನತೆಗೆ ತಿಳಿಯುತ್ತದೆ.  ಶಾಸಕರ ಎಂಬಾಲಕರು ಎಷ್ಟು ಜನ ಜೈಲು ಸೇರಿದ್ದಾರೆ ಎಂದು ಪ್ರಶ್ನಿಸಿದವರು ಮುಂದಿನ ದಿನಗಳಲ್ಲಿ ಶಾಸಕರ ಆರ್ಭಟವು ನಡೆಯುವುದಿಲ್ಲ. ಮತದಾರ ಪ್ರಭು ವು ವೀಕ್ಷಿಸುತ್ತಿದ್ದಾನೆ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ  ತಹಸೀಲ್ದಾರ್ ರವರ ಮುಖಾಂತರ ಕಂದಾಯ ಸಚಿವರಿಗೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳಿಗೆ ಭೂ ಹಗರಣದ ಬಗ್ಗೆ ಸಿಓಡಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕೀರಪ್ಪ,   ಜೆಡಿಎಸ್ ಮುಖಂಡ ಶಿವಲಿಂಗಯ್ಯ,  ಎ. ಪಿ.ಎಂ.ಸಿ.ಯೋಗಾನಂದ, ಡಿ.ರಘು, ಫಿರ್ದೋಸ್ ಅಲಿ, ವಿಜಯ್ ಕುಮಾರ್, ಯಲ್ಲಾಪುರ ಗಂಗಣ್ಣ, ಕಡಬ ಗ್ರಾಮ ಪಂಚಾಯತಿ ಸದಸ್ಯರಾದ ಪುರುಷೋತ್ತಮ್, ಗೋಪಾಲ್ ಗೌಡ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಗುಬ್ಬಿ ತಾಲೂಕಿನ ಜಮೀನು ಕಳೆದುಕೊಂಡ ರೈತರು ಹಾಗೂ ಇನ್ನಿತರರು ಭಾಗವಹಿಸಿದ್ದರು.

     ವರದಿ:  ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.