ಪಾವಗಡ: ಇಂದು ಪಾವಗಡದ ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆಯನ್ನು ವೀಕ್ಷಿಸಿದರು.
ಸ್ವಾಮಿ ಜಪಾನಂದಜೀ ಮಹಾರಾಜ್ ರವರ ದೇಶವ್ಯಾಪಿ ಕಾರ್ಯಯೋಜನೆಗಳನ್ನು ಕಂಡು ಇದೇ ವೇಳೆ ಮುಕ್ತಕಂಠದಿಂದ ಅಭಿನಂದಿಸಿದರು
ಪಾವಗಡ ತಾಲ್ಲೂಕಿನಲ್ಲಿ ಸ್ವಾಮಿ ಜಪಾನಂದಜೀ ಮಹಾರಾಜ್ ನಡೆದಾಡುವ ದೇವರಂತೆ ಕಾರ್ಯವಹಿಸುತ್ತಾ ನಾನಾ ರೀತಿಯ ಸೇವಾ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅಹರ್ನಿಷಿ ಸೇವೆಯನ್ನು ಸಲ್ಲಿಸುತ್ತಿರುವುದು ನಮ್ಮೆಲ್ಲರ ಭಾಗ್ಯವೇ ಸರಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕೀಯ ಮುತ್ಸದ್ಧಿಗಳು ಹಾಗೂ ಇತರರು ಶಾಸಕರೊಂದಿಗೆ ಕೆಲಹೊತ್ತು ಸ್ವಾಮೀಜಿಯವರ ಕಾರ್ಯವೈಖರಿಯನ್ನು ವೀಕ್ಷಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q