ತುಮಕೂರು: ಕಾರ್ಮಿಕರ ದಿನ ಹಾಗೂ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹುಟ್ಟು ಹಬ್ಬ ಹಿನ್ನೆಲೆ ಸೈನಿಕರ ಕಲ್ಯಾಣ ನಿಧಿಗೆ ಶಾಸಕ ಜ್ಯೋತಿಗಣೇಶ್ ಅಭಿಮಾನಿಗಳ ಬಳಗ 1 ಲಕ್ಷ ದೇಣಿಗೆ ನೀಡಿತು.
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮೂಲಕ ಕೇಂದ್ರ ಸರ್ಕಾರಕ್ಕೆ ಚೆಕ್ ಹಸ್ತಾಂತರ ಮಾಡಲಾಯಿತು. ತುಮಕೂರು ನಗರದ ಟೌನ್ ಹಾಲ್ ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಚೆಕ್ ಹಸ್ತಾಂತರ ಮಾಡಲಾಯಿತು.
ಮಾಜಿ ಸೈನಿಕರು ಹಾಗೂ ನಗರ ಶಾಸಕ ಜ್ಯೋತಿಗಣೇಶ್ ಸಮ್ಮುಖದಲ್ಲಿ ಕೇಂದ್ರ ಸಚಿವರಿಗೆ ಅಭಿಮಾನಿಗಳು ಚೆಕ್ ನೀಡಿದರು.
ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸೈನಿಕರ ಅಕೌಂಟ್ ಗೆ ಹಾಕಿಸುವಂತೆ ಸೋಮಣ್ಣ ಸಲಹೆ ನೀಡಿದರು. ಜ್ಯೋತಿಗಣೇಶ್ ಅಭಿಮಾನಿಗಳು ದೇಣಿಗೆ ಮೂಲಕ ಸಂಗ್ರಹಿಸಿದ ಒಂದು ಲಕ್ಷ ರೂ ಹಣವನ್ನು ದೇಶದ ಭದ್ರತೆಗಾಗಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುವ ಸೈನಿಕರಿಗೆ ಅಳಿಲು ಸೇವೆ ಮಾಡಲಾಯಿತು.
ಈ ಮಹತ್ವದ ಕಾರ್ಯಕ್ಕೆ ಜ್ಯೋತಿಗಣೇಶ್ ಅಭಿಮಾನಿ ಬಳಗಕ್ಕೆ ಸೋಮಣ್ಣ ಧನ್ಯವಾದ ತಿಳಿಸಿದರು. ಕಾರ್ಯ ಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್ ಅಭಿಮಾನಿಗಳು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW