ತುರುವೇಕೆರೆ: ಕ್ಷೇತ್ರದ ಶಾಸಕರಾದ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಂಗವಾಗಿ ಎಂ.ಟಿ.ಕೃಷ್ಣಪ್ಪ ಅಭಿಮಾನಿ ಬಳಗದ ವತಿಯಿಂದ ಜೂ. 10ರಂದು ಪಟ್ಟಣದ ಚೌದ್ರಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಾಗಟ್ಟ ಚಂದ್ರೇಶ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ್ಮದಿನಾಚರಣೆಗೆ ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರಿಗೆ ಶುಭಾಶಯ ಕೋರಲು ತಾಲೂಕಿಗೆ ಆಗಮಿಸುತ್ತಿದ್ದು, ಬೃಹತ್ ಆರೋಗ್ಯ ತಪಾಸಣಾ ಶಿಬಿರ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆ ಸಹಯೋಗದೊಂದಿಗೆ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಈ ಶಿಬಿರದಲ್ಲಿ KIMS ಆಸ್ಪತ್ರೆ, ಬೆಂಗಳೂರು, ಹಾಗೂ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಉಚಿತ ಔಷಧ ವಿತರಣೆ ಸೇರಿದಂತೆ ವಿವಿಧ ಸೇವೆಗಳು ಸಾರ್ವಜನಿಕರಿಗೆ ಲಭಿಸಲಿವೆ ಎಂದು ತಿಳಿಸಿದರು.
ಶಿಬಿರದಲ್ಲಿ ಲಭ್ಯವಿರುವ ವೈದ್ಯಕೀಯ ವಿಭಾಗಗಳು:
ಹೃದಯ ತಜ್ಞರು (ECG, ECHO)
ಕಣ್ಣು, ದಂತ, ಚರ್ಮ, ಮೂತ್ರಪಿಂಡ ತಜ್ಞರು
ಗ್ಯಾಸ್ಟ್ರೋಎಂಟರೋಲಾಜಿ, ಮಹಿಳಾ ಹಾಗೂ ಸಾಮಾನ್ಯ ತಜ್ಞ ವೈದ್ಯರು , ಆಗಮಿಸಲಿದ್ದು ಈ ಆರೋಗ್ಯ ಶಿಬಿರದ ಹಾಗೂ ಶಾಸಕರ ಜನ್ಮದಿನವನ್ನು ಯಶಸ್ವಿಗೊಳಿಸಬೇಕೆಂದು
ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ, ಡಾ.ಚೌದ್ರಿ ನಾಗೇಶ್, ಮುಖಂಡರುಗಳಾದ ಹೆಚ್.ಆರ್. ರಾಮೇಗೌಡ, ಮಾಜಿ ಎಪಿಎಂಸಿ ಸದಸ್ಯ ವಿಜಯೇಂದ್ರ, ವೆಂಕಟಾಪುರ ಯೋಗೀಶ್, ಎ.ಬಿ.ಜಗದೀಶ್, ದೇವರಾಜ್ ಭುವನಹಳ್ಳಿ, ಚನ್ನಬಸವೇಗೌಡ ತಂಡಗ, ಸೋಮಣ್ಣ ಒಬ್ಬನಾಗಸಂದ್ರ, ತ್ಯಾಗರಾಜ್, ಬಡಗರಹಳ್ಳಿ, ದುಂಡ ಸುರೇಶ್, ಸೇರಿದಂತೆ ಜೆಡಿಎಸ್ ಮುಖಂಡರುಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW