ತುರುವೇಕೆರೆ: ರೈತರ ಎಡಮಟ್ಟೆ ಮುರಿಯುತ್ತದೆಯೋ ಸರಕಾರದ ಲಾಠಿ ಮುರಿಯುತ್ತದೆಯೋ ನೋಡೇ ಬಿಡೋಣ ಎಂದು ಸರ್ಕಾರದ ವಿರುದ್ಧ ಶಾಸಕ ಎಂ.ಟಿ.ಕೃಷ್ಣಪ್ಪ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು.
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ಎಕ್ಸ್ಪ್ರೆಸ್ ಪ್ರಾರಂಭಿಸುತ್ತೇವೆ ಎಂದು ಹೇಮಾವತಿ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದು ಕಾಮಗಾರಿಯ ಸ್ಥಳಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಕೋರಿದ್ದಾರೆ. ಇದು ಸರ್ಕಾದ ಅಭಿಪ್ರಾಯವಾಗಿದ್ದುಕಾಮಗಾರಿಯನ್ನು ಮಾಡಿಯೇ ತೀರುತ್ತೇವೆ ಎಂಬ ಹಠಕ್ಕೆ ಬಿದ್ದಂತಿದೆ.
ಸರ್ಕಾರಕ್ಕೆ ನಾಚಿಕೆಯಾಗಬೇಕು ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಮಾಗಡಿ ಭಾಗದ ಮೂರು ಟಿಎಂಸಿ ನೀರನ್ನು ಅವರು ತೆಗೆದುಕೊಂಡು ಹೋಗಲಿ ಅದಕ್ಕೆ ನಮ್ಮ ಅಭ್ಯಂತರವಿಲ್ಲ ಮೊನ್ನೆ ನಡೆದ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇನೆ, ನಾವು ಯಾವುದೇ ಕಾರಣಕ್ಕೂ ಕಾಮಗಾರಿ ನಡೆಯಲು ಬಿಡುವುದಿಲ್ಲ. ಅದರಂತೆ ನಮ್ಮ ಪಾಲಿನ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದೇನೆ ಎಂದರು.
ಸರ್ಕಾರ ಹಠಕ್ಕೆ ಬಿದ್ದು ಕೆಲವು ಶಾಸಕರುಗಳಿಗೆ ಅನುಕೂಲ ಮಾಡಿಕೊಡಲು ಈ ನಿರ್ಧಾರವನ್ನು ಮಾಡಿದ್ದಾರೆ. ಸರ್ಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಕೆಲಸವನ್ನು ಮಾಡುತ್ತೇವೆ ಎನ್ನುವುದು ಮೂರ್ಖತನ ಹಾಗೂ ಸಂವಿಧಾನ ವಿರೋಧಿಯಾಗಿದೆ. ನಾನು ಕರೆ ಕೊಡುತ್ತಿದ್ದೇನೆ ಆ ಭಾಗದ ರೈತರು ಸುಮಾರು 500 ಟ್ರಕ್ ನಲ್ಲಿ ಎಡೆಮಟ್ಟೇ ತಂದು ನಿಲ್ಲಿಸಿ ಹೋರಾಟ ಮಾಡೋಣ, ಈ ನೀರಾವರಿಯ ಹೋರಾಟದಲ್ಲಿ ರೈತರು ಗೆಲ್ಲುತ್ತಾರೋ, ಸರ್ಕಾರ ಗೆಲ್ಲುತ್ತದೆಯೋ ಎಂದು ಸರ್ಕಾರಕ್ಕೆ ಸವಾಲು ಹಾಕಿದರು.
ಈ ಸಂದರ್ಭದಲ್ಲಿ ಮುನಿಯೂರು ರಂಗಸ್ವಾಮಿ, ರಾಘು, ಪರಮೇಶ್, ಸೋಮನಹಳ್ಳಿ ಶಿವಾನಂದ್ ಸೇರಿದಂತೆ ಹಲವರು ಇದ್ದರು.
ವರದಿ : ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA