nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಎಂ.ವಿ.ವೀರಭದ್ರಯ್ಯ ಕ್ಷಮೆಯಾಚನೆಗೆ ಆಗ್ರಹ: ಕೇಬಲ್ ಅಳವಡಿಕೆಯಲ್ಲಿ ಲಂಚ, ಕ್ಷೇತ್ರಕ್ಕೆ ಅವಮಾನ: ಡಾ.ದೊಡ್ಡೇರಿ ಕಣಿಮಯ್ಯ
    ಮಧುಗಿರಿ April 5, 2023

    ಶಾಸಕ ಎಂ.ವಿ.ವೀರಭದ್ರಯ್ಯ ಕ್ಷಮೆಯಾಚನೆಗೆ ಆಗ್ರಹ: ಕೇಬಲ್ ಅಳವಡಿಕೆಯಲ್ಲಿ ಲಂಚ, ಕ್ಷೇತ್ರಕ್ಕೆ ಅವಮಾನ: ಡಾ.ದೊಡ್ಡೇರಿ ಕಣಿಮಯ್ಯ

    By adminApril 5, 2023No Comments3 Mins Read
    kanimaiha

    ಮಧುಗಿರಿ : ಹಾಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ ರಿಂದ  ಇತಿಹಾಸದಲ್ಲೇ ಕಂಡರಿಯದಂತಹ  ತಲೆ ತಗ್ಗಿಸುವ  ಘಟನೆ ನಡೆದಿದೆ ಎಂದು   ಜಿಲ್ಲಾ ಡಿ ಎಸ್ ಎಸ್ ಸಂಘಟನಾ ಸಂಚಾಲಕರಾದ ಡಾ.ದೊಡ್ಡೇರಿ ಕಣಿಮಯ್ಯ ತಿಳಿಸಿದರು

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಈ ಹಿಂದೆ ಮಧುಗಿರಿ ಕ್ಷೇತ್ರವನ್ನು ಆಳಿದ ಮಹಾನೀಯರ ಕಾಲದಲ್ಲೂ  ಇಂತಹ ಘಟನೆ ಎಂದಿಗೂ ನಡೆದಿಲ್ಲ, ಆದರೆ ಈ ಬಾರಿಯ ಹಾಲಿ  ಶಾಸಕರಿಂದ ಆದ ಅವಮಾನದಿಂದ  ಕ್ಷೇತ್ರದ ಮತದಾರರು   ತಲೆತಗ್ಗಿಸುವಂತಾಗಿದೆ, ಮತದಾರರಿಗೆ ಆದ ಅವಮಾನವನ್ನು ಖಂಡಿಸುತ್ತಾ ಈ ದಿನ ತಾಲೂಕಿನ ಎಲ್ಲಾ ಪ್ರಗತಿಪರ, ದಲಿತಪರ, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳಿಂದ  ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದರು.


    Provided by

    ಶಾಸಕರ ಅವಧಿಯಲ್ಲಿ ಬಹು ಜನರಿಗೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿಲ್ಲ, ಕಳೆದ ಕೋರೋಣ  ಸಾಂಕ್ರಾಮಿಕ ರೋಗದ ಸಮಯದಲ್ಲಿ ಕ್ಷೇತ್ರದ ಮತದಾರರ ಕಷ್ಟಕ್ಕೆ ಸ್ಪಂದಿಸದ ಶಾಸಕರು,  ಈಗ ಚುನಾವಣೆ ಸಮೀಪ ಇರುವ  ಸಂದರ್ಭದಲ್ಲಿ   ಮತದಾರರಿಗೆ   ಹಣದ, ಪ್ರವಾಸದ ಅಮಿಷಾಗಳು ಒಡ್ಡುತ್ತಿರುವುದು ಖಂಡನೀಯವಾಗಿದೆ.   ಕ್ಷೇತ್ರದ ಮತದಾರರ ಮುಂದೆ ಶಾಸಕರು ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ  ದೊಡ್ಡ ಹೋರಾಟ ಮಾಡಲಾಗುತ್ತದೆ ಎಂದು ಅವರು ಎಚ್ಚರಿಸಿದರು.

    ಕ್ಷೇತ್ರದ ಜನರು ಹಾಲಿ  ಶಾಸಕರಿಗೆ ಈ ಹಿಂದೆ ನಡೆದ  ಚುನಾವಣೆಯಲ್ಲಿ  78,000 ಮತನೀಡಿ ಜಯಶೀಲರನ್ನಾಗಿ ಮಾಡಿದ್ದು ಓ ಎಫ್ ಸಿ ಕೇಬಲ್ ಹಗರಣದಲ್ಲಿ ಶಾಸಕರು  ಲಂಚ ಸ್ವೀಕರಿಸುವುದಕ್ಕಾ? ಎಂದು ಜೀವಿಕ ಸಂಘಟನೆಯ ಚಿಕ್ಕಮ್ಮ  ಪತ್ರಿಕಾಗೋಷ್ಠಿಯಲ್ಲಿ  ಪ್ರಶ್ನಿಸಿದರಲ್ಲದೇ, ಕ್ಷೇತ್ರದ ಮತಬಾಂಧವರಿಗೆ ಆಗಿರುವ ಅನ್ಯಾಯಕ್ಕೆ ಶಾಸಕರು   ಮತದಾರರಲ್ಲಿ ಶಾಸಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಮಧುಗಿರಿ ತಾಲೂಕು ಅಧ್ಯಕ್ಷರಾದ ಪಾಂಡುರಂಗಯ್ಯ ಮಾತನಾಡಿ,   ಕ್ಷೇತ್ರದ   ಶಾಸಕರು  ಕೇಬಲ್ ಅಳವಡಿಕೆ ಕಾಮಗಾರಿಯಲ್ಲಿ  ಬೇಡಿಕೆ ಇಟ್ಟು ಒಂದುವರೆ ಲಕ್ಷ ಹಣ ಪಡೆದಿರುವುದು ಇದು  ನಾಚಿಕೆಯ ಸಂಗತಿ, ಇಂತಹ ಶಾಸಕರಿಂದ  ಇಡೀ ರಾಜ್ಯದಲ್ಲಿ ನಮ್ಮ ಕ್ಷೇತ್ರಕ್ಕೆ ಅವಮಾನವಾಗಿದೆ, ಈ ಹಿಂದೆ   ಕ್ಷೇತ್ರದಲ್ಲಿ ಹಲವಾರು ಶಾಸಕರುಗಳು ತಮ್ಮ ಅವಧಿಯಲ್ಲಿ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸ   ಕಾರ್ಯಗಳನ್ನು ಕ್ಷೇತ್ರದಲ್ಲಿ  ಮಾಡಿ ಒಳ್ಳೆಯ ಹೆಸರು ಗಳಿಸಿದ್ದು ನಾವು ಕಾಣಬಹುದು, ಶಾಸಕರ  ಅವಧಿಯಲ್ಲಿ ಕ್ಷೇತ್ರ ಅಭಿವೃದ್ಧಿ ಸಹ  ಆಗಿಲ್ಲ, ಎಲ್ಲಾ ಮತಬಾಂಧವರು ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಚುನಾವಣೆಯಲ್ಲಿ  ಜನಸಮಾನ್ಯರ ಹಿತ ಕಾಯುವ ವ್ಯಕ್ತಿಗೆ ಅಮೂಲ್ಯವಾದ ಮತ ನೀಡಿ ಎಂದು ಮನವಿ ಮಾಡಿದರು.

    ಮಾದಿಗ ದಂಡೋರ ಅಧ್ಯಕ್ಷರು ಸಿದ್ದಾಪುರ ರಂಗಶಾಮಣ್ಣ ಮಾತನಾಡಿ, ನಮ್ಮ ಮಧುಗಿರಿ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಮೇಲ್ಪಟ್ಟು ಮತ ಬಾಂಧವರಿದ್ದು,  ಇಡೀ ರಾಷ್ಟ್ರ ರಾಜ್ಯ ಮಟ್ಟದಲ್ಲಿ ನಮ್ಮ ಕ್ಷೇತ್ರಕ್ಕೆ  ಶಾಸಕರಿಂದ ಅವಮಾನವಾಗಿದೆ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕ್ಷೇತ್ರದ ಹಾಲಿ  ಶಾಸಕರು ಕೇಬಲ್  ಅಳವಡಿಕೆ  ಕಾಮಗಾರಿಯಲ್ಲಿ ಹಣ ಪಡೆದು ಕ್ಷೇತ್ರದ ಜನಸಾಮಾನ್ಯರ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಇಂತಹ ಶಾಸಕರಿಂದ ಕ್ಷೇತ್ರಕ್ಕೆ ಕೆಟ್ಟ ಹೆಸರು, ಈ ಕೂಡಲೇ ಶಾಸಕರು ಕ್ಷೇತ್ರ ಮತದಾರರ  ಮುಂದೆ ಕ್ಷಮೆ ಯಾಚಿಸಿ,  ಎಲ್ಲಾ ಮತಬಾಂಧವರ ವಿಶ್ವಾಸ ಪಡೆಯಬೇಕು. ಈ ಹಿಂದೆ 2013 ರಿಂದ 2018 ವರೆಗೆ  ಕ್ಷೇತ್ರದ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ರವರು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿರುವುದು ನಾವು ಕಾಣಬಹುದು, ಆದ್ದರಿಂದ  ಈ ಚುನಾವಣೆಯಲ್ಲಿ  ಕ್ಷೇತ್ರದ ಅಭಿವೃದ್ಧಿಗಾಗಿ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಿ ಆಶೀರ್ವಾದಿಸಿ ಎಂದು ತಿಳಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ್ ಗೌಡ ಬಣ ಮಧುಗಿರಿ ತಾಲೂಕು ಅಧ್ಯಕ್ಷರಾದ ಶಿವಕುಮಾರ್ ಮಾತನಾಡಿ, ಕ್ಷೇತ್ರದ ಶಾಸಕರು ರಸ್ತೆಯ ಅಭಿವೃದ್ಧಿ ವಿಚಾರದಲ್ಲಿ ಪ್ರತಿ ಕಿ.ಮೀ. ಗೆ 1 ಲಕ್ಷ  ಹಣ ಪಡೆಯುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದರೂ, ಒಂದೊಂದು ಕೆಲಸಕ್ಕೆ ಇಷ್ಟು ಹಣ ನೀಡಬೇಕು ಇಲ್ಲವಾದಲ್ಲಿ ಕೆಲಸ ಕಾರ್ಯದಲ್ಲಿ ಅಡೆತಡೆ ಉಂಟಾಗುವುದು ಖಚಿತ. ಇದು ನಾಚಿಕೆಯ ಸಂಗತಿ ಇಂತಹ  ಸಂಗತಿಯಿಂದ  ಕ್ಷೇತ್ರದ ಗೌರವಕ್ಕೆ ಧಕ್ಕೆಯಾಗಿದೆ  ಈ ಕೂಡಲೇ ಶಾಸಕರು ಕ್ಷೇತ್ರದ ಮತಬಾಂಧವರ ಮುಂದೆ ಕ್ಷಮೆಯಾಚಿಸಬೇಕು ಎಂದರು.

    ಈ ಸಂದರ್ಭದಲ್ಲಿ   ಜೀವಿಕ ಮಂಜು, ಮಾದಿಗ ದಂಡೋರ ರಾಘವೇಂದ್ರ, ಸಿದ್ದಾಪುರ  ಸಂಜೀವಯ್ಯ, ಡಾ.ಮಹಾರಾಜು, ರಾಜ್ ಗೋಪಾಲ್,  ಅಂಜಿನಪ್ಪ, ಕೃಷ್ಣಪ್ಪ ನಾಗೇಶ್ ನೀರಕಲ್ಲು, ರಂಗನಾಥ ವಿಜಿ  ಹಾಗೂ ವಿವಿಧ ಸಂಘಟನಾ ಅಧ್ಯಕ್ಷರು ಕಾರ್ಯದರ್ಶಿಗಳು  ಪದಾಧಿಕಾರಿಗಳು ಇದ್ದರು.

    ವರದಿ: ಅಬಿದ್, ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.