nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ

    January 2, 2026

    ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ

    January 2, 2026

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    • ವಾಸ್ತವ ಒಡೆದು ನೋಡಿದಾಗ?
    • ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಜೆಡಿಎಸ್ ಮುಖಂಡ ವೆಂಕಟಾಪುರ ವಾಗ್ದಾಳಿ
    ರಾಜ್ಯ ಸುದ್ದಿ May 20, 2024

    ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಜೆಡಿಎಸ್ ಮುಖಂಡ ವೆಂಕಟಾಪುರ ವಾಗ್ದಾಳಿ

    By adminMay 20, 2024No Comments2 Mins Read
    thuruvekere

    ತುರುವೇಕೆರೆ: “ನಮ್ಮ ತಾಲೂಕಿನ ಜನಪ್ರಿಯ ಶಾಸಕರಾದ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ರವರು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಮ್ಮ ಪಕ್ಷದ ಪರವಾಗಿ ಹಾಗೂ ವೈಯಕ್ತಿಕವಾಗಿ ಖಂಡಿಸುತ್ತೇನೆ. ನಾನು ನಿಮಗೆ ನೇರವಾಗಿ ಪ್ರಶ್ನೆ ಮಾಡುತ್ತೇನೆ. ನಮ್ಮ ಶಾಸಕರು ನಿಮ್ಮನ್ನು ಎಲ್ಲಿ ಕಳ್ಳ ಎಂದು ಹೇಳಿಕೆಯನ್ನು ನೀಡಿದ್ದಾರೆ? ತಮ್ಮಲ್ಲಿ ಆಡಿಯೋ ಅಥವಾ ವಿಡಿಯೋ ತುಣುಕುಗಳಿದ್ದರೆ ಬಹಿರಂಗಪಡಿಸಿ” ಎಂದು ತುರುವೇಕೆರೆ ತಾಲೂಕು ಜೆಡಿಎಸ್ ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್ ತುರುವೇಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ ವಿರುದ್ಧ ಕಿಡಿಕಾರಿದರು.

    ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಘೋಷ್ಠಿಯಲ್ಲಿ ಮಾತನಾಡಿ, “ತಾಕತ್ತಿದ್ದರೆ ಗುಬ್ಬಿಗೆ ಬನ್ನಿ ನಿಮ್ಮ ಕೊರಳಪಟ್ಟಿ ಹಿಡಿದು ಎಳೆದುಕೊಳ್ಳುತ್ತೇನೆ ಮತ್ತು ಕೃಷ್ಣಪ್ಪನವರ ಗಂಡಸ್ತನದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳ ಮುಂದೆ ಪ್ರಶ್ನೆ ಮಾಡಿದ್ದೀರಿ. ಕೃಷ್ಣಪ್ಪನವರ ಗಂಡಸ್ತನ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ನಿಮಗೆ ತಾಕತ್ತಿದ್ದರೆ ಕೃಷ್ಣಪ್ಪನವರ ಒಂದು ರೋಮ ಮುಟ್ಟಿ ಸಾಕು. ಮುಂದೆ ರಾಜ್ಯದಲ್ಲಿ ಯಾವ ರೀತಿಯ ಪರಿಣಾಮವಾಗುತ್ತದೆ ಎಂದು ನೋಡಿ.


    Provided by
    Provided by

    ವಾಸುರವರೆ ನೀವೇ ವೇಳೆ, ಜಾಗ ಎಲ್ಲವನ್ನು ಗೊತ್ತು ಮಾಡಿ ಆ ಜಾಗಕ್ಕೆ ನಾವು ಬರುತ್ತೇವೆ. ಮುಂದಿನ ಪರಿಣಾಮವನ್ನು ಕೂಡ ನೀವು ಎದುರಿಸಬೇಕಾಗುತ್ತದೆ. ಸಂಸದ ಜಿ.ಎಸ್. ಬಸವರಾಜ್ ಅವರ ಬಗ್ಗೆ ಮಾತನಾಡಿದ ಹಾಗೆ, ರಾಯಸಂದ್ರ ರವಿ ಅವರ ಮೇಲೆ ಹಲ್ಲೆ ಮಾಡಿದ ಹಾಗೆ, ಅನ್ನೋದನ್ನ ಮರೆತುಬಿಡಿ. ನಿಮಗೆ ಮಾಧ್ಯಮದ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಇನ್ನೊಮ್ಮೆ ಈ ರೀತಿ ನಮ್ಮ ನಾಯಕರ ಬಗ್ಗೆ ಮಾತನಾಡಬೇಡಿ” ಎಂದು ಎಚ್ಚರಿಸಿದರು.

    “ಜೆಡಿಎಸ್ ಕಾರ್ಯಕರ್ತರು ಯಾರು ಬಳೆ ತೊಟ್ಟು ಕೊಂಡಿಲ್ಲ. ಎಲ್ಲದಕ್ಕೂ ನಾವು ಕೂಡ ಸಿದ್ದರಿದ್ದೇವೆ. ನಮ್ಮ ಶಾಸಕರು ಹೋರಾಟದಿಂದ ಬಂದವರು ಎಂದು ನಿಮಗೂ ತಿಳಿದಿದೆ. ಇಡೀ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಕಾಯಕಲ್ಪ ತಂದುಕೊಟ್ಟಿದ್ದಾರೆ. ಈ ಕ್ಷೇತ್ರದ ಶಾಸಕರನ್ನಾಗಿ ನಾವು ಅವರನ್ನು ಪಡೆದದ್ದು ನಮ್ಮ ಪುಣ್ಯ. ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಪರಿಣಾಮ ನೆಟ್ಟಗಿರಲ್ಲ” ಎಂದು ಹೇಳಿ, ಇದು ನಿಮಗೆ ಎಚ್ಚರಿಕೆಯ ಗಂಟೆ ಎಂದರು.

    ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾದ ದೊಡ್ಡೇಗೌಡ, ಎಚ್.ಆರ್.  ರಾಮೇಗೌಡರು, ತಿಮ್ಮೇಗೌಡ ಬಡಾವಣೆ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ

    January 2, 2026

    ತಿಪಟೂರು: ಬುದ್ಧ, ಬಸವ ಮತ್ತು ಅಂಬೇಡ್ಕರ್ ರವರು ಜಗತ್ತಿನ ಬೆಳಕು. ಇವರುಗಳು ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದ ಅಸಮಾನತೆಯ ವಿರುದ್ಧ ಹೋರಾಡಿದ…

    ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ

    January 2, 2026

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    ವಾಸ್ತವ ಒಡೆದು ನೋಡಿದಾಗ?

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.