ಬೀದರ್: ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ ಶರಣು ಸಲಗರ್ ಅವರು ಮಾಜಿ ವಿಧಾನ ಪರಿಷತ್ ಸದಸ್ಯರು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿಜಯ್ ಸಿಂಗ್ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ, ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಶರಣು ಸಲಗರ್ ಅವರು ಪದೇ ಪದೇ ವಿಜಯ್ ಸಿಂಗ್ ಅವರ ಹೆಸರು ಬಳಸಿಕೊಂಡು ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಿತಿ ಕೇಂದ್ರದಿಂದ ಮಾಡಿದ ಕಾಮಗಾರಿಗಳು ಕಳಪೆಮಟ್ಟದಿಂದ ನಡೆಯುತ್ತಿವೆ. ಅದನ್ನು ವಿಜಯ ಸಿಂಗ್ ಅವರು ಬಯಲಿಗೆ ತಂದಿದ್ದರು ಮತ್ತು ಗುಣಮಟ್ಟ ಕಾಮಗಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕಿತ್ತು ಮಾಡಿದ್ದರು. ವಿಷಯವನ್ನು ಮುಚ್ಚಿ ಹಾಕಲು ಮತ್ತು ಜನರ ಗಮನ ಬೇರೆ ಕಡೆ ಸೆಳೆಯಲು ಶಾಸಕರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಮಗನಾದ್ರು ಎಲ್ಲೂ ಅಹಂಕಾರ ತೋರಿಸಿಲ್ಲ ಅಧಿಕಾರದ ದುರ್ಬಳಕೆಯು ಮಾಡಿಲ್ಲ ಆದರೆ ಶಾಸಕರು, ವಿಜಯ ಸಿಂಗ್ ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡಿ ಸಣ್ಣತನ ತೋರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC