ರಾಜ್ಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಇದರಿಂದಾಗಿ ನಿರಂತರವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಕೆಲವರು ಇದನ್ನೇ ಒಂದು ಬ್ಯುಸಿನೆಸ್ ಮಾಡಿಕೊಂಡಿದ್ದಾರೆ.
ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ಮಲೆನಾಡಿನ ಕೆಲ ಗ್ರಾಮಗಳ ಜನರು ಕತ್ತಲಲ್ಲಿ ಕಳೆಯುವಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೊಬೈಲ್ ಚಾರ್ಜ್ ಇಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳವಾಗಿ ಇಟ್ಟುಕೂಂಡ ಅಂಗಡಿಯೊಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಡುತ್ತಿದ್ದಾರೆ. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂ. ಹಾಗೂ ಹಾಲ್ಫ್ ಚಾರ್ಜ್ ಮಾಡಲು 40 ರೂ. ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಗ್ರಾಮದ ಶಾಮಿಯಾನ ಅಂಗಡಿಯಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜಿಂಗ್ ಮಾಡಿಕೊಡುವ ಕೆಲಸ ನಡೆಯುತ್ತಿದೆ.ಕೇಳಿದಷ್ಟು ಹಣ ಕೊಟ್ಟು ಮೊಬೈಲ್ ಚಾರ್ಜ್ ಮಾಡಿಸಿಕೊಳ್ಳಲು ಜನರು ಸಾಲುಗಟ್ಟಿ ನಿಂತಿದ್ದಾರೆ.ಸುಮಾರು 2,000 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಎಂದು ತಿಳಿದುಬಂದಿದೆ. 120 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂಪಾಯಿ ಹಾಗೂ 50 ಪರ್ಸೆಂಟ್ ಚಾರ್ಜ್ ಮಾಡಿಕೊಡಲು 40 ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಗ್ರಾಮದ ಯುವಕರು, ವಿದ್ಯಾರ್ಥಿಗಳು ಹಾಗೂ ಅವಶ್ಯಕತೆ ಇರುವವರು ಸಾಲುಗಟ್ಟಿ ನಿಂತು ಚಾರ್ಜ್ ಮಾಡಿಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA