nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026
    Facebook Twitter Instagram
    ಟ್ರೆಂಡಿಂಗ್
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ
    ರಾಜ್ಯ ಸುದ್ದಿ March 22, 2023

    ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ

    By adminMarch 22, 2023No Comments2 Mins Read
    yadiurappa

    ಮೋದಿಯವರು ಕಳೆದ ಎಂಟು ವರ್ಷಗಳ ಆಡಳಿತ ಅವಧಿಯಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೆ ,ಕೆಲಸ ಮಾಡುತ್ತಿದ್ದಾರೆ, ಅವರ ಕೈಯನ್ನು ನಾವು ಬಲಪಡಿಸಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

    ತುರುವೇಕೆರೆ ಪಟ್ಟಣಕ್ಕೆ ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು 50 ಕಾರ್ಯಕ್ರಮವನ್ನು ಮುಗಿಸಿ ಕಡೆ ಕಾರ್ಯಕ್ರಮ ನಿಮ್ಮ ತಾಲೂಕಿಗೆ ಬಂದಿದ್ದೇನೆ, ನೀವು ನನಗೆ ಅದ್ದೂರಿ ಸ್ವಾಗತ ಮಾಡಿ ಪ್ರೀತಿಯನ್ನು ತೋರಿಸಿದ್ದೀರಿ, ಇದಕ್ಕೆ ನಾನು ಯಾವಾಗಲೂ ಚಿರಋಣಿಯಾಗಿರುತ್ತೇನೆ. ಜೊತೆಗೆ ಮಸಾಲ ಜೈರಾಮ್ ಅವರನ್ನು 20,000 ಮತಗಳ ಅಂತರದಿಂದ ಗೆಲ್ಲಿಸುತ್ತೀರಿ ಎಂದು ನಾನು ಭಾವಿಸಿದ್ದೇನೆ ಎಂದರು.


    Provided by
    Provided by

    ಮೋದಿಯವರು ಕಳೆದ ಎಂಟು ವರ್ಷಗಳ ಆಡಳಿತ ಅವಧಿಯಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೆ, ಕೆಲಸ ಮಾಡುತ್ತಿದ್ದಾರೆ. ಅವರ ಕೈಯನ್ನು ನಾವು ಬಲಪಡಿಸಬೇಕಾಗಿದೆ. ಇನ್ನು ಎರಡು ತಿಂಗಳುಗಳಲ್ಲಿ ಚುನಾವಣೆ ವೇಳೆ ನೀವೆಲ್ಲ ಮಸಾಲ ಜಯರಾಮ್ ಪರ ನಿಂತು ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುತ್ತೇವೆಂದು ನಾನು ಭಾವಿಸಿದ್ದೇನೆ ಎಂದರು.

    ತಾಲೂಕಿನಲ್ಲಿ ರೈತರಿಗಾಗಿ ಹೇಮಾವತಿ ನೀರು ಸರಾಗವಾಗಿ ಅರಿಯಲು ನಾನು ಮುಖ್ಯಮಂತ್ರಿ ಆಗಿದ್ದಾಗ ಸಾವಿರದ ಇನ್ನೂರು ಕೋಟಿಗಳನ್ನು ನೀಡಿದ್ದೇನೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ 1,600 ಕೋಟಿ ಅನುದಾನವನ್ನು ನೀಡಿದ್ದೇನೆ. ಮಸಾಲ ಜೈರಾಮ್ ಅವರು ಎಲ್ಲಾ ಮಂತ್ರಿಗಳ ಮನೆಗೆ ಹೋಗಿ ಕ್ಷೇತ್ರದ ಅಭಿವೃದ್ಧಿಗೆ ಮಂಜೂರು ಮಾಡಿಸಿಕೊಂಡು ನಿಮ್ಮ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದಾರೆ ಎಂದು ತಿಳಿಸಿದರು.

    ನೀವು ಗಳೆಲ್ಲರೂ ಸೇರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಠೇವಣಿ ಕಳೆದುಕೊಳ್ಳುವ ರೀತಿ ಮಾಡಿ, ಅದು ನೀವು ಕೊಡುವ ನಮಗೆ ನೀಡುವ ಬಳುವಳಿ ಎಂದ ಅವರು, ಕಾಂಗ್ರೆಸ್ ಎಲ್ಲಾ ಕಡೆ ಠೇವಣಿ ಕಳೆದುಕೊಂಡು ದಿವಾಳಿಯಾಗಿದೆ. ನಾವು 150 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡುವುದು ಶತಸಿದ್ಧ. ಕಿಸಾನ್ , ಸಮ್ಮಾನ್ ಯೋಜನೆಯೆಲ್ಲಿ, 10.54 ಲಕ್ಷ ಫಲಾನುಭವಿಗಳ ಖಾತೆಗೆ 10,000 ರೂ ಗಳನ್ನು ಜಮಾ ಮಾಡಲಾಗುತ್ತಿದೆ, ಭಾಗ್ಯಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಹೆಣ್ಣು ಮಕ್ಕಳ ಬದುಕು, ಹಸನಾಗಿದೆ. ಕಾಂಗ್ರೆಸ್ ನವರ ಸುಳ್ಳು ಆಶ್ವಾಸನೆಗಳಿಗೆ ಕಿವಿಗೊಡಬೇಡಿ, ಮಸಾಲ ಜಯರಾಮ್ ರವರನ್ನು ದೊಡ್ಡ ಮೊತ್ತದಲ್ಲಿ ಗೆಲ್ಲಿಸಿ ಇಂತಹ ವ್ಯಕ್ತಿಯನ್ನು ಕಳೆದುಕೊಳ್ಳಬೇಡಿ ಎಂದು ಕರೆ ನೀಡಿದರು.

    ಸಚಿವ ಮಾಧುಸ್ವಾಮಿಯವರು ಮಾತನಾಡಿ , ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಹೇಮಾವತಿ ನೀರನ್ನು ಹರಿಸುವಲ್ಲಿ ಮಸಾಲಾ ಜೈರಾಮ್ ರವರ ಪಾತ್ರ ಬಹಳ ದೊಡ್ಡದು. ಹಾಗಾಗಿ ಈ ಬಾರಿಯೂ ಮಸಾಲ ಜಯರಾಮ್ ರವರನ್ನು ಶಾಸಕರನ್ನಾಗಿ ಮಾಡಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು.

    ಸಿ.ಟಿ.ರವಿ ಅವರು ಮಾತನಾಡಿ ಚಿಕ್ಕಮಗಳೂರು ಜಿಲ್ಲೆಗೂ ತುಮಕೂರು ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ, ನಮ್ಮ ಚಿಕ್ಕಮಗಳೂರಿನ ನೀರನ್ನು ನೀವು ಬಳಸುತ್ತಿದ್ದೀರಿ, ಆದ್ದರಿಂದ ಅವಿನಾಭಾವ ಸಂಬಂಧ, ನೀವು ನಿಮ್ಮ ಶಾಸಕರಾದ ಮಸಾಲ ಜೈರಾಮ್ ರವರನ್ನು ಗೆಲ್ಲಿಸಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಕೋಳಿಗಳಿಗೆ ಮಸಾಲೆಯನ್ನು ಮಸಾಲೆ ಜಯರಾಮ್ ರವರ ಮಸಾಲೆಯಲ್ಲಿ ಅರೆಯಿರಿ ಎಂದು ಕರೆ ನೀಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ: ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ…

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.