ಬೆಂಗಳೂರು: ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಸರ್ಕಾರಕ್ಕೆ ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಅವರು ಹೇಳಿದರು.
ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದರು.
ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


