nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ

    April 28, 2026

    ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ

    April 28, 2026

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    • ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ
    • ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ
    • ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಚರಣ್
    ರಾಜ್ಯ ಸುದ್ದಿ June 13, 2024

    ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಚರಣ್

    By adminJune 13, 2024No Comments2 Mins Read
    mohan charan 2

    ಒಡಿಶಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ ಕೃಷಿಕರಾಗಿ, ಆರೆಸ್ಸೆಸ್ ಶಾಲೆಯ ಶಿಕ್ಷಕರಾಗಿ, ಸರಪಂಚರಾಗಿ, ಆದಿವಾಸಿ ಹಕ್ಕುಗಳ ಹೋರಾಟಗಾರರಾಗಿ ಮತ್ತು ಗಣಿ ಮಾಫಿಯಾ ವಿರುದ್ಧದ ಚಳವಳಿಗಾರರಾಗಿ ವೈವಿಧ್ಯಮಯ ಅನುಭವಗಳನ್ನು ಹೊಂದಿದ್ದಾರೆ. ಈ ಪೂರ್ವ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸಿಎಂ ಆದ 52 ವರ್ಷ ವಯಸ್ಸಿನ ಮಾಝಿ ಕಿಯೊಂಝರ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ಶಾಸಕರಾದ ಮೇಲೂ ರಾಜಧಾನಿಯಲ್ಲಿ ನನಗೆ ಬಾಡಿಗೆ ಮನೆ ಮಾಡುವ ಸಾಮರ್ಥ್ಯ ಇಲ್ಲ ಎಂದು ಹೇಳಿದವರು.


    Provided by
    Provided by

    ಈ ಪೂರ್ವ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸಿಎಂ ಆದ 52 ವರ್ಷ ವಯಸ್ಸಿನ ಮಾಝಿ ಕಿಯೊಂಝರ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ದೇಶದ ಮೊಟ್ಟಮೊದಲ ಆದಿವಾಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮುದಾಯವಾದ ಸಂತಾಲ ಸಮಾಜಕ್ಕೆ ಸೇರಿದ ಮಾಝಿ ಅವರನ್ನು ಬಿಜೆಪಿ ಸಿಎಂ ಹುದ್ದೆಗೆ ಆಯ್ಕೆ ಮಾಡಿದೆ.

    ಆದಿವಾಸಿ ಪ್ರಾಬಲ್ಯದ ಜಾರ್ಖಂಡ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾರ್ಯತಂತ್ರದ ಭಾಗವಾಗಿ ಇವರನ್ನು ಬಿಜೆಪಿ ಆಯ್ಕೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

    ಕಿಯೊಂಝರ್ ದಕ್ಷಿಣ ಭಾಗದಲ್ಲಿ ಹುಟ್ಟಿ ಬೆಳೆದ ಮಾಝಿ ವಿದ್ಯಾರ್ಥಿ ಜೀವನದಲ್ಲೇ ಭರವಸೆಯ ನಾಯಕರಾಗಿ ಮೂಡಿಬಂದವರು. ಆದಿವಾಸಿ ಸಮುದಾಯದ ಸಮಸ್ಯೆಗಳಿಗಾಗಿ ಹೋರಾಟ ನಡೆಸುತ್ತಾ ಬಂದ ಅವರು, ಕಾನೂನು ಪದವಿ ಪಡೆದು ರಾಜಕೀಯಕ್ಕೆ ಧುಮುಕುವ ಮುನ್ನ ಆರೆಸ್ಸೆಸ್ ನ ಸರಸ್ವತಿ ಶಿಶು ವಿದ್ಯಾ ಕೇಂದ್ರದಲ್ಲಿ ಬೋಧನೆ ಮಾಡುತ್ತಿದ್ದರು.

    1997ರಿಂದ 2000ರ ವರೆಗೆ ಪಂಚಾಯತ್ ಸರಪಂಚರಾಗಿ ಕಾರ್ಯನಿರ್ವಹಿಸಿದ ಅವರು 2000ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

    ಬಿಜೆಪಿ ಆದಿವಾಸಿ ಮೋರ್ಚಾ ಕಾರ್ಯದರ್ಶಿಯಾಗಿ ಮಾಝಿ ಅವರ ಕಾರ್ಯದಕ್ಷತೆ ಅವರನ್ನು 2019ರಲ್ಲಿ ವಿಧಾನ ಸಭೆಯಲ್ಲಿ ವಿಪಕ್ಷದ ಮುಖ್ಯ ಸಚೇತಕರನ್ನಾಗಿ ಮಾಡಿತು. 2005 ರಿಂದ 2009ರಲ್ಲಿ ಬಿಜೆಡಿ ಜತೆಗಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅವರು ಉಪ ಮುಖ್ಯಸಚೇತಕರಾಗಿದ್ದರು.

    2019ರಲ್ಲಿ ಶಾಸಕರಾಗಿ ಆಯ್ಕೆಯಾದಾಗ ಸರ್ಕಾರ ಅವರಿಗೆ ಅತಿಥಿಗೃಹ ಮಂಜೂರು ಮಾಡುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಶಾಸಕರಾಗಿ ಹಲವು ರಾತ್ರಿಗಳನ್ನು ಫುಟ್ಪಾತ್ ನಲ್ಲಿ ಕಳೆದಿದ್ದಾಗಿ ವಿಧಾನಸಭೆಯಲ್ಲಿ ಹೇಳಿಕೆ ನೀಡುವ ಮೂಲಕ ಮಾಝಿ ಸುದ್ದಿಯಾಗಿದ್ದರು.

    ಬಾಡಿಗೆ ಮನೆಯನ್ನು ಪಡೆಯುವ ಸ್ಥಿತಿಯಲ್ಲಿ ತಾವಿಲ್ಲ ಎಂದು ಸ್ಪೀಕರ್ ಎಸ್.ಎನ್.ಪಾತ್ರೊ ಅವರಿಗೆ ಮಾಝಿ ತಿಳಿಸಿದ್ದರು. ಫುಟ್ಪಾತ್ ನಲ್ಲಿ ನಿದ್ದೆ ಮಾಡುತ್ತಿದ್ದ ಸಮಯದಲ್ಲಿ ಅವರ ಮೊಬೈಲ್ ಫೋನ್ ಕಳ್ಳತನವಾಗಿತ್ತು ಎಂದೂ ಹೇಳಿದ್ದರು.

    ಇದೀಗ ನಿಯೋಜಿತ ಸಿಎಂಗೆ ಹೊಸ ಬಂಗ್ಲೆ ಹುಡುಕುವ ಕಾರ್ಯದಲ್ಲಿ ಒಡಿಶಾ ಸರಕಾರದ ಆಡಳಿತ ಯಂತ್ರ ಮಗ್ನವಾಗಿದೆ. ಏಕೆಂದರೆ ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರು ತಮ್ಮ ಖಾಸಗಿ ಮನೆಯಲ್ಲಿ ಕಳೆದ 24 ವರ್ಷಗಳಿಂದ ಇದ್ದಾರೆ. ಇದರಿಂದಾಗಿ ಅವರಿರುವವರೆಗೆ ಸಿಎಂಗೆ ಅಧಿಕೃತ ನಿವಾಸ ಹುಡುಕುವ ಪ್ರಮೇಯ ಬಂದಿರಲಿಲ್ಲ.

    ಕಳೆದ ವರ್ಷ ಇದೇ ಮಾಝಿ ವಿಧಾನಸಭೆಯಿಂದ ಅಮಾನತಾಗಿದ್ದರು. ಒಡಿಶಾ ಸರಕಾರ ಶಾಲೆಗಳ ಬಿಸಿಯೂಟ ಯೋಜನೆಗೆ ತೊಗರಿ ಬೇಳೆ ಖರೀದಿಸುವಲ್ಲಿ ಅಕ್ರಮ ಎಸಗಿದೆ ಎಂದು ಆರೋಪಿಸಿ ಮಾಝಿ ಹಾಗೂ ಇನ್ನೊಬ್ಬ ದಲಿತ ಶಾಸಕ ಮುಕೇಶ್ ಮಹಾಲಿಂಗ ಅವರು ಒಂದಿಷ್ಟು ಬೇಳೆಯನ್ನು ಸ್ಪೀಕರ್ ಕಡೆಗೆ ಬಿಸಾಡಿದ್ದರು. ಅದಕ್ಕೆ ಸ್ಪೀಕರ್ ಪ್ರಮೀಳಾ ಮಲಿಕ್ ಅವರಿಬ್ಬರನ್ನು ಅಮಾನತು ಮಾಡಿದ್ದರು.

    2022 ರಲ್ಲಿ ಮೈನಿಂಗ್ ಮಾಫಿಯಾದಿಂದ ಕೆಲವು ಶಾಸಕರ ಜೀವಕ್ಕೆ ಅಪಾಯವಿದೆ ಎಂದು ಮಾಝಿ ಆರೋಪಿಸಿದ್ದರು. ಅದಕ್ಕೆ ಒಂದು ವರ್ಷ ಮೊದಲು ಕಿಯೊಂಝರ್ ನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾಝಿ ಅವರ ವಾಹನದ ಮೇಲೆ ಕಚ್ಚಾ ಬಾಂಬ್ ಎಸೆದಿದ್ದರು. ಆ ದಾಳಿಯಲ್ಲಿ ಮಾಝಿ ಬದುಕುಳಿದಿದ್ದರು. ಮಾಝಿ ಅವರ ಪತ್ನಿ ಪ್ರಿಯಾಂಕಾ ಮರಾಂಡಿ. ಅವರಿಗೆ ಇಬ್ಬರು ಪುತ್ರರಿದ್ದಾರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ

    April 28, 2026

    ಬೀದರ್: ಔರಾದ್ ತಾಲೂಕಿನ ಶಾಸಕ ಪ್ರಭು ಚವ್ಹಾಣ್ ಅವರು ದಲಿತ ಸಮುದಾಯದ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಮತ್ತು ಸುಳ್ಳು ಭರವಸೆಗಳನ್ನು…

    ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ

    April 28, 2026

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.