ಕೊರಟಗೆರೆ : ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಎನ್ನುವ ವೃದ್ದೆಯನ್ನು ತನ್ನ ಮೊಮ್ಮಗನೇ ಮನೆಯಿಂದ ಹೊರ ಹಾಕಿದ್ದ ದಾರುಣ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಧುಗಿರಿ ಉಪ ವಿಭಾಗಾಧಿಕಾರಿಗಳ ಆದೇಶದಂತೆ ಕೊರಟಗೆರೆ ತಹಶೀಲ್ದಾರ್ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಿರಿಯ ನಾಗರಿಕರ ಹಕ್ಕು ಕಾಯ್ದೆ ಅಡಿಯಲ್ಲಿ ಸುಮಾರು 80 ವಯಸ್ಸಿನ ಕಾವಲಮ್ಮ ವೃದ್ದೆಗೆ ತಾನು ವಾಸಿಸುತ್ತಿದ್ದ ಮನೆಯನ್ನು ಹಿಂದಿರುಗಿಸಿ ಕೊಟ್ಟಿರುವ ಘಟನೆ ನಡೆದಿದೆ.
ಘಟನೆಯ ಬಗ್ಗೆ ತಹಶೀಲ್ದಾರ್ ನರಸಿಂಹಮೂರ್ತಿ ಮಾತನಾಡಿ, ಉಪವಿಭಾಗಾಧಿಕಾರಿಗಳ ಆದೇಶದಂತೆ ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಲೇಟ್ ರಾಮಯ್ಯ ಎನ್ನುವವರನ್ನು ಮಾರುತಿ ಎನ್ನುವವರು ಬಲವಂತದಿಂದ ಮನೆಯಿಂದ ಹೊರ ಹಾಕಿದ್ದ ದೂರಿನ ಅನ್ವಯ ಮೇಲಾಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಭೇಟಿ ನೀಡಿ ವಯೋವೃದ್ದೆಯಾದ ಕಾವಲಮ್ಮನಿಗೆ ಇವರ ಮುಂದಿನ ಜೀವನವನ್ನು ಮನದಲ್ಲಿಟ್ಟುಕೊಂಡು ಕಾವಲಮ್ಮನಿಗೆ ಮನೆಯನ್ನು ಅಧಿಕಾರಿಗಳ ಸಮಕ್ಷಮದಲ್ಲಿ ಹಿಂತಿರುಗಿಸಲಾಯಿತು. ವಯೋವೃದ್ದೆಯಾದ ಕಾವಲಮ್ಮ ಇನ್ನು ಮುಂದೆ ಸಂತೋಷದಿಂದ ತನ್ನ ಮನೆಯಲ್ಲಿ ವಾಸಿಸಬಹುದು ಎಂದು ತಿಳಿಸಿದರು.
ತನ್ನ ಮನೆಗೆ ಮರಳಿ ಬಂದ ಅಜ್ಜಿ ಕಾವಲಮ್ಮ ಮಾತನಾಡಿ.. ಯಾವಾಗಲೂ ತನ್ನ ಮೊಮ್ಮಗ ಮಾರುತಿ ನನಗೆ ಬಹಳ ತೊಂದರೆ ಕೊಟ್ಟು ಸದಾ ಹಿಂಸೆ ಕೊಡುತ್ತಿದ್ದ ನನ್ನ ಗಂಡ ನಾನು ಕಷ್ಟಪಟ್ಟು ಕೂಲಿ ನಾಲಿ ಮಾಡಿ ಕಟ್ಟಿಕೊಡ ಮನೆಯಿಂದ ನನ್ನನ್ನೇ ಹೊರಹಾಕಿದ ಎಷ್ಟು ಬಾರಿ ಹೇಳಿದರೂ ಕೇಳುತ್ತಿರಲಿಲ್ಲ. ಇದೀಗ ಅಧಿಕಾರಿಗಳು ಬಂದು ನನ್ನ ಮನೆಯನ್ನು ನನಗೆ ಹಿಂತಿರುಗಿಸಿ ಕೊಟ್ಟಿದ್ದಾರೆ ತುಂಬಾ ಸಂತೋಷವಾಗಿದೆ. ನನ್ನ ಮುಂದಿನ ಜೀವನವನ್ನು ಸಂತೋಷದಿಂದ ನನ್ನ ಮನೆಯಲ್ಲಿ ನಡೆಸುತ್ತೇನೆ ಎಲ್ಲಾ ಅಧಿಕಾರಿಗಳಿಗೂ ಧನ್ಯವಾದ ಎಂದು ತಿಳಿಸಿದರು.
ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಪಾಪಿ ಮೊಮ್ಮಗ:
ತನ್ನ ಪೋಕರಿತನಕ್ಕೆ ಪುಂಡಾಟಿಕೆಗೆ ಅಜ್ಜಿ ಪ್ರತಿನಿತ್ಯ ಮೊಮ್ಮಗನಿಗೆ ಅಡ್ಡ ಬರುತ್ತಿದ್ದಳು ಎನ್ನುವ ಕಾರಣಕ್ಕೆ ಅಜ್ಜಿಯನ್ನೆ ಮನೆಯಿಂದ ಹೊರ ಹಾಕಿದರೆ ಮೊಮ್ಮಗ ತಾನು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದ. ಆದರೆ ಇಂತಹ ಪುಂಡರಿಗೆ ಕಾನೂನು ಎನು ಎನ್ನುವುದು ತಿಳಿದಿರುವುದಿಲ್ಲ.
ಆದರೆ ಇಂದು ಆತನಿಗೆ ಕಾನೂನು ತಿಳಿಯುವಂತೆ ಮಾಡಿದ ಕೊರಟಗೆರೆಯ ಅಧಿಕಾರಿಗಳು ವಯೋವೃದ್ಧರ ಕಾನೂನಿನ ಮನೆ ಕಳೆದುಕೊಂಡ ಅಜ್ಜಿಗೆ ಮರಳಿ ದೊರಕಿಸಿಕೊಟ್ಟಿದ್ದಾರೆ. ವಯೋವೃದ್ಧಿಗೆ ನ್ಯಾಯ ಸಿಕ್ಕಿರುವ ಸಂತೋಷವನ್ನು ತಹಶೀಲ್ದಾರ್ ನರಸಿಂಹಮೂರ್ತಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಎಎಸ್ ಐ ಧರ್ಮೇಗೌಡ ಸೇರಿದಂತೆ ಇತರ ಅಧಿಕಾರಿಗಳು ಮಾಧ್ಯಮದವರೊಂದಿಗೆ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳಾದ ಎ ಎಸ್ ಐ ಧರ್ಮೆಗೌಡ ಸಿಬ್ಬಂದಿ ಮಲ್ಲೇಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಾದ ಆರ್ ಐ ಪ್ರತಾಪ್, ಪವನ್ ಕುಮಾರ್, ಬಸವರಾಜ್, ರಾಘವೇಂದ್ರ, ದೊಡ್ಡೇಗೌಡ ಸೇರಿದಂತೆ ಸ್ಥಳೀಯ ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1