ತುಮಕೂರು: ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಅಣಕು ಮದುವೆ ಮಾಡಿ ಜನರಿಗೆ ಭೋಜನ ವ್ಯವಸ್ಥೆ ಮಾಡಿರುವ ಪ್ರಸಂಗ ತಿಪಟೂರು ತಾಲೂಕಿನ ಗುಳ್ಳೆಘಟ್ಟ ಗ್ರಾಮದಲ್ಲಿ ನಡೆದಿದೆ.
ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮತ್ತು ಕತ್ತೆಗಳಿಗೆ ಮದುವೆ ಮಾಡಿರುವ ಉದಾಹರಣೆಗಳಿವೆ. ಆದರೆ ಮಳೆಗಾಗಿ ಮಕ್ಕಳಿಗೆ ವಧುವರರಂತೆ ಅಲಂಕಾರ ಮಾಡಿ ಅಣಕು ಮದುವೆ ಮಾಡಿಸುವ ಈ ಆಚರಣೆಗೆ ‘ತಿಂಗಳ ಮಾವ’ ಅಂತ ಕರೆಯುತ್ತಾರಂತೆ.
ಹಲವು ದಿನಗಳಿಂದ ತಾಲೂಕಿನಲ್ಲಿ ಮಳೆಯಿಲ್ಲದೆ ರೈತರು ಬೆಳೆದಿದ್ದ ರಾಗಿ, ಭತ್ತ ಸೇರಿದಂತೆ ಇತರೆ ಬೆಳೆಗಳು ಒಣಗುತ್ತಿವೆ. ಇದರಿಂದ ಕಂಗೆಟ್ಟ ರೈತರು ಗ್ರಾಮದಲ್ಲಿ ಅಣಕು ವಿವಾಹ ಮಾಡಿದ್ದಾರೆ.
ಗ್ರಾಮದ ಶ್ರೀ ದುರ್ಗಮ್ಮ ದೇವಿ ದೇಗುಲದ ಮುಂಭಾಗ ಚಪ್ಪರ ಹಾಕಿ, ಬಾಳೆಕಂದು ಕಟ್ಟಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಇಡೀ ಗ್ರಾಮದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು.
ಕಾಕತಾಳಿಯವೆಂಬಂತೆ ಅಂದು ರಾತ್ರಿ ಸುರಿದ ಮಳೆಯಾಗಿದ್ದು ಗ್ರಾಮಸ್ಥರ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ಸಂಪ್ರದಾಯವನ್ನು ಗ್ರಾಮಸ್ಥರು ಒಂಬತ್ತು ದಿನಗಳ ಕಾಲ ‘ತಿಂಗಳ ಮಾವ’ ಎಂಬ ಆಚರಣೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q