ವಿಜಯಪುರ: ಮುಡಾ ಹಗರಣದ ವಿರುದ್ಧ ಬಿಜೆಪಿ ನಾಯಕರು ಪಾದಯಾತ್ರೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ ಮಾಡಿದ್ರೂ ಮಾಡೋರೆ, ವಿಜಯೇಂದ್ರ ಮಾಡಿರು ಮಾಡೋರೆ, ಅಶೋಕ ಮಾಡಿದ್ರು ಮಾಡೋರೆ. ನೀವೆಲ್ಲಾ ವಿಧಾನಸಭೆಗೆ ಹೋಗಿ ಅಡ್ಜೆಸ್ಟ್ಮೆಂಟ್ ಮಾಡಿಕೊಳ್ತೀರಿ. ನಮ್ಮ ಮುಂದೆ ಮಾತ್ರ ಸುಮ್ನೆ ಇರ್ತೀರ. ನೀವೇ ಡೈರೆಕ್ಷನ್ ಕೊಡ್ತೀರಿ. ಸರ್ ನೀವೆಲ್ಲ ಬಿಲ್ ಗಳನ್ನ ಪಾಸ್ ಮಾಡಿಕೊಳ್ಳಿ. ನಾವೂ ಧರಣಿ ಕೂರುತ್ತೀವಿ. ಅಡ್ಜರ್ನ್ ಮಾಡಿ ಹೀಗೆ ನೀವೂ ಕೊಡುವ ಡೈರೆಕ್ಷನ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಆಗ್ತಾ ಇದೆ. ಸುಮ್ಮ ಸುಮ್ಮನೆ ಕೇಸ್ ಹಾಕುತ್ತಾ ಇದ್ದಾರೆ. ಇವತ್ತು ಬಿಜೆಪಿ ಕಾರ್ಯಕರ್ತರು ಹೊರ ಬರುವ ಪರಿಸ್ಥಿತಿ ಇಲ್ಲ. ನೀವ್ ನೋಡುದ್ರೆ ಅಲ್ಲಿ ಹಲ್ಲು ಬಿಡುತ್ತಾ ನಿಲ್ತೀರಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
ನಾನು ಸಿದ್ದರಾಮಯ್ಯ ಅವರ ಮುಖವನ್ನ ಬರೀ ವಿಧಾನಸೌಧದಲ್ಲಷ್ಟೇ ನೋಡಿದ್ದೀನಿ. ರಾತ್ರಿ ಡಿಕೆಶಿ ಮನೆಗೆ ಹೋಗಿ ಪಾರ್ಟಿ ಮಾಡಿ, ಎಲ್ಲಿ ಏನು ಸ್ಟೇಟ್ಮೆಂಟ್ ಕೊಡಬೇಕು ಎಂಬ ಸೆಟಲ್ಮೆಂಟ್ ಇರುತ್ತೆ. ವಿಜಯೇಂದ್ರನ ಹಾಗೇ ನಾನು ಹಲ್ಕಾ ಸಿಡಿಗಳನ್ನ ಇಡುವುದಿಲ್ಲ. ಇವರು ಸಹಿ ಮಾಡಿಸಿಕೊಂಡಿದ್ದು ಎಲ್ಲಾ ಫೋಟೋ, ವಿಡಿಯೋ ತೆಗೆದಿಟ್ಟೀನಿ ನಾನು ಎಂದು ಯತ್ನಾಳ್ ಹೇಳಿದರು.
ಭ್ರಷ್ಟಾಚಾರದ ವಿರುದ್ಧ ಹೋರಾಟ ನಡಿತಿದೆ. ವಿಜಯೇಂದ್ರ ನೇತೃತ್ವದಲ್ಲಿ ಹೋಗುವುದಕ್ಕೆ ನಾವೂ ತಯಾರಿಲ್ಲ. ಹೈಕಮಾಂಡ್ ವಿಜಯೇಂದ್ರನನ್ನ ತಕ್ಷಣ ವಜಾ ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296