nammatumakuru

    Subscribe to Updates

    Get the latest creative news from FooBar about art, design and business.

    What's Hot

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025
    Facebook Twitter Instagram
    ಟ್ರೆಂಡಿಂಗ್
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲಾ, ಕಾಲೇಜುಗಳ ಮೂಲಭೂತ ಸೌಕರ್ಯಗಳ ಕೊರತೆ ನಿವಾರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು: ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ
    ತುಮಕೂರು July 22, 2023

    ಶಾಲಾ, ಕಾಲೇಜುಗಳ ಮೂಲಭೂತ ಸೌಕರ್ಯಗಳ ಕೊರತೆ ನಿವಾರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು: ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ

    By adminJuly 22, 2023No Comments2 Mins Read

    ತುಮಕೂರು: ಸರಕಾರಿ ಶಾಲಾ,ಕಾಲೇಜುಗಳು ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿದ್ದು,ಇವುಗಳ ಪೂರೈಸುವ ನಿಟ್ಟಿನಲ್ಲಿ ಸರಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಒತ್ತಾಯಿಸಿದ್ದಾರೆ.

    ತುಮಕೂರು ನಗರದ ಕನ್ನಡ ಭವನದಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ)ಆಯೋಜಿಸಿದ್ದ ನಿವೃತ್ತ ಪ್ರಾಂಶುಪಾಲ ರಿಗೆ ಸನ್ಮಾನ,ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ,ಪ್ರಾಂಶುಪಾಲರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು,ಸರಕಾರಿ ಕಾಲೇಜುಗಳಲ್ಲಿ,ಅದರಲ್ಲಿಯೂ ವಿಜ್ಞಾನ ಕಾಲೇಜುಗಳು,ಲೈಬ್ರರಿ, ಪ್ರಯೋಗಾಲಯಗಳ ಕೊರತೆ ಇಂದಿಗೂ ಕಾಡುತ್ತಿದೆ.ಗುಣಮಟ್ಟ ಶಿಕ್ಷಣ ಮಕ್ಕಳಿಗೆ,ಅದರಲ್ಲಿಯೂ ಗ್ರಾಮೀಣ ಮಕ್ಕಳಿಗೆ ದೊರೆಯಬೇಕಾದರೆ, ಮೂಲಭೂತ ಸೌಕರ್ಯಗಳ ಕೊರತೆ ನೀಗಬೇಕಿದೆ ಎಂದರು.


    Provided by
    Provided by

    ಕಳೆದ 20 ವರ್ಷಗಳಿಂದ ವೈ.ಎ.ನಾರಾಯಣಸ್ವಾಮಿ ಅವರು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತಿದ್ದಾರೆ. ಅನುದಾನಿತ ಕಾಲೇಜುಗಳ ಖಾಲಿ ಹುದ್ದೆಗಳ ತುಂಬಲು ಸರಕಾರದ ಮೇಲೆ ಒತ್ತಡ ತಂದಿದ್ದಾರೆ. 2020ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬುವಂತೆ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ನಮ್ಮಲ್ಲಿದೆ.ಗ್ರಾಮೀಣ ಭಾಗದಲ್ಲಿ ಕೆಲ ಅನುದಾನಿತ ಕಾಲೇಜುಗಳು ಏಕ ಶಿಕ್ಷಕ ಶಾಲೆಯಂತೆ ಗೋಚರಿಸುತಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಎಂ.ಎಲ್.ಸಿ. ಚಿದಾನಂದ ಎಂ.ಗೌಡ ತಿಳಿಸಿದರು.

    ಮುಂದಿನ ಒಂದು ವರ್ಷದಲ್ಲಿ ಆಗ್ನೆಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. ನಮ್ಮಲ್ಲರ ವೈ.ಎ.ಎನ್.ಮತ್ತೊಮ್ಮೆ ಆಯ್ಕೆ ಬಯಸಿದ್ದು, ನಿಮ್ಮೆಲ್ಲರ ಸಹಕಾರ ಬೇಕಿದೆ.ನಾನು ಜಿಲ್ಲೆಯ ಜವಾಬ್ದಾರಿ ಹೊತ್ತುಕೊಳ್ಳುವ ಭರವಸೆ ನೀಡಿದ್ದು, ಈ ನಿಟ್ಟಿನಲ್ಲಿ ನಮ್ಮ ನಿಮ್ಮ ಬಾಂಧವ್ಯ ಹೀಗೆಯ ಮುಂದುವರೆಯಲಿ ಎಂಬ ಆಶಯ ನಮ್ಮದಾಗಿದೆ ಎಂದರು.

    ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ,ಪ್ರಾಂಶುಪಾಲರು ಒಂದು ರೀತಿಯಲ್ಲಿ ಹಡಗಿನ ಕ್ಯಾಪ್ಟನ್ ಇದ್ದಂತೆ, ಹಡಗಿನ ಇತರೆ ಸಿಬ್ಬಂದಿಯ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದರೆ, ಹಡಗಿನ ಪ್ರಯಾಣ ಸುಖಕರವಾಗಿರುತ್ತದೆ. ನಾನು ದೊಡ್ಡವ ಎಂಬ ಅಹಂ ಪ್ರಾಂಶುಪಾಲರಲ್ಲಿ ಬಂದರೆ ಸಮಸ್ಯೆಗಳು ಆರಂಭವಾಗುತ್ತವೆ. ಹಾಗಾಗಿ ಬಸವಣ್ಣನವರ ‘ಎನಗಿಂತ ಕಿರಿಯರಿಲ್ಲ’ ಎಂಬ ನಾಣ್ನುಡಿಯನ್ನು ಪಾಲಿಸಿದರೆ ಪ್ರಾಂಶುಪಾಲರ ಕಾರ್ಯ ಸುಗಮವಾಗಲಿದೆ ಎಂದು ಕಿವಿ ಮಾತು ಹೇಳಿದರು.

    ಇಂದಿನ ಕಾರ್ಯಕ್ರಮ ಸಮಾಜ ಮೆಚ್ಚುವಂತಹದ್ದಾಗಿದೆ.ಸುಮಾರು 35—40 ವರ್ಷಗಳ ಕಾಲ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕೆಲಸ ಮಾಡಿದ ಹಿರಿಯರನ್ನು ಗೌರವಿಸುವುದರ ಜೊತೆಗೆ,ಕಲಾ,ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಜಿಲ್ಲೆಯ 11 ತಾಲೂಕುಗಳಿಂದ ಅತಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಗೌರವಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕೆಲಸ.ಇಂತಹ ಕೆಲಸಗಳಿಗೆ ಸದಾ ನನ್ನ ಬೆಂಬಲವಿದೆ. ಕಳೆದ 15 ವರ್ಷಗಳ ಶಾಸಕ ಜೀವನದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗೆ ಬಗೆಹರಿಸಲು ನಿರಂತರ ಪ್ರಯತ್ನ ನಡೆಸಿದ್ದೇನೆ. ಮುಂದೆಯೂ ನಿಮ್ಮ ಪರವಾಗಿ ವಿಧಾನಪರಿಷತ್ತಿನ ಒಳಗೆ ಮತ್ತು ಹೊರಗೆ ದ್ವನಿ ಎತ್ತಲಿದ್ದೇನೆ ಎಂಬ ಆಶ್ವಾಸನೆಯನ್ನು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ನೀಡಿದರು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಚಂದ್ರಶೇಖರ ಆರಾಧ್ಯ.ಹೆಚ್.ವಿ., ಪದವಿಪೂರ್ವ ಕಾಲೇಜು ಪ್ರಾಂಶುಪಾಲರಲ್ಲಿದ್ದ ಅನುದಾನಿತ, ಸರಕಾರಿ, ಅನುದಾನ ರಹಿತ ಸಂಘಗಳನ್ನು ಒಗ್ಗೂಡಿಸಿ, ಒಂದು ಸೂರಿನ ಅಡಿ ತಂದು, ಸಮಸ್ಯೆಗಳನ್ನು ಚರ್ಚಿಸಿ, ಸರಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಸಂಘ ಕೆಲಸ ಮಾಡುತ್ತಿದೆ.ಭೋಧನೆಯ ಜೊತೆಗೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಕಡೆಗೂ ಸಂಘ ಗಮನಹರಿಸಿದೆ.ಶಿಕ್ಷಕ ವೃತ್ತಿ ಎಂಬುದು ಪರಿವರ್ತನೆಯ ಹಾದಿ ಎಂದು ತಿಳಿದಿರುವ ಸಂಘ,ನಿವೃತ್ತ ಪ್ರಾಂಶಪಾಲರ ಸನ್ಮಾನದ ಜೊತೆಗೆ, ಪ್ರತಿಭಾವಂತ ಮಕ್ಕಳನ್ನು ಅಭಿನಂದಿಸುವ ಕಾರ್ಯ ಮಾಡುತ್ತಿದೆ ಎಂದರು.

    ಕಾರ್ಯಕ್ರಮದಲ್ಲಿ ಪ್ರಸ್ತುತ ಸಾಲಿನಲ್ಲಿ ನಿವೃತ್ತರಾದ ಸುಮಾರು 80 ಜನ ಪ್ರಾಂಶುಪಾಲರಿಗೆ, 36 ಜನ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪ್ರಭಾಕರ್ ರೆಡ್ಡಿ.ಕೆ ವಹಿಸಿದ್ದರು. ಪದವಿಪೂರ್ವ ಇಲಾಖೆ ಡಿಡಿಪಿಐ ಗಂಗಾಧರ್, ಕಸಾಪ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ, ಸಿ.ಎ.ವಿಶ್ವಾನಾಥ್,ಶ್ರೀಮತಿ ಅಕ್ಕಮ್ಮ, ಡಾ.ಕೆ.ಮೋಹನ್ ಕುಮಾರ್,ಕೋಶಾಧ್ಯಕ್ಷ ಕೃಷ್ಣಮೂರ್ತಿ, ಪ್ರೊಫೆಸರ್ ಶ್ರೀನಿವಾಸ್ ರೆಡ್ಡಿ, ಸಂಘಟನಾ ಕಾರ್ಯದರ್ಶಿ ಮುದ್ದಯ್ಯ, ರಾಜ್ಯ ಪ್ರತಿನಿಧಿ ಜೈರಾಮ್,  ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ,ರಾಜಕುಮಾರ್,ರವಿಶಂಕ ರ್,ಗೋವಿಂದರಾಜು, ದೀಕ್ಷ ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್, ಸತ್ಯನಾರಾಯಣ್, ಜ್ಯೋತಿಪ್ರಕಾಶ್, ಭೂತರಾಜು, ಚಿಕ್ಕಪ್ಪಯ್ಯ, ಧರ್ಮೆಂದ್ರ ರವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

    November 23, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ತುಮಕೂರು: ತಾಲ್ಲೂಕಿನ ಪಂಡಿತನ ಹಳ್ಳಿ ಸಮೀಪದ ಮಂದರ ಗಿರಿ ಬೆಟ್ಟದಲ್ಲಿರುವ ಗುರು ಮಂದಿರ ದೇವಾಲಯದ 450 ಮೆಟ್ಟಿಲುಗಳನ್ನು 2 ವರ್ಷ…

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.