nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಹುಭಾಷಿಕ ಅಧ್ಯಯನ ಮಾದರಿ ಬೆಳೆಯಬೇಕು: ಕಮಲಾಕರ ಭಟ್
    ತುಮಕೂರು April 6, 2025

    ಬಹುಭಾಷಿಕ ಅಧ್ಯಯನ ಮಾದರಿ ಬೆಳೆಯಬೇಕು: ಕಮಲಾಕರ ಭಟ್

    By adminApril 6, 2025No Comments2 Mins Read
    tumakuru vv

    ತುಮಕೂರು: ಬೇರೆಬೇರೆ ಭಾಷೆಗಳನ್ನು ಕಲಿತು ಅಲ್ಲಿ ಬಂದಿರುವ ಸಾಹಿತ್ಯದ ಅಧ್ಯಯನ ಮಾಡುವುದೇ ತೌಲನಿಕ ಅಧ್ಯಯನದ ಮೊದಲ ಮೆಟ್ಟಿಲು. ಬಹುಭಾಷಿಕ ಅಧ್ಯಯನ ಮಾದರಿ ಬೆಳೆಯಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬಹುಭಾಷಿಕ ವಿದ್ವತ್ತು ಕಡಿಮೆ ಆಗುತ್ತಿದೆ ಎಂದು ಮಹಾರಾಷ್ಟ್ರದ ಅಹಮದ್‌ನಗರ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಡಾ.ಕಮಲಾಕರ ಭಟ್ ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಅಲ್ಲಮಪ್ರಭು ಅಧ್ಯಯನ ಪೀಠವು ಇಂಗ್ಲಿಷ್ ಹಾಗೂ ಕನ್ನಡ ವಿಭಾಗಗಳ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಕೀರ್ತಿನಾಥ ಕುರ್ತಕೋಟಿಯವರ ‘ಕರ್ಟೆಸಿ ಆಫ್ ಕ್ರಿಟಿಸಿಸಂ’ ಲೇಖನಗಳ ಸಂಕಲನದ ಅನುವಾದಿತ ಕೃತಿಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಬಹುಭಾಷಿಕ ಅಧ್ಯಯನದ ಮಾದರಿಯನ್ನು ತೋರಿಸಿಕೊಟ್ಟವರು ಕುರ್ತಕೋಟಿ. ಅವರಿಗೆ ಹಿಂದಿ, ಮರಾಠಿ, ಇಂಗ್ಲಿಷ್, ಕನ್ನಡ, ಸಂಸ್ಕೃತ, ಗುಜರಾತಿ ಮೊದಲಾದ ಭಾಷೆಗಳ ಸಾಹಿತ್ಯದ ಆಳವಾದ ಪರಿಚಯ ಇತ್ತು. ಇಂತಹ ವಿದ್ವತ್ತು ಈಗ ಕಡಿಮೆಯಾಗಿದೆ ಎಂದರು.

    ಯಾವ ಭಾಷೆಯೂ ಸ್ವಯಂಪೂರ್ಣ ಅಲ್ಲ. ಒಂದು ಭಾಷೆಗೆ ಇನ್ನೊಂದರೊಂದಿಗೆ ಅವಿನಾಭಾವ ಸಂಬಂಧ ಇರುತ್ತದೆ. ಪರಸ್ಪರ ಕೊಂಡುಕೊಳ್ಳುವಿಕೆಯಿಂದ ಅವು ಶ್ರೀಮಂತವಾಗುತ್ತವೆ. ಸಾಹಿತ್ಯ ಪರಂಪರೆಗಳು ಕೂಡ ಸ್ವಯಂಪೂರ್ಣ ಅಲ್ಲ. ಒಂದು ಇನ್ನೊಂದರೊಂದಿಗೆ ನಿರಂತರ ಸಂಭಾಷಣೆಯಲ್ಲಿ ತೊಡಗಿರುತ್ತವೆ. ಆದರೆ ಇದನ್ನು ನಮ್ಮಸಾಹಿತ್ಯ ಅದ್ಯಯನಗಳು ಗಂಭೀರವಾಗಿ ಪರಿಗಣಿಸಿಲ್ಲ ಎಂದರು.

    ವಿಚಾರಗಳನ್ನು ಬಹಳ ಸರಳವಾಗಿ ಹೇಳುವ ಕೌಶಲ ಕುರ್ತಕೋಟಿಯವರಿಗೆ ಸಿದ್ಧಿಸಿತ್ತು. ಅವರು ಕೇವಲ ವಿದ್ವಾಂಸರಿಗಾಗಿ ಬರೆಯುತ್ತಿರಲಿಲ್ಲ. ತಮ್ಮ ಓದುಗರು ಅಥವಾ ಕೇಳುಗರು ತಮಗಿಂತ ಕಡಿಮೆ ತಿಳಿದವರು ಎಂಬ ಭಾವನೆಯೂ ಅವರಲ್ಲಿರಲಿಲ್ಲ ಎಂದರು.

    ಸಾಹಿತ್ಯ ಇತಿಹಾಸ ಬರವಣಿಗೆಯ ಹೊಸ ಮಾದರಿಯನ್ನು ಕುರ್ತಕೋಟಿಯವರು ಕೊಟ್ಟಿದ್ದಾರೆ. ಅವರ ವಿಮರ್ಶೆಯಲ್ಲಿ ಹೊಸ ಹೊಳಹುಗಳಿರುತ್ತಿದ್ದವು. ಅವರನ್ನು ಕನ್ನಡೇತರರಿಗೆ ಪರಿಚಯಿಸುವ ಉದ್ದೇಶದಿಂದ ‘ಕರ್ಟೆಸಿ ಆಫ್ ಕ್ರಿಟಿಸಿಸಂ’ ಕೃತಿ ರಚಿಸಿದ್ದೇನೆ ಎಂದರು.

    ಅಲ್ಲಮಪ್ರಭು ಅಧ್ಯಯನಪೀಠದ ಸಂಯೋಜಕ ಪ್ರೊ. ಎನ್.ಎಸ್. ಗುಂಡೂರ ಮಾತನಾಡಿ, ಕುರ್ತಕೋಟಿಯವರು ನಮ್ಮ ನಡುವಿನ ನಿಜವಾದ ಸಾಹಿತ್ಯಕ ಚರಿತ್ರಕಾರ. ಸಾಮಾನ್ಯ ವಿದ್ಯಾರ್ಥಿಗೂ ಅರ್ಥವಾಗುವ ಭಾಷೆಯಲ್ಲಿ ಅವರ ಬರವಣಿಗೆ ಇತ್ತು. ಪಶ್ಚಿಮದ ಪ್ರಸಿದ್ಧ ಕವಿಗಳು ಹೇಳದ ಅನೇಕ ಹೊಳಹುಗಳನ್ನು ಅವರು ತಮ್ಮ ಕೃತಿಗಳಲ್ಲಿ ನೀಡಿದರು. ಪ್ರತಿಭೆ ಕಣ್ಣು ತೆರೆದರೆ ಜೀವನ ಸಾರ್ಥಕವಾಗ್ತದೆ ಎಂಬುದಕ್ಕೆ ಅವರೇ ನಿದರ್ಶನ ಎಂದರು.

    ಪ್ರಾಧ್ಯಾಪಕರಾದ ಪ್ರೊ. ನಿತ್ಯಾನಂದ ಬಿ. ಶೆಟ್ಟಿ, ಪ್ರೊ. ಹೆಚ್.ಕೆ.ಶಿವಲಿಂಗಸ್ವಾಮಿ, ಡಾ. ಗೀತಾ ವಸಂತ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ…

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.