ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ವಲಸೆ ಕಾರ್ಮಿಕ ಯುವಕನೊಬ್ಬನನ್ನು ಸುಮಾರು 30 ಜನರ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಯುವಕ ಅಶ್ರಫ್ ಹತ್ಯೆಗೀಡಾಗಿರುವ ಯುವಕನಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಕಂಡು ಬಂದಿದೆ.
ಭಾನುವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಹಿನ್ನೆಲೆ ಪೊಲೀಸರು ಅನುಮಾನದ ಮೇರೆಗೆ ಶವಪರೀಕ್ಷೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಬೆನ್ನಿನ ಭಾಗಕ್ಕೆ ಬಿದ್ದ ಬಲವಾದ ಏಟು, ಶಾಕ್ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕದೇ ಇರುವುದು ಮರಣಕ್ಕೆ ಕಾರಣ ಎಂದು ತಿಳಿದು ಬಂದಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಎ.27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆದಿದ್ದು, ಈ ವೇಳೆ ಸಚಿನ್ ಎಂಬ ವ್ಯಕ್ತಿಯೊಂದಿಗೆ ಅಶ್ರಫ್ ಗೆ ವಾಗ್ವಾದ ನಡೆದಿತ್ತು. ಈ ವೇಳೆ ಗುಂಪು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW