ಕೊರಟಗೆರೆ: ಪಟ್ಟಣದ ಕೋಟೆ ಬೀದಿಯ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಬೆಟ್ಟದಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ಮೂರು ಚಿರತೆಗಳು ದಾಳಿ ನಡೆಸಿದೆ.
ಚಿರತೆಗಳ ದಾಳಿಗೆ ಒಂದು ಮೇಕೆ ಬಲಿ: ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮೇಕೆ ಕಳೆದುಕೊಂಡ ರೈತನಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಹಲವು ತಿಂಗಳುಗಳಿಂದ ಒಂದೊಂದಾಗಿ ಮೇಕೆ ಹಾಗೂ ಸಾಕು ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಗೆ ಆಹಾರವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಬೆಟ್ಟದ ತಪ್ಪಲಿನಲ್ಲಿ ಕುಡಿಯುವ ನೀರಿನ ಬಾವಿ ಇದ್ದು ಸಾರ್ವಜನಿಕರ ಪ್ರತಿನಿತ್ಯ ಅಲ್ಲಿಗೆ ಬರಬೇಕು. ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಳಕು ಇಲ್ಲದ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಚಿರತೆಗಳು ದಾಳಿ ಮಾಡಿದರೆ, ಏನು ಮಾಡಬೇಕು? ಎಂದು ಆತಂಕ ವ್ಯಕ್ತಪಡಿಸಿರುವ ಸಾರ್ವಜನಿಕರು, ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ವಹಿಸಿ ಚಿರತೆಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz