ಮಧುಗಿರಿ : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಮತ್ತು ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಪಾಠಶಾಲೆ ಮತ್ತು ಪ್ರೌಢಶಾಲೆಗಳ ಒಟ್ಟಾರೆ 92677 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅನ್ನಪೂರ್ಣ ಪೌಷ್ಟಿಕ ಆರೋಗ್ಯ ಮಿಕ್ಸ್ ವಿತರಿಸುವ ಯೋಜನೆ ಕಾರ್ಯಕ್ರಮವನ್ನು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಮತ್ತು ಜಪಾನಂದ ಸ್ವಾಮಿ ರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಜಪಾನಂದ ಸ್ವಾಮಿಜಿ ಮಾತನಾಡಿ, ನಾವು ತಿನ್ನುವ ಆಹಾರ ಎಷ್ಟು ಪೌಷ್ಟಿಕವಾಗಿದೆ ಅಥವಾ ನಮ್ಮ ಮಕ್ಕಳಿಗೆ ತಿನ್ನಲು ಕೊಡಿಸುತ್ತಿರುವ ತಿನಿಸು ಅವರ ಆರೋಗ್ಯಕ್ಕೆ ಪೂರಕವೇ ಎಂಬ ಬಗ್ಗೆ ಒಮ್ಮೆ ಕೂಡ ನಾವು ಯೋಚಿಸುವುದಿಲ್ಲ. ಇಂತಹ ಆಹಾರ ಪದ್ಧತಿಯಿಂದ ನಮ್ಮ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ನಾವು ಸಾರಾಸಗಟಾಗಿ ನಿರ್ಲಕ್ಷಿಸಿದ್ದೇವೆ. ಅಪೌಷ್ಟಿಕತೆ ಮಕ್ಕಳ ಮೇಲೆ ತೀರಾ ಪ್ರಮಾಣ ಬೀರುತ್ತಿದೆ ಆದ್ದರಿಂದ ಮಕ್ಕಳ ಪೌಷ್ಟಿಕತೆಯ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಕಾಳಜಿವಹಿಸಿ ಎಂದು ಕರೆ ನೀಡಿದರು.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ರಾಜ್ಯದಲ್ಲಿ ಮೂರು ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಜಪಾನಂದ ಸ್ವಾಮಿರವರು ಪೌಷ್ಟಿಕ ಆರೋಗ್ಯ ಮಿಕ್ಸ್ ವಿತರಿಸುವ ಮೂಲಕ ಅಪೌಷ್ಟಿಕ ನಿರ್ಮೂಲನ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದರಿಂದ ರಾಜ್ಯದ ಪ್ರತಿಯೊಬ್ಬ ಮಕ್ಕಳಿಗೂ ಈ ಸೌಲಭ್ಯ ಸಿಗಲೆಂದು ಆಶಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದಗೌಡ, ಹಾಗೂ ಬಿಜೆಪಿ ಪ್ರಮುಖ ಮುಖಂಡರಾದ ಹನುಮಂತೇಗೌಡ ಉಪವಿಭಾಗ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಾಲ್ಲೂಕು ದಂಡಾಧಿಕಾರಿಗಳಾದ ಸುರೇಶ್ ಆಚಾರ್, ಹಾಗೂ ತಾಲೂಕಿನ ಜೀವನ ಶಿಕ್ಷಕ ವೃಂದದವರು ಹಾಜರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy