nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2028ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದೇ ನನ್ನ ಗುರಿ: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ
    ತುಮಕೂರು June 17, 2025

    2028ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದೇ ನನ್ನ ಗುರಿ: ತುಮಕೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ

    By adminJune 17, 2025No Comments2 Mins Read
    nikhil kumaraswamy

    ತುಮಕೂರು : ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ತುಮಕೂರು ಪ್ರವಾಸ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅವರು ಗುಬ್ಬಿ ಮತ್ತು ಕುಣಿಗಲ್ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸ ಹಾಗೂ ಮಿಸ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.

    ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಇವತ್ತಿಂದ ರಾಜ್ಯ ಪ್ರವಾಸ ಮಾಡುತ್ತಿರುವುದು ನನ್ನ ಸೌಭಾಗ್ಯ ಇದು. ನಾನು ಇಡೀ ರಾಜ್ಯ ಪ್ರವಾಸ ಮಾಡುತ್ತಿರುವುದು ನಿಮ್ಮ ಜತೆಗೆ ಸಂಬಂಧ ಬೇಕು, ಸಂಪರ್ಕ ಬೇಕು, ಭಾಂದವ್ಯ ಬೇಕು ನಮ್ಮ ನಿಮ್ಮ ನಂಟು ಬೆಳಿಯಬೇಕು ಎಂದು ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು.


    Provided by
    Provided by

    ಈ ಪಕ್ಷದಲ್ಲಿ ದುಡಿದಿರುವ ಎಲ್ಲಾ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡ್ತೀನಿ. ಯುವಕರು ಇಂದು ದೊಡ್ಡ ಮಟ್ಟದಲ್ಲಿ  ನನ್ನ ಜತೆ ಹೆಜ್ಜೆ ಹಾಕಲು ಮುಂದೆ ಬಂದಿದ್ದಾರೆ. ನಾವೆಲ್ಲರೂ ಮೊದಲು ಪಕ್ಷದಲ್ಲಿನ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗೋಣ ಎಂದು ಯುವಕರಿಗೆ ಮನವಿ ಮಾಡಿದರು.

    ನಾನು ಶಾಸಕನಾಗಬೇಕು, ಸಂಸದನಾಗಬೇಕೆಂದು ರಾಜ್ಯ ಪ್ರವಾಸ ಮಾಡುತ್ತಿಲ್ಲ, ನಾನು ಶಾಸಕನಾಗಬೇಕಾಗಿದ್ರೆ  ನಾನು ರಾಜ್ಯ ಪ್ರವಾಸ ಮಾಡುವ ಅಗತ್ಯ ಇರಲಿಲ್ಲ.  ಸಂಸದ ಆಗೋದು ನನ್ನ ಗುರಿಯಲ್ಲ. ಪಕ್ಷ ಕಟ್ಟಿದವರಿಗೆ ದಡ ಮುಟ್ಟಿಸಬೇಕು ನೀವೆಲ್ಲಾ ನಮ್ಮ ಜೊತೆ ಕೈ ಜೋಡಿಸಿ ಎಂದು ಮನವಿ ಮಾಡಿದರು.

    ಸಾರ್ವತ್ರಿಕ ಚುನಾವಣೆ ಯಾವಾದರೂ ಆಗಲಿ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ಬುನಾದಿಯಾಗಲಿ. ಸಾಕಷ್ಟು ಜನ ದೊಡ್ಡ ದೊಡ್ಡ ಹಿರಿತಲೆಗಳು ದೇವೇಗೌಡರ ಜತೆ ರಾಜಕಾರಣ ಮಾಡಿದ್ದಾರೆ, ಅಂದು 58 ಶಾಸಕರನ್ನ ಜೆಡಿಎಸ್ ಗಳಿಸಿತ್ತು. ಆದ್ರೆ ಇವತ್ತು ನಾವೆಲ್ಲರೂ ಶಪಥ ಮಾಡೋಣ. ಮುಂದಿನ ದಿನಗಳಲ್ಲಿ ಎರಡು ರಾಷ್ಟೀಯ ಪಕ್ಷಗಳಿಗಿಂತ ಅತೀ ಹೆಚ್ಚು ಸ್ಥಾನಗಳನ್ನ ಗಳಿಸೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

    ಅಕ್ಕ ಪಕ್ಕದ ತಮಿಳುನಾಡು –ಆಂಧ್ರಪ್ರದೇಶ, ತೆಲಂಗಾಣದಲ್ಲಿ ಪ್ರಾದೇಶಿಕ ಪಕ್ಷ ಆಡಳಿತ ನಡೆಸುತ್ತಿದೆ. ಆದರೆ ದೇವೇಗೌಡರ ಕೊಡುಗೆ, ಅವರ ಸಾಧನೆಗಳು ಅತ್ಯಂತ ಕಡಿಮೆ ಅವಧಿಯಲ್ಲಿ ಅಪಾರ, ಈಗ ಕುಮಾರಣ್ಣ ಅವರು ಏಕಾಂಗಿಯಾಗಿ ಪಕ್ಷವನ್ನ ಕಟ್ಟಿದ್ದಾರೆ.ಈ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಎಂದರು.

    ನನಗೆ ಒಂದು ಬೇಸರಯಿದೆ. ನಮ್ಮ ಕಾರ್ಯಕರ್ತರು ಎಲ್ಲಾ ರೀತಿಯಲ್ಲಿ ಹಿಂದುಳಿದಿದ್ದಾರೆ. ಅಧಿಕಾರದಲ್ಲಿದ್ದಾಗ ಅವರನ್ನ ಗುರುತಿಸಬೇಕು. ಆ ಹೊಣೆಗಾರಿಕೆಯನ್ನು ನೀವು ಹೊತ್ತುಕೊಳ್ಳಬೇಕು ಎಂದು ನನಗೆ ಸುರೇಶ್ ಬಾಬಣ್ಣ ಹೇಳ್ತಿದ್ರು. ನನಗೆ ದೊಡ್ಡ ಜವಾಬ್ದಾರಿ ಇದೇ 2028ಕ್ಕೆ ಅತೀ ಶಾಸಕರನ್ನ ಗೆಲ್ಲಿಸಿಕೊಂಡು ಬರಬೇಕು ನಿಮ್ಮ ಜತೆ ನಾವಿದ್ದೇವೆ ಎಂದು ಧೈರ್ಯತುಂಬಿದರು.

    ರಾಜ್ಯದ 31 ಜಿಲ್ಲೆಗಳಲ್ಲೂ ಪ್ರವಾಸ ಮಾಡುತ್ತೇನೆ,  21 ಜಿಲ್ಲೆ ಬಳಿಕ ಎರಡನೇ ಹಂತದಲ್ಲಿ ಅಭಿಯಾನ ಮಾಡ್ತೀವಿ ಕಾರ್ಯಕರ್ತರ ಜೊತೆ ನಾವಿದ್ದೇವೆ ಪಕ್ಷ ಇದೇ. HDD ಮತ್ತು HDK ಅವರ ನಾಯಕತ್ವದಲ್ಲಿ  ನಾವು ಮುನ್ನಡೆಯೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

    ಚುನಾವಣೆಯಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ, ಸೋಲಿನಿಂದ ಎದೆಗುಂದದೆ ಮುಂದೆ ಹೋಗಬೇಕು. ಯಾರಿಗೂ ಅಧಿಕಾರ ಶ್ವಾಶ್ವತ ಅಲ್ಲ. ಗುಬ್ಬಿ ಕ್ಷೇತ್ರದಲ್ಲಿ ನಾವು ಸೋತಿರಬಹುದು ಆದರೆ ‌ಮುಂದೆ ಜನ ನಮ್ಮನ್ನ ಗುರುತಿಸುತ್ತಾರೆ. ರಾಜ್ಯಕ್ಕೆ ಕುಮಾರಣ್ಣನ ಅನಿವಾರ್ಯವಿದೆ ಎಂದು ಸಾಮಾನ್ಯ ಜನ ಮಾತಾಡುತ್ತಿದ್ದಾರೆ. ಅದು ಮುಂದಿನಗಳಲ್ಲಿ ಆಗಲಿದೆ ಎಂದು ತಿಳಿಸಿದರು.

    ದೇವೇಗೌಡ, ಕುಮಾರಸ್ವಾಮಿ ಕೂತು ಪಂಚಾಯ್ತಿ ಚುನಾವಣೆಗಳ ಅಭ್ಯರ್ಥಿಗಳ ಅಂತಿಮ ಮಾಡಲಿದ್ದಾರೆ. ಮೈತ್ರಿ ಗೊಂದಲದ ಬಗ್ಗೆ ತಳ‌ ಮಟ್ಟದಲ್ಲಿ ನಾವು ಗಟ್ಟಿಯಾದರೆ ನಿಮ್ಮ ಗೊಂದಲಕ್ಕೆ ಉತ್ತರ ಸಿಗಲಿದೆ. ಮೈತ್ರಿ ಗೊಂದಲಕ್ಕೆ ಅವರು ತೆರೆ ಎಳೆದರು.

    ದೇವೇಗೌಡರು ಹಾಗೂ ಕುಮಾರಣ್ಣನವರಿಗೆ ನೀವು ತೋರಿಸಿದ ಪ್ರೀತಿ ವಿಶ್ವಾಸ ಅಪಾರ, ಬಹಳ ಆತ್ಮೀಯತೆಯಿಂದ ಈ ಪಕ್ಷವನ್ನು ನಿಷ್ಠಾವಂತ ಕಾರ್ಯಕರ್ತರು ಬೆಳೆಸಿದ್ದೀರಿ. ಅದೇ ರೀತಿ ನಿಮ್ಮ ವಿಶ್ವಾಸ ನನ್ನ ಮೇಲೆ ಇರಲಿ ಎಂದು ಮನವಿ ಮಾಡಿದರು.

    ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ ಅವರು,ಮಾಜಿ ಸಚಿವರಾದ ಡಿ ನಾಗರಾಜಯ್ಯ, ಆಂಜಿನಪ್ಪ ಅವರು, ಗುಬ್ಬಿ ನಾಗರಾಜು ಅವರು, ಬೆಟ್ಟಸ್ವಾಮಿ, ಹೊನ್ನಾಗಿರಿ ಗೌಡ ಸೇರಿದಂತೆ ಪ್ರಮುಖ ಮುಖಂಡರು ಜತೆಯದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ

    July 17, 2025

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.