ತುಮಕೂರು: ಸುರೇಶ್ ಬಾಬು ಅವರನ್ನ ಮಂತ್ರಿಯಾಗಿ ನೋಡಬೇಕು ಎಂಬಾ ಆಸೆಯನ್ನು ಈ ಭಾಗದ ಜನರು ಇಟ್ಟುಕೊಂಡಿದ್ದಾರೆ ಅದು ನೆರವೇರಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಚಿಕ್ಕನಾಯಕನಹಳ್ಳಿ ಬುಕ್ಕಾಪಟ್ಟಣದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, 10 ಸಾವಿರ ಜೆಡಿಎಸ್ ಸದಸ್ಯತ್ವ ನೋಂದಣಿಯನ್ನು ಉಡುಗೊರೆಯಾಗಿ ಕೊಟ್ಟಿದ್ದಿರಾ. ಸುರೇಶ್ ಬಾಬು ಅವರು ನಿಮ್ಮ ಮನೆ ಬಾಗಿಲಿಗೆ ನಿಮ್ಮ ಮನೆ ಮಗ ಕಾರ್ಯಕ್ರಮ ಮಾಡುತ್ತಿದ್ದಾರೆ. ಸುರೇಶ್ ಬಾಬು ಅವರನ್ನ ಮಂತ್ರಿಯಾಗಿ ನೋಡಬೇಕು ಎಂಬಾ ಆಸೆಯನ್ನು ಈ ಭಾಗದ ಜನರು ಇಟ್ಟುಕೊಂಡಿದ್ದಾರೆ ಅದು ನೆರವೇರಲಿದೆ ಎಂದರು.
ಸುರೇಶ್ ಬಾಬು ಅವರಿಗೆ ರಾಜಕಾರಣ ಹೊರತು ಪಡಿಸಿ ಬೇರೆ ಕಸುಬಿಲ್ಲ. ಕ್ಷೇತ್ರದ ಜನತೆಯ ಋಣ ತೀರಿಸುವ ಹೋರಾಟ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ ಎಂದರು.
ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನಮ್ಮ ಪಕ್ಷವನ್ನು ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ದೇವೇಗೌಡರ ಕಾಲಘಟ್ಟದ ಸಾಕಷ್ಟು ನಾಯಕರಿದ್ದೀರಾ. ನಿಮ್ಮ ಸಂಪರ್ಕ ಬಯಸಿ ಪ್ರವಾಸ ಕೈಗೊಂಡಿದ್ದೇನೆ. ತುಮಕೂರು ಜಿಲ್ಲೆ ದೇವೇಗೌಡರ ಹೋರಾಟಕ್ಕೆ ಜೊತೆಯಾಗಿ ನಿಂತು ಬೆಂಬಲ ನೀಡಿದ್ದೀರಾ. ಜನತಾದಳ ಪಕ್ಷ ಮುಗಿದೆ ಹೋಯ್ತು ಅಂತ ವಿರೋಧ ಪಕ್ಷದವರು ಹೇಳುತ್ತಿದ್ದಾರೆ. ಶಿವಕುಮಾರ್ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ ಸಿದ್ದಲಿಂಗ ಸ್ವಾಮಿ ಆಶೀರ್ವಾದ ಪಡೆದಿದ್ದೇವೆ ಎಂದರು.
ಎರಡು ರಾಷ್ಟ್ರೀಯ ಪಕ್ಷಕ್ಕಿಂತ ಹೆಚ್ಚಿನ ವೋಟಿಂಗ್ ಪರ್ಸೆಂಟೇಜ್ ಅನ್ನ ಜೆಡಿಎಸ್ ಪಕ್ಷಕ್ಕೆ ಕೊಟ್ಟಿದ್ದಾರೆ. 58 ದಿನಗಳ ಕಾಲ ರಾಜ್ಯ ಪ್ರವಾಸ ಮಾಡ್ತೀನಿ. ಡಿಸೆಂಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ. ಗ್ರಾಮ ಪಂಚಾಯ್ತಿ ಪಕ್ಷದಲ್ಲಿ ಬೇರು ಇದ್ದಂತೆ. ZP TP ಚುನಾವಣೆಗೆ ಮುನ್ನೋಡುತ್ತಿದ್ದೀರಾ. ಪಕ್ಷ ಎಲ್ಲಾದಕ್ಕೂ ತಯಾರಿ ಮಾಡಿಕೊಳ್ಳಬೇಕು. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ ಎಂದರು.
ನಾನು ಮೂರು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿರಬಹುದು. ಒಳ್ಳೆ ಉದ್ದೇಶದಿಂದ ನಾನು ಪ್ರವಾಸಕ್ಕೆ ಬಂದಿದ್ದೇನೆ. ದೇವೇಗೌಡರ ಮಾರ್ಗರ್ದಶದಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಪ್ರಾದೇಶಿಕ ಪಕ್ಷವನ್ನು ಕಟ್ಟಿಬೆಳೆಸಬೇಕು ಅಂತ ಹೊರಟಿದ್ದೇನೆ. ರಾಜ್ಯದ ಸಮಸ್ಯೆಗಳನ್ನ ಅರ್ಥೈಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ಹೊರಟಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿ ನೋಡಿದ್ದೀರಾ. ಅತಿ ಹೆಚ್ಚು ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಕೊಡಬಹುದಿತ್ತು. ಆದರೆ ಸಾಲದ ಹೊರೆ ಹೊರಿಸಿದ್ದಾರೆ. ಎಸ್ಸಿಪಿಟಿಪಿ, ವಾಲ್ಮೀಕ ನಿಗಮದ ಹಣ ದುರ್ಬಳಕೆಯಾಗಿದೆ. ಕುಮಾರಸ್ವಾಮಿ ಅವರನ್ನ ನೋಡಿಕೊಂಡು ಬಂದಿದ್ದೀರಾ. ಕುಮಾರಸ್ವಾಮಿ 14 ತಿಂಗಳಲ್ಲಿ 25 ಸಾವಿರ ಕೋಟಿ ಸಾಲ ಮನ್ನ ಮಾಡಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಪರಿಸ್ಥಿತಿ ಏನಾಗಿದೆ. 25 ಸಾವಿರ ಇದ್ದ ಟಿಸಿ ಬೆಲೆ 3–4 ಲಕ್ಷಕ್ಕೆ ಏರಿದೆ ಎಂದು ಟೀಕಿಸಿದರು.
ಪ್ರಾದೇಶಿಕ ಪಕ್ಷ ಅಸ್ತಿತ್ವ ಕಾಪಾಡುವ ಜವಬ್ದಾರಿ ನಿಮ್ಮ ಮೇಲಿದೆ. ಸದಸ್ಯತ್ವ ನೋಂದಾಯಿಸಲು ದೂರವಾಣಿ ನಂಬರ್ ಗೆ ಮಿಸ್ ಕಾಲ್ ಕೊಡುವ ಮೂಲಕ ಜೆಡಿಎಸ್ ಸದಸ್ಯರಾಗಿ ಎಂದು ಅವರು ಕರೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW