ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಆರೋಪದ ಮೇಲೆ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ವೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಮಾಜಿ ಸೇನಾಧಿಕಾರಿ 45 ವರ್ಷದ ಎಚ್.ಎನ್ ಮಧುಕುಮಾರ್ ಅಮಾನತುಗೊಂಡವರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಕಾರಾಗೃಹ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಧುಕುಮಾರ್ ನಿವಾಸದಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಏಪ್ರಿಲ್ 28ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತಿದ್ದನ್ನು ಕುಮಾರ್ ಖಂಡಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ವಿಷಯ ಬೆಳಕಿಗೆ ಬಂದ ತಕ್ಷಣ ನಿನ್ನ ಸಂಜೆ ವಾರ್ಡನ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ.ಎಸ್. ರಮೇಶ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW