nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ
    ಗುಬ್ಬಿ May 19, 2022

    ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ

    By adminMay 19, 2022No Comments2 Mins Read
    n shivanna

    ಗುಬ್ಬಿ: ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ಮಗನ ಮನೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಒಮ್ಮೆ ತುರುವೇಕೆರೆ ತಾಲ್ಲೂಕು ಬೋರ್ಡ್ ಸದಸ್ಯರಾಗಿದ್ದರು. ಡಿಪ್ಲೊಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶಿವಣ್ಣ ಅವರು ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು.


    Provided by
    Provided by

    ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎದುರು ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಂದು ರೀತಿಯಲ್ಲಿ ದೇವೇಗೌಡರ ಸೋಲಿಗೂ ಶಿವಣ್ಣ ಕಾರಣರಾದರು ಎಂದು ವಿಶ್ಲೇಷಿಸಲಾಗಿತ್ತು. ಈ ಚುನಾವಣೆಯಲ್ಲಿ 15 ಸಾವಿರಕ್ಕೂ ಅಧಿಕ ಮತ ಗಳಿಸಿದ್ದರು. ಈ ಮತ ವಿಭಜನೆಯಿಂದಾಗಿಯೇ ದೇವೇಗೌಡರು ಸೋತರು ಎಂದು ವಿಶ್ಲೇಷಿಸಲಾಗಿತ್ತು.

    ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಸೀಮೆಂಟ್ ಫ್ಯಾಕ್ಟರಿಯ ಕಾರ್ಮಿಕರಾಗಿ, ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಶಿವಣ್ಣ ಕೆಲಸ ಮಾಡಿದರು. 1962ರಲ್ಲಿ ಹೋರಾಟಕ್ಕೆ ಧುಮುಕಿದ ಎನ್.ಶಿವಣ್ಣ ಕಾರ್ಮಿಕರ ಹಕ್ಕುಗಳ ಪರವಾಗಿ ಹೋರಾಟ ಮಾಡಿದರು.

    ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿಯಾಗಿ ದುಡಿದರು. ಜೊತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿ ಕಾರ್ಮಿಕರು, ರೈತರು, ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ನಿರಂತರ ಹೋರಾಟ ಮಾಡಿದರು.

    2002ರಲ್ಲಿ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಎನ್.ಶಿವಣ್ಣ ಪಕ್ಷವನ್ನು ಕಟ್ಟುವಲ್ಲಿ ಶ್ರಮಿಸಿದರು. ಎಡ ಚಳವಳಿಯಲ್ಲಿ ಶಿವಣ್ಣ ಅವರ ಹೆಸರು ಪ್ರಮುಖವಾದುದು.

    ಅಂಗನವಾಡಿ, ಆಶಾ, ಬಿಸಿಯೂಟ ನೌಕರರ ಸಂಘಟನೆಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರಿನ ಆರೋಗ್ಯ ಕಾರ್ಯಕರ್ತೆಯರ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕೆಲಸ ಮಾಡಿದರು.

    ಅಷ್ಟೇ ಅಲ್ಲ ಎಐಟಿಯುಸಿಯ ತುಮಕೂರು ಜಿಲ್ಲಾ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಹಲವು ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

    ಕಾರ್ಮಿಕ, ರೈತ, ಅಂಗನವಾಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಎನ್. ಶಿವಣ್ಣ ಜೀವಿತದ ಕೊನೆಯವರೆಗೂ ಹೋರಾಟದಲ್ಲೇ ಇದ್ದರು. ಎನ್.ಶಿವಣ್ಣ ನಿಧನಕ್ಕೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಎಐಟಿಯುಸಿ ಮುಖಂಡ ಕಂಬೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ದಾಖಲೆಯ ಸತತ 9ನೇ ಬಾರಿಗೆ…

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.