nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ
    ಗುಬ್ಬಿ May 19, 2022

    ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ

    By adminMay 19, 2022No Comments2 Mins Read
    n shivanna

    ಗುಬ್ಬಿ: ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ಮಗನ ಮನೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಒಮ್ಮೆ ತುರುವೇಕೆರೆ ತಾಲ್ಲೂಕು ಬೋರ್ಡ್ ಸದಸ್ಯರಾಗಿದ್ದರು. ಡಿಪ್ಲೊಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶಿವಣ್ಣ ಅವರು ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು.

    ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎದುರು ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಂದು ರೀತಿಯಲ್ಲಿ ದೇವೇಗೌಡರ ಸೋಲಿಗೂ ಶಿವಣ್ಣ ಕಾರಣರಾದರು ಎಂದು ವಿಶ್ಲೇಷಿಸಲಾಗಿತ್ತು. ಈ ಚುನಾವಣೆಯಲ್ಲಿ 15 ಸಾವಿರಕ್ಕೂ ಅಧಿಕ ಮತ ಗಳಿಸಿದ್ದರು. ಈ ಮತ ವಿಭಜನೆಯಿಂದಾಗಿಯೇ ದೇವೇಗೌಡರು ಸೋತರು ಎಂದು ವಿಶ್ಲೇಷಿಸಲಾಗಿತ್ತು.

    ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಸೀಮೆಂಟ್ ಫ್ಯಾಕ್ಟರಿಯ ಕಾರ್ಮಿಕರಾಗಿ, ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಶಿವಣ್ಣ ಕೆಲಸ ಮಾಡಿದರು. 1962ರಲ್ಲಿ ಹೋರಾಟಕ್ಕೆ ಧುಮುಕಿದ ಎನ್.ಶಿವಣ್ಣ ಕಾರ್ಮಿಕರ ಹಕ್ಕುಗಳ ಪರವಾಗಿ ಹೋರಾಟ ಮಾಡಿದರು.

    ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿಯಾಗಿ ದುಡಿದರು. ಜೊತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿ ಕಾರ್ಮಿಕರು, ರೈತರು, ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ನಿರಂತರ ಹೋರಾಟ ಮಾಡಿದರು.

    2002ರಲ್ಲಿ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಎನ್.ಶಿವಣ್ಣ ಪಕ್ಷವನ್ನು ಕಟ್ಟುವಲ್ಲಿ ಶ್ರಮಿಸಿದರು. ಎಡ ಚಳವಳಿಯಲ್ಲಿ ಶಿವಣ್ಣ ಅವರ ಹೆಸರು ಪ್ರಮುಖವಾದುದು.

    ಅಂಗನವಾಡಿ, ಆಶಾ, ಬಿಸಿಯೂಟ ನೌಕರರ ಸಂಘಟನೆಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರಿನ ಆರೋಗ್ಯ ಕಾರ್ಯಕರ್ತೆಯರ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕೆಲಸ ಮಾಡಿದರು.

    ಅಷ್ಟೇ ಅಲ್ಲ ಎಐಟಿಯುಸಿಯ ತುಮಕೂರು ಜಿಲ್ಲಾ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಹಲವು ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

    ಕಾರ್ಮಿಕ, ರೈತ, ಅಂಗನವಾಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಎನ್. ಶಿವಣ್ಣ ಜೀವಿತದ ಕೊನೆಯವರೆಗೂ ಹೋರಾಟದಲ್ಲೇ ಇದ್ದರು. ಎನ್.ಶಿವಣ್ಣ ನಿಧನಕ್ಕೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಎಐಟಿಯುಸಿ ಮುಖಂಡ ಕಂಬೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.