nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026
    Facebook Twitter Instagram
    ಟ್ರೆಂಡಿಂಗ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ
    ಗುಬ್ಬಿ May 19, 2022

    ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ

    By adminMay 19, 2022No Comments2 Mins Read
    n shivanna

    ಗುಬ್ಬಿ: ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ಮಗನ ಮನೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಒಮ್ಮೆ ತುರುವೇಕೆರೆ ತಾಲ್ಲೂಕು ಬೋರ್ಡ್ ಸದಸ್ಯರಾಗಿದ್ದರು. ಡಿಪ್ಲೊಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶಿವಣ್ಣ ಅವರು ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು.


    Provided by
    Provided by

    ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎದುರು ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಂದು ರೀತಿಯಲ್ಲಿ ದೇವೇಗೌಡರ ಸೋಲಿಗೂ ಶಿವಣ್ಣ ಕಾರಣರಾದರು ಎಂದು ವಿಶ್ಲೇಷಿಸಲಾಗಿತ್ತು. ಈ ಚುನಾವಣೆಯಲ್ಲಿ 15 ಸಾವಿರಕ್ಕೂ ಅಧಿಕ ಮತ ಗಳಿಸಿದ್ದರು. ಈ ಮತ ವಿಭಜನೆಯಿಂದಾಗಿಯೇ ದೇವೇಗೌಡರು ಸೋತರು ಎಂದು ವಿಶ್ಲೇಷಿಸಲಾಗಿತ್ತು.

    ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಸೀಮೆಂಟ್ ಫ್ಯಾಕ್ಟರಿಯ ಕಾರ್ಮಿಕರಾಗಿ, ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಶಿವಣ್ಣ ಕೆಲಸ ಮಾಡಿದರು. 1962ರಲ್ಲಿ ಹೋರಾಟಕ್ಕೆ ಧುಮುಕಿದ ಎನ್.ಶಿವಣ್ಣ ಕಾರ್ಮಿಕರ ಹಕ್ಕುಗಳ ಪರವಾಗಿ ಹೋರಾಟ ಮಾಡಿದರು.

    ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿಯಾಗಿ ದುಡಿದರು. ಜೊತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿ ಕಾರ್ಮಿಕರು, ರೈತರು, ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ನಿರಂತರ ಹೋರಾಟ ಮಾಡಿದರು.

    2002ರಲ್ಲಿ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಎನ್.ಶಿವಣ್ಣ ಪಕ್ಷವನ್ನು ಕಟ್ಟುವಲ್ಲಿ ಶ್ರಮಿಸಿದರು. ಎಡ ಚಳವಳಿಯಲ್ಲಿ ಶಿವಣ್ಣ ಅವರ ಹೆಸರು ಪ್ರಮುಖವಾದುದು.

    ಅಂಗನವಾಡಿ, ಆಶಾ, ಬಿಸಿಯೂಟ ನೌಕರರ ಸಂಘಟನೆಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರಿನ ಆರೋಗ್ಯ ಕಾರ್ಯಕರ್ತೆಯರ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕೆಲಸ ಮಾಡಿದರು.

    ಅಷ್ಟೇ ಅಲ್ಲ ಎಐಟಿಯುಸಿಯ ತುಮಕೂರು ಜಿಲ್ಲಾ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಹಲವು ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

    ಕಾರ್ಮಿಕ, ರೈತ, ಅಂಗನವಾಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಎನ್. ಶಿವಣ್ಣ ಜೀವಿತದ ಕೊನೆಯವರೆಗೂ ಹೋರಾಟದಲ್ಲೇ ಇದ್ದರು. ಎನ್.ಶಿವಣ್ಣ ನಿಧನಕ್ಕೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಎಐಟಿಯುಸಿ ಮುಖಂಡ ಕಂಬೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    January 10, 2026

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    January 6, 2026

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ಮಸೂದೆಯ ವಿರುದ್ಧ…

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.