nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ
    ಗುಬ್ಬಿ May 19, 2022

    ದೇವೇಗೌಡ ವಿರುದ್ಧ ಸ್ಪರ್ಧಿಸಿದ್ದ ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ

    By adminMay 19, 2022No Comments2 Mins Read
    n shivanna

    ಗುಬ್ಬಿ: ತಾಲ್ಲೂಕು ನಂದಿಹಳ್ಳಿ ಶಿವಣ್ಣ ಅವರ ಜನ್ಮಸ್ಥಳವಾಗಿದ್ದು, ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ಮಗನ ಮನೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಒಮ್ಮೆ ತುರುವೇಕೆರೆ ತಾಲ್ಲೂಕು ಬೋರ್ಡ್ ಸದಸ್ಯರಾಗಿದ್ದರು. ಡಿಪ್ಲೊಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶಿವಣ್ಣ ಅವರು ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು.


    Provided by
    Provided by

    ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎದುರು ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಂದು ರೀತಿಯಲ್ಲಿ ದೇವೇಗೌಡರ ಸೋಲಿಗೂ ಶಿವಣ್ಣ ಕಾರಣರಾದರು ಎಂದು ವಿಶ್ಲೇಷಿಸಲಾಗಿತ್ತು. ಈ ಚುನಾವಣೆಯಲ್ಲಿ 15 ಸಾವಿರಕ್ಕೂ ಅಧಿಕ ಮತ ಗಳಿಸಿದ್ದರು. ಈ ಮತ ವಿಭಜನೆಯಿಂದಾಗಿಯೇ ದೇವೇಗೌಡರು ಸೋತರು ಎಂದು ವಿಶ್ಲೇಷಿಸಲಾಗಿತ್ತು.

    ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಸೀಮೆಂಟ್ ಫ್ಯಾಕ್ಟರಿಯ ಕಾರ್ಮಿಕರಾಗಿ, ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಶಿವಣ್ಣ ಕೆಲಸ ಮಾಡಿದರು. 1962ರಲ್ಲಿ ಹೋರಾಟಕ್ಕೆ ಧುಮುಕಿದ ಎನ್.ಶಿವಣ್ಣ ಕಾರ್ಮಿಕರ ಹಕ್ಕುಗಳ ಪರವಾಗಿ ಹೋರಾಟ ಮಾಡಿದರು.

    ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿಯಾಗಿ ದುಡಿದರು. ಜೊತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿ ಕಾರ್ಮಿಕರು, ರೈತರು, ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ನಿರಂತರ ಹೋರಾಟ ಮಾಡಿದರು.

    2002ರಲ್ಲಿ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಎನ್.ಶಿವಣ್ಣ ಪಕ್ಷವನ್ನು ಕಟ್ಟುವಲ್ಲಿ ಶ್ರಮಿಸಿದರು. ಎಡ ಚಳವಳಿಯಲ್ಲಿ ಶಿವಣ್ಣ ಅವರ ಹೆಸರು ಪ್ರಮುಖವಾದುದು.

    ಅಂಗನವಾಡಿ, ಆಶಾ, ಬಿಸಿಯೂಟ ನೌಕರರ ಸಂಘಟನೆಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರಿನ ಆರೋಗ್ಯ ಕಾರ್ಯಕರ್ತೆಯರ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕೆಲಸ ಮಾಡಿದರು.

    ಅಷ್ಟೇ ಅಲ್ಲ ಎಐಟಿಯುಸಿಯ ತುಮಕೂರು ಜಿಲ್ಲಾ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯದರ್ಶಿಯಾಗಿ ಮತ್ತು ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಹಲವು ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

    ಕಾರ್ಮಿಕ, ರೈತ, ಅಂಗನವಾಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಎನ್. ಶಿವಣ್ಣ ಜೀವಿತದ ಕೊನೆಯವರೆಗೂ ಹೋರಾಟದಲ್ಲೇ ಇದ್ದರು. ಎನ್.ಶಿವಣ್ಣ ನಿಧನಕ್ಕೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಎಐಟಿಯುಸಿ ಮುಖಂಡ ಕಂಬೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.