ಕೊರಟಗೆರೆ : ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವವನ್ನು ತಾಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಸರಳ ಸುಂದರ ಜಯಂತ್ಯುತ್ಸವನ್ನು ಆಚರಿಸಲಾಯಿತು.
ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಸಮುದಾಯ ಭವನಕ್ಕೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆ ಮಾಡಲು ಖಾಲಿ ಸ್ಥಳವನ್ನು ಸಮುದಾಯಕ್ಕೆ ನೀಡಬೇಕು ಎಂದು ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು .
ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್ ಮಾತನಾಡಿ, ನಮ್ಮ ನಾಡಿಗೆ ಮಾತ್ರವಲ್ಲ ನಮ್ಮ ಇಡೀ ವಿಶ್ವಕ್ಕೆ ಮಾದರಿ ನಗರವನ್ನಾಗಿ ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರ ಜಯಂತಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಸೀಮಿತವಲ್ಲ ಇಡೀ ದೇಶದ ಜನತೆಯ ಆಸ್ತಿ ನಾಡಪ್ರಭು ಕೆಂಪೇಗೌಡರು ಎಂದರೆ ತಪ್ಪಾಗಲಾರದು ಅವರು ಬೆಂಗಳೂರನ್ನು ನಿರ್ಮಿಸಲು ಪಟ್ಟ ಶ್ರಮ ಅಷ್ಟಿಷ್ಟಲ್ಲ ಅವರಿಂದಲೇ ಇಂದು ಸುಂದರ ಬೆಂಗಳೂರು ನಿರ್ಮಾಣವಾಗಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಸಮುದಾಯದ ಮುಖಂಡ ವೀರಕ್ಯಾತಯ್ಯ ಮಾತನಾಡಿ ನಾಡಪ್ರಭು ಕೆಂಪೇಗೌಡರ ಜಯಂತಿ ಕೇವಲ 4 ಗೋಡೆಗಳ ಮಧ್ಯೆ ಮಾಡುವಂತಾಗಿದೆ ಮುಂದಿನ ದಿನಗಳಲ್ಲಿ ನಮ್ಮ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಬಹಳ ವಿಜ್ರಂಭಣೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವಂತೆ ಆಗಲಿ ಎಂದು ತಿಳಿಸಿದರು.
ಸಮುದಾಯದ ಮುಖಂಡ ನರಸಿಂಹರಾಜು ಮಾತನಾಡಿ, ನಾಡಪ್ರಭು ಕೆಂಪೇಗೌಡರು ನಮ್ಮ ಸಮುದಾಯದವರು ಅವರ ಜಯಂತಿ ಬಂದಿದ್ದರೆ ನಮ್ಮೆಲ್ಲರಿಗೂ ಹಬ್ಬವಿದ್ದಂತೆ ಅವರ ಜಯಂತಿಗೆ ಇಂದು ತಾಲ್ಲೂಕಿನಲ್ಲಿ ಒಕ್ಕಲಿಗ ಸಮುದಾಯದ ಜನತೆ ಬಹಳ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಬೇಕಾಗಿದೆ ಮುಂದಿನ ದಿನಗಳಲ್ಲಿ ನಾವೆಲ್ಲರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನ ಆಚರಿಸುವಂತಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ತಾಲೂಕಿನ ಒಕ್ಕಲಿಗರ ಸಮುದಾಯದ ಮುಖಂಡರು ಮತ್ತಿತರರು ಹಾಜರಿದ್ದರು
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz