nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ
    • ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    • ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು
    • ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ
    • ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    • ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    • ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!
    • ಜನರಿಗೆ ತೊಂದರೆಯಾಗದಂತೆ ವಾಹನ ನಿಲ್ಲಿಸಿ: ವಾಹನ ಚಾಲಕರಿಗೆ ಇನ್ಸ್ಪೆಕ್ಟರ್ ಆರ್. ಕಿರಣ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು: ತಹಶೀಲ್ದಾರ್ ಮೋಹನಕುಮಾರಿ
    ಜಿಲ್ಲಾ ಸುದ್ದಿ June 28, 2025

    ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು: ತಹಶೀಲ್ದಾರ್ ಮೋಹನಕುಮಾರಿ

    By adminJune 28, 2025No Comments2 Mins Read
    mohana kumari

    ಸರಗೂರು:  ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು’ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಮೋಹನಕುಮಾರಿ  ಹೇಳಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .


    Provided by
    Provided by

    ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು.

    ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು.

    ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಗ್ರಾಪಂ ಸದಸ್ಯ ಮಾಜಿ ಅಧ್ಯಕ್ಷ ಸುಧೀರ್ ಮಾತನಾಡಿ, ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ ಹಾಗೂ ಅಂತರ್ಜಲದ ವೃದ್ಧಿಗೆ ಶ್ರಮಿಸಿದವರು. ಪ್ರಕೃತಿ ಸಮತೋಲನ, ನಿಸರ್ಗ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು’ ಎಂದು ಹೇಳಿದರು.

    ಮುಖ್ಯ ಭಾಷಣಕಾರರಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಲಪ್ಪ ಮಾತನಾಡಿ, ನಾಡು ಕಟ್ಟುವಲ್ಲಿ ನಾಡಪ್ರಭು ಕೆಂಪೇಗೌಡ ಪಾತ್ರ ಪ್ರಮುಖ ವಹಿಸಿದ್ದರು ಎಂದರು.

    ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರ ನಿರ್ಮಾಣವಾಯಿತು. ಬೆಂಗಳೂರಿನ ಕೆರೆ ಕಟ್ಟೆಗಳನ್ನೂ ಅವರು ಅಭಿವೃದಿಟಛಿಗೊಳಿಸಿ ಮಾದರಿಯಾಗಿದ್ದಾರೆ ಎಂದರು.

    ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಪಪಂ ಸದಸ್ಯ ಶ್ರೀನಿವಾಸ, ಆದಿಕರ್ನಾಟಕ ಮಹಾಸಭಾದ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿದರು. ಲಯನ್ಸ್ ಅಕಾಡೆಮಿ ಶಾಲೆಯ ಶಿಕ್ಷಕ ಸುನೀಲ್ ನಿರೂಪಣೆ ಮಾಡಿದರು.

    ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರು ಗಂಗಾಧರ್, ಶಿವಕುಮಾರ್, ಜ್ಯೋತಿ ರಮೇಶ್, ಮಾಜಿ ಗ್ರಾಪಂ ಸದಸ್ಯರು ಶಿವರಾಜು, ಆಶೋಕ್ ಕುಮಾರ್, ಡಾ.ಆಶೋಕ್, ನಿರ್ದೇಶಕರು ಸಿ.ಕಾಳಪ್ಪ, ಬಿ.ಸಿ.ರವಿ, ಶಿವಲಿಂಗೇಗೌಡ, ಭವನೇಶ್, ಇಓ ಪ್ರೇಮ್ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಮುಖಂಡರು ಸಾಗರೆ ಮಹೇಂದ್ರ, ಎಸ್ಸಿ ಎಸ್ಟಿ ಸಮಿತಿ ಸದಸ್ಯ ಬೆಟ್ಟ ಸ್ವಾಮಿ,  ಜಯರಾಂ, ಕಸಾಪ  ಅಧ್ಯಕ್ಷ ಕೆಂಡಗಣ್ಣಸ್ವಾಮಿ,  ಎಎಸ್ಐ ನಾರಾಯಣ್, ಬಿ.ಕೆ.ಶಿವರಾಜು, ಸುರೇಶ್, ಕಾಳಿಹುಂಡಿ ನಾಗೇಂದ್ರ, ವೆಂಕಟೇಶ್, ಬಿ.ಎನ್.ಗಂಗಾಧರ, ಬಿ.ಟಿ.ರವಿ, ರೈತ ಸಂಘದ ಕುಮಾರ್ ಗೌಡ, ಮಾದೇಗೌಡ, ಮಹೇಶ್, ರವಿ, ಸಿಬ್ಬಂದಿ ವರ್ಗದವರು ರವಿಂದ್ರ, ಮನೋಹರ್, ಮಹದೇವ ಮೂರ್ತಿ, ರವಿಚಂದ್ರನ್ ಮುಜೀಬ್ ಮತ್ತಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!

    July 11, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು,  ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ…

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.