ಕೊರಟಗೆರೆ: ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಖಾಸಗಿ ಬಸ್ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ.
ಈ ವೇಳೆ ಸ್ಥಳೀಯರು ಗಾಯಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆ ಸೇರಿಸಿದ್ದಾರೆ. ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ಕಳುಹಿಸಿಕೊಡಲಾಗಿದೆ .
ಅಪಘಾತ ನಡೆದ ತಕ್ಷಣ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರ ತಮ್ಮ ಊರುಗಳಿಗೆ ತಲುಪಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು . ಬಸ್ ಚಾಲಕನ ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ ..
ಗಾಯಗೊಂಡಿರುವ ವ್ಯಕ್ತಿಯು ತುಮಕೂರಿನ ಸ್ವಾಧೇನಹಳ್ಳಿ ಗ್ರಾಮದ 55 ವರ್ಷದ ಓಬಳದಾಸಯ್ಯ ಎಂದು ತಿಳಿದುಬಂದಿದೆ .
ಇನ್ನು ಘಟನೆ ನಡೆದ ಸ್ಥಳಕ್ಕೆ ಕೊರಟಗೆರೆಯ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5