nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025
    Facebook Twitter Instagram
    ಟ್ರೆಂಡಿಂಗ್
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    • ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ
    • ಸ್ವಚ್ಛ ಭಾರತ್ ಮಿಷನ್ ಅಭಿಯಾನ: ಸ್ವಸಹಾಯ ಗುಂಪಿನ ಸದಸ್ಯರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕವಿ ನಾಡೋಜ ಡಾ.ಚನ್ನವೀರ ಕಣವಿ ಅವರ ಬಗ್ಗೆ ನಿಮಗೆಷ್ಟು ಗೊತ್ತು?
    ಸ್ಪೆಷಲ್ ನ್ಯೂಸ್ February 16, 2022

    ಕವಿ ನಾಡೋಜ ಡಾ.ಚನ್ನವೀರ ಕಣವಿ ಅವರ ಬಗ್ಗೆ ನಿಮಗೆಷ್ಟು ಗೊತ್ತು?

    By adminFebruary 16, 2022No Comments2 Mins Read
    kanavi

    ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ(93) ವಿಧಿವಶರಾಗಿದ್ದಾರೆ.

    ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.


    Provided by

    ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ಫಾರ್ಮ್‍ಹೌಸ್‍ನಲ್ಲಿ ಇಂದು ಸಂಜೆ ನೆರವೇರಲಿದೆ. ಇದಕ್ಕೂ ಮುನ್ನ ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದು ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.ಕಣವಿ ನಡೆದು ಬಂದ ದಾರಿ:

    ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದರು. ಶಿರುಂಡ, ಗರಗಗಳಲ್ಲಿ 1940-46ರಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950ರಲ್ಲಿ ಬಿ.ಎ ಪದವಿ, 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಗಳಿಸಿದರು.

    1952ರಲ್ಲಿ ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು.ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1981), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1985), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(1989), ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್(1996-98), ಪಂಪ ಪ್ರಶಸ್ತಿ(1999), ಅನಕೃ ಪ್ರತಿಷ್ಠಾನ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.

    1996ರಲ್ಲಿ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾಸನದಲ್ಲಿ ಜರುಗಿದಾಗ ಕಣವಿ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು. ಕಣವಿ ಅವರು ಕವಿತೆ, ವಿಮರ್ಶೆ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕನ್ನಡ ನಾಡಿನ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಕಣವಿ ಅವರ ಕಾವ್ಯಸಂಕಲನಗಳಲ್ಲಿ ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ದೀಪಧಾರಿ, ಮೆರವಣಿಗೆ, ಜೀವಧ್ವನಿ, ನಗರದಲ್ಲಿ ನೆರಳು, ಚಿರಂತನದಾಸ ಪ್ರಸಿದ್ಧವಾಗಿವೆ. ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಸಮತೋಲನ ಇತ್ಯಾದಿ ವಿಮರ್ಶಾ ಗ್ರಂಥಗಳು ಜನಪ್ರಿಯವಾಗಿವೆ.

    ಧಾರವಾಡದ ಕಲ್ಯಾಣ ನಗರದ ಚೆಂಬೆಳಕು ನಿವಾಸದಲ್ಲಿ ಕಣವಿ ಅವರು ನಿವೃತ್ತಜೀವನ ನಡೆಸುತಿದ್ದ ಅವರು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದರು.ಸಂತಾಪ: ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಕೆ.ಗೋಪಾಲಯ್ಯ, ಮುರುಗೇಶ್ ನಿರಾಣಿ, ಮಾಜಿ ಸಚಿವ ವಿನಯ್‍ಕುಮಾರ್ ಕುಲಕರ್ಣಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    May 31, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.