ದಾವಣಗೆರೆ : ನಕಲಿ ಜಾತಿ ಪ್ರಮಾಣಪತ್ರ ಪಡೆದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್. ಚೇತನ ವಿರುದ್ಧ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ವಕೀಲ ಎ.ಹರಿರಾಮ್ ದೂರು ಸಲ್ಲಿಸಿದ್ದಾರೆ.
ಕಲಂ 4(ಎಫ್) ಕರ್ನಾಟಕ ಎಸ್ಸಿ/ಎಸ್ಟಿ ಮತ್ತು ಓಬಿಸಿ (ರಿಸರ್ವೇಷನ್ ಆಫ್ ಆಪಾಯಿಂಟ್ಮೆಂಟ್ ಇತರೆ) ಕಾಯ್ದೆ 1990ರ ಅಡಿಯಲ್ಲಿ ದೂರು ಸಲ್ಲಿಸಲಾಗಿದೆ. ಎ. ಹರಿರಾಂ ಅರ್ಜಿದಾರರಾಗಿದ್ದು, ಅವರ ಪರವಾಗಿ ವಕೀಲರಾದ ಆರ್. ಜಗನ್ನಾಥ, ದಾವಣಗೆರೆಯ ಅನೀಸ್ ಪಾಷ ರಿವಿಜನ್ ಅರ್ಜಿಯನ್ನು ಸಲ್ಲಿಸಿದ್ದಾರೆ.
ಶಾಸಕ ಎಂ.ಪಿ. ರೇಣುಕಾಚಾರ್ಯ ಲಿಂಗಾಯತ ಸಮುದಾಯಕ್ಕೆ ಸೇರಿದವರು. ತಪ್ಪು ಮಾಹಿತಿ ನೀಡಿ, ತಮ್ಮ ರಾಜಕೀಯ ಪ್ರಾಬಲ್ಯ ಬಳಸಿ, ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿರುವುದು ಕಾನೂನು ಬಾಹಿರವಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ ಯಾವುದೇ ಮೇಲ್ವರ್ಗದ ವ್ಯಕ್ತಿ ಮೋಸದಿಂದ ಎಸ್ಸಿ-ಎಸ್ಟಿ ಅಥವಾ ಓಬಿಸಿ ಎಂಬುದಾಗಿ ಸುಳ್ಳು ಹೇಳಿ ಪ್ರಮಾಣಪತ್ರ ಪಡೆದಲ್ಲಿ ಅದು ಶಿಕ್ಷಾರ್ಹ ಅಪರಾಧ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5