nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಬೆಂಗಳೂರಲ್ಲಿ ಚಿತ್ರಸಂತೆ
    ರಾಜ್ಯ ಸುದ್ದಿ March 26, 2022

    ನಾಳೆಯಿಂದ ಬೆಂಗಳೂರಲ್ಲಿ ಚಿತ್ರಸಂತೆ

    By adminMarch 26, 2022No Comments2 Mins Read
    chithra sante

    ಬೆಂಗಳೂರಿನಲ್ಲಿ ಸಂತೆಗಳೆಂದರೆ ಏನೋ ಆಕರ್ಷಣೆ ಜನರು ಹೊಸತನ್ನು ಬಯಸಿ ಆ ಕಡೆಗೆ ಹೋಗಿ ಬರೋಣವೆಂದು ಸಾಗುವುದು ಸಹಜ. ಅದರಲ್ಲಿಯೂ ನವನವೀನ ಚಿತ್ರಗಳನ್ನು ಬಿಂಬಿಸುವ ಚಿತ್ರಸಂತೆಯ ಸೌಂದರ್ಯ ಸವಿಯಲು ವಾರದ ಕೊನೆಯ ದಿನದ ತಮ್ಮ ಹಾಜರಿಯನ್ನು ಅಲ್ಲಿ ಹಾಕಿಬಿಡುತ್ತಾರೆ.

    ಏಕೆಂದರೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ 19ನೆಯ ಚಿತ್ರಸಂತೆಗೆ ಇನ್ನೂ ಬೆರಳೆಣಿಕೆಯಷ್ಟು ದಿನ ಇರುವುದು ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಮ್ಮಿಕೊಂಡಿರುವ ವಾರ್ಷಿಕ ಚಿತ್ರಸಂತೆಗೆ ಹಲವಾರು ಕಲಾವಿದರು ಕಲಾಸಕ್ತರು ಕಾಯುತ್ತಿರುವುದು ವಿಶೇಷವಲ್ಲ. ಚಿತ್ರಸಂತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ.


    Provided by
    Provided by

    ಅಧ್ಯಕ್ಷತೆಯನ್ನು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ. ಬಿ.ಎಲ್.ಶಂಕರ್ ವಹಿಸಲಿದ್ದಾರೆ. ಪ್ರತಿವರ್ಷ ನಡೆಯುವ ಚಿತ್ರಸಂತೆಯ ಒಂದೊಂದು ವಿಷಯವನ್ನು ಆಧರಿಸಿ ಆಯೋಜನೆ ಮಾಡಲಾಗುತ್ತದೆ.ಈ ವರ್ಷ ನಮಗೆಲ್ಲ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸುವ ಕ್ಷಣಕ್ಕಾಗಿ 19ನೇ ಚಿತ್ರಸಂತೆಯನ್ನು ಹಲವಾರು ಸ್ವತಂತ್ರ ಯೋಧರಿಗಾಗಿ ಆಯೋಜನೆ ಮಾಡುತ್ತಿದೆ. ಚಿತ್ರಕಲಾ ಪರಿಷತ್ ನಾಡಿನ ಪ್ರಸಿದ್ಧ ಕಲಾವಿದರನ್ನು ಗುರುತಿಸಿ ಚಿತ್ರಕಲಾ ಸಮ್ಮಾನ್ ಮತ್ತು ಎಂಎಸ್ ನಂಜುಂಡರಾವ್ ಪ್ರಶಸ್ತಿ ಪ್ರಧಾನ ಮಾಡುತ್ತಾ ಬಂದಿದೆ.ಈ ವರ್ಷ ಎಂಎಸ್ ನಂಜುಂಡ ರಾವ್ ಪ್ರಶಸ್ತಿ ರತನ್ ಪರಿಮು ರವರಿಗೆ , ಕೆ.ಕೆ.ಕೆಜ್ರಿವಾಲ ಪ್ರಶಸ್ತಿಯನ್ನು ಕಲಾವಿದ ವಿಶ್ವಂಬರ ರವರಿಗೆ, ಆರ್ಯ ಮೂರ್ತಿ ಪ್ರಶಸ್ತಿಯನ್ನು ಬಸವರಾಜ್ ಮು.ಸಾ ವಳಗಿ ಅವರಿಗೆ, ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಪುಷ್ಪಮಾಲಾ ರವರಿಗೆ, ವೈ.ಸುಬ್ರಹ್ಮಣ್ಯರಾಜು ಪ್ರಶಸ್ತಿಯನ್ನು ಕಲಾವಿದ ನರೇಂದ್ರ ರವರಿಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಧಾನ ಮಾಡಲಾಗುತ್ತಿದೆ.

     ಹೇಗೆ ಮೂಡಿತು ಚಿತ್ರ ಸಂತೆ ಕಲ್ಪನೆ:

    ನಮ್ಮಲ್ಲಿ ಬಹಳಷ್ಟು ಕಲಾವಿದರಿದ್ದು, ಅವರಿಗೆ ತಾವು ರಚಿಸಿದ ಕಲಾಕೃತಿಗಳನ್ನು ಪ್ರದರ್ಶಿಸಲು ಅಥವಾ ಮಾರಾಟ ಮಾಡಲು ಸೂಕ್ತ ವೇದಿಕೆ ಇರಲಿಲ್ಲ. ಗ್ಯಾಲರಿಗಳಲ್ಲಿ ಹಣಕೊಟ್ಟು ಪ್ರದರ್ಶನ ಮಾಡಲು ಸಾಮಥ್ರ್ಯವಿಲ್ಲದೆ ಇರುವಂತಹ ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿ ಮಾರಾಟ ಮಾಡಲು ಚಿತ್ರಸಂತೆಯ ಮೂಲಕ ಕರ್ನಾಟಕ ಚಿತ್ರಕಲಾ ಪರಿಷತ್ತು ಅವಕಾಶ ಮಾಡಿಕೊಟ್ಟಿತು.ಸಂತೆ ವೇಳೆ ಹಲವಾರು ಕಲಾವಿದರು ಮತ್ತು ಕಲಾಸಕ್ತರಿಗೆ ಉತ್ತಮ ಬಾಂಧವ್ಯ ಮೂಡುತ್ತದೆ. ಸಾಮಾನ್ಯವಾಗಿ ಸಂತೆಯ ಮಾದರಿಯಲ್ಲಿಯೇ ಚಿತ್ರಸಂತೆಯನ್ನು ಕರ್ನಾಟಕ ಚಿತ್ರಕಲಾ ಪರಿಷತ್ತು ಕುಮಾರ ಕೃಪಾ ರಸ್ತೆಯಲ್ಲಿ ಆಯೋಜನೆ ಮಾಡುತ್ತದೆ. ಚಿತ್ರ ಕಲಾವಿದರಿಗೆ ಸಹಾಯ ಮಾಡುವ ದೃಷ್ಟಿಯಿಂದ ಮತ್ತು ಕಲಾವಿದರು ತಾವು ರಚಿಸಿದ ಶಿಲ್ಪಗಳು, ಚಿತ್ರಗಳು ಅದರಲ್ಲಿ ವಿಭಿನ್ನ ರೀತಿಯ ಕಲಾತ್ಮಕ ಚಿತ್ರಗಳು ಕೂಡ ಈ ಸಂತೆಯಲ್ಲಿ ನಮಗೆ ನೋಡಲು ಸಿಗುತ್ತದೆ. ಅಂದು ದಿನವಿಡೀ ಕಲಾ ಲೋಕವೇ ಧರೆಗಿಳಿದು ಬಂದಂತೆ ಗೋಚರವಾಗುತ್ತದೆ.
    ನಮ್ಮ ನಾಡಿನ ಈ ಚಿತ್ರಸಂತೆಗೆ ದೇಶದ ಬೇರೆ ಬೇರೆ ಕಡೆಯಿಂದ ಕಲಾವಿದರು ಬರುವುದರಿಂದ ಒಂದೇ ಸೂರಿನಲ್ಲಿ ವಿಭಿನ್ನ ಕಲಾವಿದರನ್ನು ನೋಡುವ, ಕಲಾತ್ಮಕ ವಿಷಯಗಳನ್ನು ಚರ್ಚೆ ಮಾಡುವ ಅವಕಾಶ, ವಿಚಾರವಿನಿಮಯ ಎಲ್ಲವೂ ಇಲ್ಲಿ ನಡೆಯುತ್ತದೆ ನಮಗೆ ಗೊತ್ತಿರದ ಹಲವಾರು ಕಲೆಗಳನ್ನು, ಕಲಾಪ್ರಕಾರಗಳನ್ನು ಇಲ್ಲಿ ಬರುವ ಕಲಾವಿದರು ಪರಿಚಯ ಮಾಡಿಕೊಡುತ್ತಾರೆ .

    ಅಂಗವಿಕಲ / ವಯಸ್ಸಾದ ಕಲಾವಿದರಿಗಾಗಿ ಸ್ಟಾಲ್:

    ಚಿತ್ರಸಂತೆಗೆ ಸಾಮಾನ್ಯವಾಗಿ ಪ್ರತಿಭಾವಂತ ಅಂಗವಿಕಲ ಮತ್ತು ವಯಸ್ಸಾದ ಚಿತ್ರಕಲಾವಿದರು ಬರುವುದರಿಂದ ಅವರ ಹಿತದೃಷ್ಟಿಯಿಂದ ಅವರಿಗೆ ಅಂಗಡಿಗಳನ್ನು ಹಾಕಿ ಕಲಾಕೃತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ.

    ಈ ಚಿತ್ರಸಂತೆಯಲ್ಲಿ ನೂರು ರೂ.ನಿಂದ ಚಿತ್ರಗಳು ಮಾರಾಟವಾಗುತ್ತದೆ ಎಲ್ಲರಿಗೂ ಕೈಗೆಟುಕುವ ದರದಲ್ಲಿ ಕಲಾಕೃತಿಗಳು ಸಿಗುವಂತಾಗಬೇಕು ಎಲ್ಲರ ಮನೆ ಮನೆಗೆ ಒಂದೊಂದು ಕಲಾಕೃತಿಗಳನ್ನು ತೆಗೆದುಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಚಿತ್ರ ಸಂತೆ ಆಯೋಜಿಸಲಾಗಿದೆ ಚಿತ್ರಸಂತೆಯ ದಿನ ಚಿತ್ರಕಲೆ. ಶಿಲ್ಪಕಲೆ ಗ್ರಾಫಿಕ್ ಅಲ್ಲದೆ ವಿವಿಧ ಶೈಲಿಯ ಸಾಂಪ್ರದಾಯಿಕ ಚಿತ್ರಗಳನ್ನು ನೋಡಬಹುದು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.