ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯ ಜನ್ಮದಿನೋತ್ಸವ ಹಿನ್ನೆಲೆ ನಿನ್ನೆ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಮಗೆ ಮತ್ತು ಸಿದ್ದಗಂಗಾ ಮಠಕ್ಕೆ ಹಳೆಯ ಸಂಬಂಧ ಇದೆ ಎಂದು ಹೇಳಿದರು.
ನನ್ನ ಅಜ್ಜಿ, ತಂದೆ, ತಾಯಿ ಇಲ್ಲಿಗೆ ಭೇಟಿ ನೀಡಿದ್ದರು. ಹಾಗಾಗಿ, ನಮ್ಮದು ಮತ್ತು ಮಠದ್ದು ಬಹಳ ಹಳೆಯ ಸಂಬಂಧ. ಇಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯವಾಗುತ್ತಿದೆ ಎಂದರು.
ಮಠದ ಸೇವೆ, ದಾಸೋಹ ಬಹಳಷ್ಟು ಸಂತೋಷ ಉಂಟು ಮಾಡುವಂಥದ್ದು. ಬಸವಣ್ಣನವರು ನೀಡಿದ ಜಾತಿ, ಧರ್ಮ, ದ್ವೇಷ ಹಾಗೂ ಅಸೂಹೆ ಇಲ್ಲದ ಜೀವನವೇ ನಮಗೆ ಮಂತ್ರವಾಗಿದೆ ಎಂದು ಹೇಳಿದರು. ಶಿವಕುಮಾರ ಸ್ವಾಮೀಜಿಗಳು ಸುಮಾರು ವರ್ಷಗಳ ಕಾಲ ನಮಗೆ ದಾರಿದೀಪವಾಗಿದ್ದರು. ನಾನು ಹಿಂದೆ ಮಠಕ್ಕೆ ಭೇಟಿ ಕೊಟ್ಟಾಗ ಶ್ರೀಗಳನ್ನು ಭೇಟಿ ಮಾಡಿದ್ದೆ. ಇಂದು ಸ್ವಾಮೀಜಿ ನಮ್ಮೊಂದಿಗಿಲ್ಲ, ಆದರೆ ನಮಗೆ ಅವರು ಬದುಕುವ ಮಾರ್ಗ ತೋರಿದ್ದಾರೆ. ಆ ಮಾರ್ಗದಲ್ಲಿ ನಾವು ನಡೆಯಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5