nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ವರದಿಯಿಂದ ಎಚ್ಚೆತ್ತು ಆಲನಹಳ್ಳಿ ಹಾಡಿಗೆ ಭೇಟಿ ನೀಡಿದ  ಅಧಿಕಾರಿಗಳು
    ಜಿಲ್ಲಾ ಸುದ್ದಿ January 8, 2022

    ನಮ್ಮತುಮಕೂರು ವರದಿಯಿಂದ ಎಚ್ಚೆತ್ತು ಆಲನಹಳ್ಳಿ ಹಾಡಿಗೆ ಭೇಟಿ ನೀಡಿದ  ಅಧಿಕಾರಿಗಳು

    By adminJanuary 8, 2022No Comments1 Min Read
    hadi

    ಸರಗೂರು:  ಆಲನಹಳ್ಳಿ ಹಾಡಿಯ ಕುರುಬ ಜನಾಂಗದವರಿಗೆ ಸರಿಯಾದ ಮಸಣ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಸಂಸ್ಕಾರಕ್ಕೂ ಪರದಾಡಿದ ಘಟನೆಗೆ ಸಂಬಂಧಿಸಿದಂತೆ ‘ನಮ್ಮತುಮಕೂರು.ಕಾಂ ವರದಿಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

    “ಮಸಣಕ್ಕೂ ಜಾಗ ಇಲ್ಲ: ಆಲನಹಳ್ಳಿ ಹಾಡಿಯ ಜನರ ಕಷ್ಟ ಕೇಳುವವರು ಯಾರು?” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟವಾದ ಸುದ್ದಿಯ ಬೆನ್ನಲ್ಲೇ ತಾಲ್ಲೂಕಿನ ತಹಶೀಲ್ದಾರ್ ಚಲುವರಾಜು ಮತ್ತು ಸಿಬ್ಬಂದಿ ಹಾಡಿಗೆ ಭೇಟಿ ನೀಡಿ ಕುರುಬ ಜನಾಂಗದ ಸಮಸ್ಯೆಯನ್ನು ಆಲಿಸಿದ್ದಾರೆ.


    Provided by
    Provided by
    Provided by

    ಹಾಡಿಗೆ ಆಗಮಿಸಿದ ತಹಶೀಲ್ದಾರ್  ಅವರಿಗೆ  ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿ, ಇವರು ಕಾಡು ಕುರುಬರು, ಕಾಡಿನಿಂದ ನಾಡಿಗೆ ಬಂದು ಜೀವನವನ್ನು ಸಾಗಿಸುತ್ತಿದ್ದಾರೆ. ಇವರಿಗೆ  ಸರ್ಕಾರ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ. ಇವರು ಜೀವನ ಮಾಡಬೇಕಾದರೆ ಕಾಡಿನಿಂದ ಸೌಧೆ ಇತರ ಪದಾರ್ಥಗಳನ್ನು ತೆಗೆದುಕೊಂಡು ಬರುವುದು ಅನಿವಾರ್ಯವಾಗಿದೆ ಎಂದರು.

    ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ಮೃತದೇಹ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ ಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

    hadi

    ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಪ್ರಶ್ನಿಸಿದರು.

     ‘ನಮ್ಮ ತುಮಕೂರು ಮಾಧ್ಯಮ ಪ್ರತಿನಿಧಿ ಜೊತೆಗೆ ಮಾತನಾಡಿದ ತಹಶೀಲ್ದಾರ್, ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೇನೆ.ಇಲ್ಲಿ ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ ಎಂದು ತಿಳಿಸಿದರು.

    ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೇ ಸಮಸ್ಯೆ ಇದೆ ಎಂಬ ಬಗ್ಗೆ ಪ್ರಶ್ನಿಸಿದಾಗ, “ಸರ್ಕಾರಿ ಜಮೀನು ಎಲ್ಲಿದೆಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಸ್ಪಷ್ಟಪಡಿಸಿದರು.

    ವರದಿ: ಚಂದ್ರಹಾದನೂರು

     

    admin
    • Website

    Related Posts

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್ ಹಾಗೂ ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಸಂಯುಕ್ತ…

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.