ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಕೊಳಚೆ ನೀರಿನಲ್ಲೇ ನಡೆದುಕೊಂಡು ಹೋಗುತ್ತಿರುವ ಘಟನೆಯ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಮಾಡಿತ್ತು. ವರದಿಯ ಬೆನ್ನಲ್ಲೇ ಇದೀಗ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಿದ್ದಾರೆ.
ದೊಡ್ಡಹಳ್ಳಿ ರಸ್ತೆಯಲ್ಲಿರುವ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೇ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಸ್ಥಿತಿಯಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ನಮ್ಮತುಮಕೂರು ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಅನುಕೂಲವಾಗುವಂತೆ ತಾತ್ಕಾಲಿಕವಾಗಿ ಚರಂಡಿ ನಿರ್ಮಾಣ ಹಾಗೂ ಸಿಮೆಂಟ್ ಪೈಪ್ ಅಳವಡಿಸಿ, ನೀರು ಮತ್ತು ರಸ್ತೆಯನ್ನು ಪ್ರತ್ಯೇಕಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ.
ನಮ್ಮತುಮಕೂರು ಮಾಧ್ಯಮದ ವರದಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಾವಗಡ ತಾಲೂಕು ಹಾಗೂ ತುಮಕೂರು ಜಿಲ್ಲೆಯಲ್ಲಿ ನಮ್ಮತುಮಕೂರು ವಾಹಿನಿ ಜನಸ್ನೇಹಿ ವರದಿಗಳನ್ನು ಮಾಡಿ ಸಮಾಜಮುಖಿಯಾಗಿದೆ ಎಂದು ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ